AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ಪಡೆದ ಸಿಎಂ ಬಿ.ಎಸ್.ಯಡಿಯೂರಪ್ಪ, ಆರೋಗ್ಯ ಸಚಿವ ಸುಧಾಕರ್​

ರಾಜ್ಯದ ಜನರಿಗೆ ಮಾದರಿಯಾಗಲು ಮುಂದಾದ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ಕೊರೊನಾ ಲಸಿಕೆ ಪಡೆದರು. ನಗರದ ವಿಕ್ಟೋರಿಯಾ ಕ್ಯಾಂಪಸ್​​ನಲ್ಲಿರುವ PMSSY ಆಸ್ಪತ್ರೆಯಲ್ಲಿ ಬಿಎಸ್​ವೈ ಲಸಿಕೆ ಪಡೆದರು.

ಕೊರೊನಾ ಲಸಿಕೆ ಪಡೆದ ಸಿಎಂ ಬಿ.ಎಸ್.ಯಡಿಯೂರಪ್ಪ, ಆರೋಗ್ಯ ಸಚಿವ ಸುಧಾಕರ್​
ಕೊರೊನಾ ಲಸಿಕೆ ಪಡೆದ ಸಿಎಂ ಬಿ.ಎಸ್.ಯಡಿಯೂರಪ್ಪ (ಸಂಗ್ರಹ ಚಿತ್ರ)
KUSHAL V
|

Updated on:Mar 12, 2021 | 5:16 PM

Share

ಬೆಂಗಳೂರು: ರಾಜ್ಯದ ಜನರಿಗೆ ಮಾದರಿಯಾಗಲು ಮುಂದಾದ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ಕೊರೊನಾ ಲಸಿಕೆ ಪಡೆದರು. ನಗರದ ವಿಕ್ಟೋರಿಯಾ ಕ್ಯಾಂಪಸ್​​ನಲ್ಲಿರುವ PMSSY ಆಸ್ಪತ್ರೆಯಲ್ಲಿ ಬಿಎಸ್​ವೈ ಲಸಿಕೆ ಪಡೆದರು. ವ್ಯಾಕ್ಸಿನ್​ ಪಡೆದ ನಂತರ ಸುಮಾರು ಅರ್ಧಗಂಟೆ ವೈದ್ಯರ ನಿಗಾದಲ್ಲಿ ಸಹ ಇದ್ದರು. ಸಿಎಂ ಯಡಿಯೂರಪ್ಪ ಜೊತೆಗೆ ಆರೋಗ್ಯ ಸಚಿವ ಕೆ.ಸುಧಾಕರ್​ ಸಹ ಲಸಿಕೆ ಪಡೆದರು. ಮುಖ್ಯಮಂತ್ರಿಗಳ ಜೊತೆಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಲಸಿಕೆ ಪಡೆದರು.

ಲಸಿಕೆ ಪಡೆದ ಬಳಿಕ ಮಾತನಾಡಿದ ಸಿಎಂ ಯಡಿಯೂರಪ್ಪ ಇಂದು ನಾನು ಕೊರೊನಾ ಲಸಿಕೆಯನ್ನ ಹಾಕಿಸಿಕೊಂಡಿದ್ದೇನೆ. ಪ್ರಧಾನಿಯವರ ತಾಯಿ ಕೂಡ ಲಸಿಕೆ ಪಡೆದಿದ್ದಾರೆ. ಹೀಗಾಗಿ, ನಾನು ರಾಜ್ಯದ ಜನತೆಗೆ ಕರೆ ಕೊಡುತ್ತೇನೆ. ಲಸಿಕೆ ಪಡೆಯುವುದರಿಂದ ಯಾವುದೇ ಸಮಸ್ಯೆ ಆಗಲ್ಲ ಎಂದು ಹೇಳಿದರು.

ಇನ್ನು, ಆರೋಗ್ಯ ಸಚಿವ ಡಾ. ಸುಧಾಕರ್ ಮಾತನಾಡಿ ದೇಶೀಯ ಲಸಿಕೆಯನ್ನ ಸಿಎಂ ಪಡೆದಿದ್ದಾರೆ. ವೈದ್ಯರ ಸಲಹೆಯಂತೆ ಅರ್ಧ ಗಂಟೆ ವಿಶ್ರಾಂತಿ ಪಡೆದರು. ಅವರ ಬಿಪಿ, ಶುಗರ್ ಯಾವುದೂ ಹೆಚ್ಚಾಗಿಲ್ಲ. ಯಾವುದೇ ಅಡ್ಡ ಪರಿಣಾಮ ಸಹ ಆಗಿಲ್ಲ ಎಂದು ಹೇಳಿದರು.

ವ್ಯಾಕ್ಸಿನ್ ಪಡೆದು ಸಿಎಂ ಸ್ಪಷ್ಟ ಸಂದೇಶ ನೀಡಿದ್ದಾರೆ. 60 ವರ್ಷಕ್ಕಿಂತ ಮೇಲ್ಪಟ್ಟವರು ಲಸಿಕೆಯನ್ನ ಹಾಕಿಸಿಕೊಳ್ಳುವಂತೆ ಸಂದೇಶ ನೀಡಿದ್ದಾರೆ. 60 ವರ್ಷ ಮೇಲ್ಪಟ್ಟು ರಾಜ್ಯದಲ್ಲಿ 50 ಲಕ್ಷ ಜನ ಇದ್ದಾರೆ. 45 ವರ್ಷ ಮೇಲ್ಪಟ್ಟವರು ಅನಾರೋಗ್ಯಕ್ಕೆ ಒಳಗಾಗಿದ್ರೆ ಅವರೂ ಲಸಿಕೆ ಪಡೆಯಬಹುದು. ಪ್ರತೀ ದಿನ ಸೋಂಕಿನ ಸಂಖ್ಯೆ ಏರಿಕೆಯಾಗ್ತಿದೆ. ಸದ್ಯ ಸೋಂಕು ಬಹಳ ನಿಯಂತ್ರಣದಲ್ಲಿದೆ. ನೆರೆಯ ರಾಜ್ಯಕ್ಕೆ ಹೋಲಿಸಿಕೊಂಡ್ರೆ ನಮ್ಮಲ್ಲಿ ಕಡಿಮೆ ಇದೆ. ಕೊರೊನಾ ನಿಯಂತ್ರಣಕ್ಕೆ ಸಿಎಂ ಅವರೇ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ಮಾಡಲಿದ್ದಾರೆ ಎಂದು ಸಹ ಹೇಳಿದರು.

ಇತ್ತ, ರಾಜ್ಯದಲ್ಲಿ ಕೊವಿಡ್​ ಆತಂಕ ಮುಂದುವರಿದಿರುವ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ರಾಜ್ಯದ ಎಲ್ಲಾ ಜಿಲ್ಲಾಡಳಿತಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಬಿಎಸ್​ವೈ ಸಂವಾದ ನಡೆಸಲಿದ್ದಾರೆ. ಲಸಿಕೆ, ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಿಎಂ ಸಮಾಲೋಚನೆ ನಡೆಸಲಿದ್ದಾರೆ.

ಇದನ್ನೂ ಓದಿ: ಕನ್ನಡಿಗ ಗೂಂಡಾಗಳಿಗೆ ಧಿಕ್ಕಾರ -ಬೆಳಗಾವಿಯಲ್ಲಿ MES, ಶಿವಸೇನೆ ಕಾರ್ಯಕರ್ತರ ನಾಡದ್ರೋಹಿ ಘೋಷಣೆ

Published On - 5:15 pm, Fri, 12 March 21

ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್