AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿ.ಎಸ್​. ಯಡಿಯೂರಪ್ಪಗೆ ಇಂದು ಡಬಲ್​ ಹಿನ್ನಡೆ: ಮುಖ್ಯಮಂತ್ರಿಗೆ ಎದುರಾಗುತ್ತಾ ಭೂ ಕಂಟಕ?

ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ತಮ್ಮ ಕಾನೂನು ಹೋರಾಟದಲ್ಲಿ ಇಂದು ಡಬಲ್​ ಹಿನ್ನಡೆ ಎದುರಿಸಿದ್ದಾರೆ. ಸಿಎಂ BSY ವಿರುದ್ಧದ ಡಿನೋಟಿಫಿಕೇಷನ್ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಲ್ಲಿಸಿದ್ದ ರಿಟ್ ಅರ್ಜಿ ವಜಾಗೊಂಡಿದೆ.

ಬಿ.ಎಸ್​. ಯಡಿಯೂರಪ್ಪಗೆ ಇಂದು ಡಬಲ್​ ಹಿನ್ನಡೆ: ಮುಖ್ಯಮಂತ್ರಿಗೆ ಎದುರಾಗುತ್ತಾ ಭೂ ಕಂಟಕ?
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
KUSHAL V
| Edited By: |

Updated on: Jan 05, 2021 | 4:23 PM

Share

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ತಮ್ಮ ಕಾನೂನು ಹೋರಾಟದಲ್ಲಿ ಇಂದು ಡಬಲ್​ ಹಿನ್ನಡೆ ಎದುರಿಸಿದ್ದಾರೆ. ಸಿಎಂ BSY ವಿರುದ್ಧದ ಡಿನೋಟಿಫಿಕೇಷನ್ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಲ್ಲಿಸಿದ್ದ ರಿಟ್ ಅರ್ಜಿ ವಜಾಗೊಂಡಿದೆ.

ಪ್ರಕರಣದ FIR ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ಈ ಮೂಲಕ, ಲೋಕಾಯುಕ್ತ ಪೊಲೀಸರ ತನಿಖೆಗೆ ಹೈಕೋರ್ಟ್ ಗ್ರೀನ್‌ಸಿಗ್ನಲ್ ಕೊಟ್ಟಿದೆ. ಜೊತೆಗೆ, BSY ವಿರುದ್ಧ ತನಿಖೆ ಮುಂದುವರಿಸಲು ಹೈಕೋರ್ಟ್ ಸೂಚನೆ ನೀಡಿದೆ.

ಇದಲ್ಲದೆ, ಹೈಕೋರ್ಟ್​ ಅರ್ಜಿದಾರ ಯಡಿಯೂರಪ್ಪಗೆ 25 ಸಾವಿರ ರೂಪಾಯಿ ‌ದಂಡ ಸಹ ವಿಧಿಸಿ, ನ್ಯಾ. ಜಾನ್ ಮೈಕೆಲ್ ಕುನ್ಹಾ ಆದೇಶ ಹೊರಡಿಸಿದ್ದಾರೆ.

ಏನಿದು ಪ್ರಕರಣ? ಗಂಗೇನಹಳ್ಳಿಯಲ್ಲಿ 1.11 ಎಕರೆ ಡಿನೋಟಿಫಿಕೇಷನ್ ಆರೋಪದಡಿ H.D. ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅರ್ಜಿ ಸಲ್ಲಿಸಲಾಗಿತ್ತು. ಜೊತೆಗೆ, ಯಡಿಯೂರಪ್ಪ ಮುಖ್ಯಮಂತ್ರಿ ಆದ ನಂತರ ಡಿನೋಟಿಫಿಕೇಷನ್ ಮಾಡಲಾಗಿತ್ತು.

