AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ಪಡೆದ ಸಿಎಂ ಬಿ.ಎಸ್.ಯಡಿಯೂರಪ್ಪ, ಆರೋಗ್ಯ ಸಚಿವ ಸುಧಾಕರ್​

ರಾಜ್ಯದ ಜನರಿಗೆ ಮಾದರಿಯಾಗಲು ಮುಂದಾದ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ಕೊರೊನಾ ಲಸಿಕೆ ಪಡೆದರು. ನಗರದ ವಿಕ್ಟೋರಿಯಾ ಕ್ಯಾಂಪಸ್​​ನಲ್ಲಿರುವ PMSSY ಆಸ್ಪತ್ರೆಯಲ್ಲಿ ಬಿಎಸ್​ವೈ ಲಸಿಕೆ ಪಡೆದರು.

ಕೊರೊನಾ ಲಸಿಕೆ ಪಡೆದ ಸಿಎಂ ಬಿ.ಎಸ್.ಯಡಿಯೂರಪ್ಪ, ಆರೋಗ್ಯ ಸಚಿವ ಸುಧಾಕರ್​
ಕೊರೊನಾ ಲಸಿಕೆ ಪಡೆದ ಸಿಎಂ ಬಿ.ಎಸ್.ಯಡಿಯೂರಪ್ಪ (ಸಂಗ್ರಹ ಚಿತ್ರ)
KUSHAL V
|

Updated on:Mar 12, 2021 | 5:16 PM

Share

ಬೆಂಗಳೂರು: ರಾಜ್ಯದ ಜನರಿಗೆ ಮಾದರಿಯಾಗಲು ಮುಂದಾದ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ಕೊರೊನಾ ಲಸಿಕೆ ಪಡೆದರು. ನಗರದ ವಿಕ್ಟೋರಿಯಾ ಕ್ಯಾಂಪಸ್​​ನಲ್ಲಿರುವ PMSSY ಆಸ್ಪತ್ರೆಯಲ್ಲಿ ಬಿಎಸ್​ವೈ ಲಸಿಕೆ ಪಡೆದರು. ವ್ಯಾಕ್ಸಿನ್​ ಪಡೆದ ನಂತರ ಸುಮಾರು ಅರ್ಧಗಂಟೆ ವೈದ್ಯರ ನಿಗಾದಲ್ಲಿ ಸಹ ಇದ್ದರು. ಸಿಎಂ ಯಡಿಯೂರಪ್ಪ ಜೊತೆಗೆ ಆರೋಗ್ಯ ಸಚಿವ ಕೆ.ಸುಧಾಕರ್​ ಸಹ ಲಸಿಕೆ ಪಡೆದರು. ಮುಖ್ಯಮಂತ್ರಿಗಳ ಜೊತೆಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಲಸಿಕೆ ಪಡೆದರು.

ಲಸಿಕೆ ಪಡೆದ ಬಳಿಕ ಮಾತನಾಡಿದ ಸಿಎಂ ಯಡಿಯೂರಪ್ಪ ಇಂದು ನಾನು ಕೊರೊನಾ ಲಸಿಕೆಯನ್ನ ಹಾಕಿಸಿಕೊಂಡಿದ್ದೇನೆ. ಪ್ರಧಾನಿಯವರ ತಾಯಿ ಕೂಡ ಲಸಿಕೆ ಪಡೆದಿದ್ದಾರೆ. ಹೀಗಾಗಿ, ನಾನು ರಾಜ್ಯದ ಜನತೆಗೆ ಕರೆ ಕೊಡುತ್ತೇನೆ. ಲಸಿಕೆ ಪಡೆಯುವುದರಿಂದ ಯಾವುದೇ ಸಮಸ್ಯೆ ಆಗಲ್ಲ ಎಂದು ಹೇಳಿದರು.

ಇನ್ನು, ಆರೋಗ್ಯ ಸಚಿವ ಡಾ. ಸುಧಾಕರ್ ಮಾತನಾಡಿ ದೇಶೀಯ ಲಸಿಕೆಯನ್ನ ಸಿಎಂ ಪಡೆದಿದ್ದಾರೆ. ವೈದ್ಯರ ಸಲಹೆಯಂತೆ ಅರ್ಧ ಗಂಟೆ ವಿಶ್ರಾಂತಿ ಪಡೆದರು. ಅವರ ಬಿಪಿ, ಶುಗರ್ ಯಾವುದೂ ಹೆಚ್ಚಾಗಿಲ್ಲ. ಯಾವುದೇ ಅಡ್ಡ ಪರಿಣಾಮ ಸಹ ಆಗಿಲ್ಲ ಎಂದು ಹೇಳಿದರು.

ವ್ಯಾಕ್ಸಿನ್ ಪಡೆದು ಸಿಎಂ ಸ್ಪಷ್ಟ ಸಂದೇಶ ನೀಡಿದ್ದಾರೆ. 60 ವರ್ಷಕ್ಕಿಂತ ಮೇಲ್ಪಟ್ಟವರು ಲಸಿಕೆಯನ್ನ ಹಾಕಿಸಿಕೊಳ್ಳುವಂತೆ ಸಂದೇಶ ನೀಡಿದ್ದಾರೆ. 60 ವರ್ಷ ಮೇಲ್ಪಟ್ಟು ರಾಜ್ಯದಲ್ಲಿ 50 ಲಕ್ಷ ಜನ ಇದ್ದಾರೆ. 45 ವರ್ಷ ಮೇಲ್ಪಟ್ಟವರು ಅನಾರೋಗ್ಯಕ್ಕೆ ಒಳಗಾಗಿದ್ರೆ ಅವರೂ ಲಸಿಕೆ ಪಡೆಯಬಹುದು. ಪ್ರತೀ ದಿನ ಸೋಂಕಿನ ಸಂಖ್ಯೆ ಏರಿಕೆಯಾಗ್ತಿದೆ. ಸದ್ಯ ಸೋಂಕು ಬಹಳ ನಿಯಂತ್ರಣದಲ್ಲಿದೆ. ನೆರೆಯ ರಾಜ್ಯಕ್ಕೆ ಹೋಲಿಸಿಕೊಂಡ್ರೆ ನಮ್ಮಲ್ಲಿ ಕಡಿಮೆ ಇದೆ. ಕೊರೊನಾ ನಿಯಂತ್ರಣಕ್ಕೆ ಸಿಎಂ ಅವರೇ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ಮಾಡಲಿದ್ದಾರೆ ಎಂದು ಸಹ ಹೇಳಿದರು.

ಇತ್ತ, ರಾಜ್ಯದಲ್ಲಿ ಕೊವಿಡ್​ ಆತಂಕ ಮುಂದುವರಿದಿರುವ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ರಾಜ್ಯದ ಎಲ್ಲಾ ಜಿಲ್ಲಾಡಳಿತಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಬಿಎಸ್​ವೈ ಸಂವಾದ ನಡೆಸಲಿದ್ದಾರೆ. ಲಸಿಕೆ, ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಿಎಂ ಸಮಾಲೋಚನೆ ನಡೆಸಲಿದ್ದಾರೆ.

ಇದನ್ನೂ ಓದಿ: ಕನ್ನಡಿಗ ಗೂಂಡಾಗಳಿಗೆ ಧಿಕ್ಕಾರ -ಬೆಳಗಾವಿಯಲ್ಲಿ MES, ಶಿವಸೇನೆ ಕಾರ್ಯಕರ್ತರ ನಾಡದ್ರೋಹಿ ಘೋಷಣೆ

Published On - 5:15 pm, Fri, 12 March 21

Follow Us
ಇಂದು ಈ ರಾಶಿಯವರಿಗೆ ದೂರದ ಪ್ರಯಾಣ ಯೋಗ
ಇಂದು ಈ ರಾಶಿಯವರಿಗೆ ದೂರದ ಪ್ರಯಾಣ ಯೋಗ
ಕೊಲಂಬಿಯಾದಲ್ಲಿ ಭಾರೀ ದುರಂತ; 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ
ಕೊಲಂಬಿಯಾದಲ್ಲಿ ಭಾರೀ ದುರಂತ; 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