AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ಪಡೆದ ಸಿಎಂ ಬಿ.ಎಸ್.ಯಡಿಯೂರಪ್ಪ, ಆರೋಗ್ಯ ಸಚಿವ ಸುಧಾಕರ್​

ರಾಜ್ಯದ ಜನರಿಗೆ ಮಾದರಿಯಾಗಲು ಮುಂದಾದ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ಕೊರೊನಾ ಲಸಿಕೆ ಪಡೆದರು. ನಗರದ ವಿಕ್ಟೋರಿಯಾ ಕ್ಯಾಂಪಸ್​​ನಲ್ಲಿರುವ PMSSY ಆಸ್ಪತ್ರೆಯಲ್ಲಿ ಬಿಎಸ್​ವೈ ಲಸಿಕೆ ಪಡೆದರು.

ಕೊರೊನಾ ಲಸಿಕೆ ಪಡೆದ ಸಿಎಂ ಬಿ.ಎಸ್.ಯಡಿಯೂರಪ್ಪ, ಆರೋಗ್ಯ ಸಚಿವ ಸುಧಾಕರ್​
ಕೊರೊನಾ ಲಸಿಕೆ ಪಡೆದ ಸಿಎಂ ಬಿ.ಎಸ್.ಯಡಿಯೂರಪ್ಪ (ಸಂಗ್ರಹ ಚಿತ್ರ)
KUSHAL V
|

Updated on:Mar 12, 2021 | 5:16 PM

Share

ಬೆಂಗಳೂರು: ರಾಜ್ಯದ ಜನರಿಗೆ ಮಾದರಿಯಾಗಲು ಮುಂದಾದ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ಕೊರೊನಾ ಲಸಿಕೆ ಪಡೆದರು. ನಗರದ ವಿಕ್ಟೋರಿಯಾ ಕ್ಯಾಂಪಸ್​​ನಲ್ಲಿರುವ PMSSY ಆಸ್ಪತ್ರೆಯಲ್ಲಿ ಬಿಎಸ್​ವೈ ಲಸಿಕೆ ಪಡೆದರು. ವ್ಯಾಕ್ಸಿನ್​ ಪಡೆದ ನಂತರ ಸುಮಾರು ಅರ್ಧಗಂಟೆ ವೈದ್ಯರ ನಿಗಾದಲ್ಲಿ ಸಹ ಇದ್ದರು. ಸಿಎಂ ಯಡಿಯೂರಪ್ಪ ಜೊತೆಗೆ ಆರೋಗ್ಯ ಸಚಿವ ಕೆ.ಸುಧಾಕರ್​ ಸಹ ಲಸಿಕೆ ಪಡೆದರು. ಮುಖ್ಯಮಂತ್ರಿಗಳ ಜೊತೆಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಲಸಿಕೆ ಪಡೆದರು.

ಲಸಿಕೆ ಪಡೆದ ಬಳಿಕ ಮಾತನಾಡಿದ ಸಿಎಂ ಯಡಿಯೂರಪ್ಪ ಇಂದು ನಾನು ಕೊರೊನಾ ಲಸಿಕೆಯನ್ನ ಹಾಕಿಸಿಕೊಂಡಿದ್ದೇನೆ. ಪ್ರಧಾನಿಯವರ ತಾಯಿ ಕೂಡ ಲಸಿಕೆ ಪಡೆದಿದ್ದಾರೆ. ಹೀಗಾಗಿ, ನಾನು ರಾಜ್ಯದ ಜನತೆಗೆ ಕರೆ ಕೊಡುತ್ತೇನೆ. ಲಸಿಕೆ ಪಡೆಯುವುದರಿಂದ ಯಾವುದೇ ಸಮಸ್ಯೆ ಆಗಲ್ಲ ಎಂದು ಹೇಳಿದರು.

ಇನ್ನು, ಆರೋಗ್ಯ ಸಚಿವ ಡಾ. ಸುಧಾಕರ್ ಮಾತನಾಡಿ ದೇಶೀಯ ಲಸಿಕೆಯನ್ನ ಸಿಎಂ ಪಡೆದಿದ್ದಾರೆ. ವೈದ್ಯರ ಸಲಹೆಯಂತೆ ಅರ್ಧ ಗಂಟೆ ವಿಶ್ರಾಂತಿ ಪಡೆದರು. ಅವರ ಬಿಪಿ, ಶುಗರ್ ಯಾವುದೂ ಹೆಚ್ಚಾಗಿಲ್ಲ. ಯಾವುದೇ ಅಡ್ಡ ಪರಿಣಾಮ ಸಹ ಆಗಿಲ್ಲ ಎಂದು ಹೇಳಿದರು.

ವ್ಯಾಕ್ಸಿನ್ ಪಡೆದು ಸಿಎಂ ಸ್ಪಷ್ಟ ಸಂದೇಶ ನೀಡಿದ್ದಾರೆ. 60 ವರ್ಷಕ್ಕಿಂತ ಮೇಲ್ಪಟ್ಟವರು ಲಸಿಕೆಯನ್ನ ಹಾಕಿಸಿಕೊಳ್ಳುವಂತೆ ಸಂದೇಶ ನೀಡಿದ್ದಾರೆ. 60 ವರ್ಷ ಮೇಲ್ಪಟ್ಟು ರಾಜ್ಯದಲ್ಲಿ 50 ಲಕ್ಷ ಜನ ಇದ್ದಾರೆ. 45 ವರ್ಷ ಮೇಲ್ಪಟ್ಟವರು ಅನಾರೋಗ್ಯಕ್ಕೆ ಒಳಗಾಗಿದ್ರೆ ಅವರೂ ಲಸಿಕೆ ಪಡೆಯಬಹುದು. ಪ್ರತೀ ದಿನ ಸೋಂಕಿನ ಸಂಖ್ಯೆ ಏರಿಕೆಯಾಗ್ತಿದೆ. ಸದ್ಯ ಸೋಂಕು ಬಹಳ ನಿಯಂತ್ರಣದಲ್ಲಿದೆ. ನೆರೆಯ ರಾಜ್ಯಕ್ಕೆ ಹೋಲಿಸಿಕೊಂಡ್ರೆ ನಮ್ಮಲ್ಲಿ ಕಡಿಮೆ ಇದೆ. ಕೊರೊನಾ ನಿಯಂತ್ರಣಕ್ಕೆ ಸಿಎಂ ಅವರೇ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ಮಾಡಲಿದ್ದಾರೆ ಎಂದು ಸಹ ಹೇಳಿದರು.

ಇತ್ತ, ರಾಜ್ಯದಲ್ಲಿ ಕೊವಿಡ್​ ಆತಂಕ ಮುಂದುವರಿದಿರುವ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ರಾಜ್ಯದ ಎಲ್ಲಾ ಜಿಲ್ಲಾಡಳಿತಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಬಿಎಸ್​ವೈ ಸಂವಾದ ನಡೆಸಲಿದ್ದಾರೆ. ಲಸಿಕೆ, ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಿಎಂ ಸಮಾಲೋಚನೆ ನಡೆಸಲಿದ್ದಾರೆ.

ಇದನ್ನೂ ಓದಿ: ಕನ್ನಡಿಗ ಗೂಂಡಾಗಳಿಗೆ ಧಿಕ್ಕಾರ -ಬೆಳಗಾವಿಯಲ್ಲಿ MES, ಶಿವಸೇನೆ ಕಾರ್ಯಕರ್ತರ ನಾಡದ್ರೋಹಿ ಘೋಷಣೆ

Published On - 5:15 pm, Fri, 12 March 21

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್