AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ಬಲಿಯಾದ ಸಿಬ್ಬಂದಿಗಳ 7 ಕುಟುಂಬಸ್ಥರಿಗೆ ತಲಾ ₹ 30 ಲಕ್ಷ ಚೆಕ್ ವಿತರಿಸಿದ ಸಿಎಂ ಯಡಿಯೂರಪ್ಪ

ಮಹಾಮಾರಿ ಕೋವಿಡ್ ಹಾವಳಿ ಸಂದರ್ಭದಲ್ಲಿ ಮೃತಪಟ್ಟ ರಾಜ್ಯ ರಸ್ತೆ ಸಾರಿಗೆ ಇಲಾಖೆಯ ಸಿಬ್ಬಂದಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರ ಇದೀಗ ಆರ್ಥಿಕ ನೆರವು ಹಸ್ತಾಂತರಿಸಿದೆ. 7 ಕುಟುಂಬಸ್ಥರಿಗೆ ಚೆಕ್ ವಿತರಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ಅವರು ತಲಾ 30 ಲಕ್ಷ ರೂಪಾಯಿ ಮೌಲ್ಯದ ಚೆಕ್ ವಿತರಿಸಿದ್ದಾರೆ.

ಕೊರೊನಾಗೆ ಬಲಿಯಾದ ಸಿಬ್ಬಂದಿಗಳ 7 ಕುಟುಂಬಸ್ಥರಿಗೆ ತಲಾ ₹ 30 ಲಕ್ಷ ಚೆಕ್ ವಿತರಿಸಿದ ಸಿಎಂ ಯಡಿಯೂರಪ್ಪ
ರಸ್ತೆ ಸಾರಿಗೆ ಸಂಸ್ಥೆಯಿಂದ "ನಮ್ಮ ಕಾರ್ಗೋ" ಸೇವೆ ಲೋಕಾರ್ಪಣೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: sandhya thejappa|

Updated on:Feb 26, 2021 | 11:28 AM

Share

ಬೆಂಗಳೂರು: ಮಹಾಮಾರಿ ಕೋವಿಡ್ ಹಾವಳಿ ಸಂದರ್ಭದಲ್ಲಿ ಮೃತಪಟ್ಟ ರಾಜ್ಯ ರಸ್ತೆ ಸಾರಿಗೆ ಇಲಾಖೆಯ ಸಿಬ್ಬಂದಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರ ಇದೀಗ ಆರ್ಥಿಕ ನೆರವು ಹಸ್ತಾಂತರಿಸಿದೆ. 7 ಕುಟುಂಬಸ್ಥರಿಗೆ ಚೆಕ್ ವಿತರಿಸಿದ್ದಾರೆ. ಮುಖ್ಯಮಂತ್ರಿ ಬಿ. ಎಸ್.​ ಯಡಿಯೂರಪ್ಪ ಅವರು ತಲಾ 30 ಲಕ್ಷ ರೂಪಾಯಿ ಮೌಲ್ಯದ ಚೆಕ್ ವಿತರಿಸಿದ್ದಾರೆ.

ರಸ್ತೆ ಸಾರಿಗೆ ಸಂಸ್ಥೆಯಿಂದ “ನಮ್ಮ ಕಾರ್ಗೋ” ಸೇವೆ ಲೋಕಾರ್ಪಣೆಗೊಂಡಿದ್ದು, ವಿಧಾನಸೌಧದಲ್ಲಿ ನಡೆದ ಕಾರ್ಗೋ ಸೇವೆ ಉದ್ಘಾಟನೆ ಸಮಾರಂಭದಲ್ಲಿ ಸಿಎಂ ಯಡಿಯೂರಪ್ಪ ಈ ಚೆ​ಕ್​ಗಳನ್ನು ವಿತರಿಸಿದರು. ಸಾರಿಗೆ ಸಚಿವ ಲಕ್ಷ್ಮಣ ಸವದಿ, ಆಹಾರ ಸಚಿವ ಉಮೇಶ್ ಕತ್ತಿ, ಆರೋಗ್ಯ ಸಚಿವ ಡಾ ಕೆ ಸುಧಾಕರ್, ಕೆಎಸ್​ಆರ್​ಟಿಸಿ ಎಂಡಿ ಶಿವಯೋಗಿ ಕಳಸದ್, ಬಿಎಂಟಿಸಿ ಎಂಡಿ ಶಿಖಾ ಉಪಸ್ಥಿತರಿದ್ದರು.