ಮತ್ತೊಂದು ಪ್ರಕರಣದಲ್ಲೂ ಬಿಎಸ್‌ವೈಗೆ ಹಿನ್ನಡೆ ಇದಲ್ಲದೆ, ಮತ್ತೊಂದು ಪ್ರಕರಣದಲ್ಲೂ ಸಿಎಂ BSYಗೆ ಹಿನ್ನಡೆ ಆಗಿದೆ. ಮಾಜಿ ಸಚಿವ ಮುರುಗೇಶ್ ನಿರಾಣಿ ಹಾಗೂ ಯಡಿಯೂರಪ್ಪ ವಿರುದ್ಧ ಆಲಂ ಪಾಷಾ ಎಂಬುವವರು ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ಅಂಗೀಕರಿಸಿದೆ. ಜೊತೆಗೆ, ಖಾಸಗಿ ದೂರು ಮುಂದುವರಿಸಲು ಹೈಕೋರ್ಟ್ ಆದೇಶಿಸಿದೆ.

2014ರಲ್ಲಿ ಮುರುಗೇಶ್ ನಿರಾಣಿ ವಿರುದ್ಧ ಆಲಂ ಪಾಷಾ ಎಂಬುವವರು ಖಾಸಗಿ ದೂರು ದಾಖಲಿಸಿದ್ದರು. ಆಲಂ ಪಾಷಾ ಕಂಪನಿಗೆ ನೀಡಿದ್ದ ಜಮೀನು ವಾಪಸ್ ಪಡೆಯಲು ಅಂದಿನ‌ ಸಿಎಂ ನೇತೃತ್ವದ ಸಮಿತಿ ತೀರ್ಮಾನಿಸಿತ್ತು. ಈ ನಡುವೆ, ನಕಲಿ ದಾಖಲೆ ಸೃಷ್ಟಿಸಿ ಜಮೀನನ್ನು ಹಿಂಪಡೆಯಲಾಗಿತ್ತು ಎಂದು ಆರೋಪಿಸಿ ಆಲಂ ಪಾಷಾ ಖಾಸಗಿ ದೂರು ದಾಖಲಿಸಿದ್ದರು.

ಅಂದ ಹಾಗೆ, ಪೂರ್ವಾನುಮತಿ ಇಲ್ಲದ ಕಾರಣ ದೂರಿನ ವಿಚಾರಣೆಗೆ ಕೋರ್ಟ್ ನಿರಾಕರಿಸಿತ್ತು. ಹಾಗಾಗಿ, ‌ಇದನ್ನು ಪ್ರಶ್ನಿಸಿ ಆಲಂ ಪಾಷಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇದೀಗ, ಆಲಂ ಪಾಷಾ ಅರ್ಜಿಯನ್ನು ಹೈಕೋರ್ಟ್ ಅಂಗೀಕರಿಸಿದೆ. ಜೊತೆಗೆ, ಪೂರ್ವಾನುಮತಿ ಅಗತ್ಯವಿಲ್ಲವೆಂದು ನ್ಯಾ.ಜಾನ್ ಮೈಕೆಲ್ ಕುನ್ಹಾ ಅಭಿಪ್ರಾಯ ಪಟ್ಟಿದ್ದಾರೆ. ಇದಲ್ಲದೆ, BSY ಮತ್ತು ನಿರಾಣಿ ವಿರುದ್ಧ ಪ್ರಕರಣ ಮುಂದುವರಿಕೆಗೆ ಆದೇಶ ಸಹ ನೀಡಿದ್ದಾರೆ.

ವಿನಯ್ ಕುಲಕರ್ಣಿ ಬಿಡುಗಡೆಗಾಗಿ ವಿಶೇಷ ಪೂಜೆ ಸಲ್ಲಿಕೆ

ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
2026 ಮಿಥುನ ರಾಶಿಯವರಿಗೆ ನಿರ್ಣಾಯಕ ವರ್ಷ; ವಾರ್ಷಿಕ ಭವಿಷ್ಯ ಇಲ್ಲಿದೆ
2026 ಮಿಥುನ ರಾಶಿಯವರಿಗೆ ನಿರ್ಣಾಯಕ ವರ್ಷ; ವಾರ್ಷಿಕ ಭವಿಷ್ಯ ಇಲ್ಲಿದೆ