ಕೊರೊನಾದಿಂದ ಸಾರಿಗೆ ಸಂಸ್ಥೆಗಳು ನಷ್ಟ ಅನುಭವಿಸಿದವು. ಇದರ ಮಧ್ಯೆ ಸಾರಿಗೆ ಇಲಾಖೆ ಕಾರ್ಗೋ ಸೇವೆ ಒದಗಿಸ್ತಿದೆ. ‘ನಮ್ಮ ಕಾರ್ಗೋ’ ಸೇವೆಯಿಂದ ಸಾರಿಗೆ ಸಂಸ್ಥೆಗೆ ಲಾಭವಾಗಲಿದೆ ಎಂದು ಬೆಂಗಳೂರಿನಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದರು.

ಸಾರಿಗೆ ಸಿಬ್ಬಂದಿ ಜೀವ ಪಣಕ್ಕಿಟ್ಟು ಕೆಲಸ ಮಾಡಿದ್ದಾರೆ. ಕೊರೊನಾ ಸಂದರ್ಭದಲ್ಲಿ ಜೀವ ಪಣಕ್ಕಿಟ್ಟು ಕೆಲಸ ಮಾಡಿದ ಸಾರಿಗೆ ಇಲಾಖೆ ಸಿಬ್ಬಂದಿಯ ಜೊತೆ ಇಲಾಖೆ ಇದೆ. ಕೊರೊನಾಗೆ ಬಲಿಯಾದ ಸಿಬ್ಬಂದಿಗೆ ತಲಾ $ 30 ಲಕ್ಷ ಪರಿಹಾರ ವಿತರಿಸಿದ್ದೇವೆ ಎಂದು ಸವದಿ ತಿಳಿಸಿದರು.

ಹಳೆಯ ಬಸ್‌ಗಳು ಇನ್ನು ಸಂಚಾರಿ ರಕ್ತನಿಧಿ, ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರಿಗಾಗಿ ಸ್ನಾನಗೃಹಗಳಾಗಲಿವೆ: ಹಳೇ ಬಸ್ ಮಾರಿದರೆ 1 ರಿಂದ 1.5 ಲಕ್ಷ ರೂ. ಬರುತ್ತಿತ್ತು. ಅದರ ಬದಲು ಆ ಬಸ್‌ಗಳನ್ನು ಸಂಚಾರಿ ರಕ್ತನಿಧಿ ಮಾಡುತ್ತಿದ್ದೇವೆ. ಗುಜರಿಗೆ ಹೋಗುವ ಬಸ್‌ಗಳನ್ನೂ ಬಳಕೆ ಮಾಡಿಕೊಳ್ತಿದ್ದೇವೆ. ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರಿಗಾಗಿ ಸ್ನಾನಗೃಹವನ್ನಾಗಿಯೂ, ಬೇಬಿ ಕೇರ್ ಸೆಂಟರ್‌ಗಳಾಗಿಯೂ ಮಾರ್ಪಾಡು ಮಾಡುತ್ತೇವೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಇದೇ ಸಂದರ್ಭದಲ್ಲಿ ತಿಳಿಸಿದರು.

ಇದನ್ನೂ ಓದಿ: ಸಂಪರ್ಕಕ್ಕೆ ಸಿಗುತ್ತಿಲ್ಲ 2 ಸಾವಿರ BMTC ಸಿಬ್ಬಂದಿ.. ಶಿಸ್ತು ಕ್ರಮ ಕೈಗೊಳ್ಳಲು ನಿಗಮಾ ನಿರ್ಧಾರ

ಇದನ್ನೂ ಓದಿ: ಲಂಡನ್‌ನಿಂದ ಬಂದವರಲ್ಲಿ ಒಬ್ಬರಿಗೆ ಕೊರೊನಾ ಪಾಸಿಟಿವ್: ಉಳಿದವರು ಸಾರ್ವಜನಿಕ ಸಾರಿಗೆ ಬಳಸಿ ಮನೆಗೆ ವಾಪಸ್!

Published On - 11:12 am, Fri, 26 February 21

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು