AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿ.ಎಸ್​. ಯಡಿಯೂರಪ್ಪಗೆ ಇಂದು ಡಬಲ್​ ಹಿನ್ನಡೆ: ಮುಖ್ಯಮಂತ್ರಿಗೆ ಎದುರಾಗುತ್ತಾ ಭೂ ಕಂಟಕ?

ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ತಮ್ಮ ಕಾನೂನು ಹೋರಾಟದಲ್ಲಿ ಇಂದು ಡಬಲ್​ ಹಿನ್ನಡೆ ಎದುರಿಸಿದ್ದಾರೆ. ಸಿಎಂ BSY ವಿರುದ್ಧದ ಡಿನೋಟಿಫಿಕೇಷನ್ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಲ್ಲಿಸಿದ್ದ ರಿಟ್ ಅರ್ಜಿ ವಜಾಗೊಂಡಿದೆ.

ಬಿ.ಎಸ್​. ಯಡಿಯೂರಪ್ಪಗೆ ಇಂದು ಡಬಲ್​ ಹಿನ್ನಡೆ: ಮುಖ್ಯಮಂತ್ರಿಗೆ ಎದುರಾಗುತ್ತಾ ಭೂ ಕಂಟಕ?
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
KUSHAL V
| Edited By: |

Updated on: Jan 05, 2021 | 4:23 PM

Share

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ತಮ್ಮ ಕಾನೂನು ಹೋರಾಟದಲ್ಲಿ ಇಂದು ಡಬಲ್​ ಹಿನ್ನಡೆ ಎದುರಿಸಿದ್ದಾರೆ. ಸಿಎಂ BSY ವಿರುದ್ಧದ ಡಿನೋಟಿಫಿಕೇಷನ್ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಲ್ಲಿಸಿದ್ದ ರಿಟ್ ಅರ್ಜಿ ವಜಾಗೊಂಡಿದೆ.

ಪ್ರಕರಣದ FIR ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ಈ ಮೂಲಕ, ಲೋಕಾಯುಕ್ತ ಪೊಲೀಸರ ತನಿಖೆಗೆ ಹೈಕೋರ್ಟ್ ಗ್ರೀನ್‌ಸಿಗ್ನಲ್ ಕೊಟ್ಟಿದೆ. ಜೊತೆಗೆ, BSY ವಿರುದ್ಧ ತನಿಖೆ ಮುಂದುವರಿಸಲು ಹೈಕೋರ್ಟ್ ಸೂಚನೆ ನೀಡಿದೆ.

ಇದಲ್ಲದೆ, ಹೈಕೋರ್ಟ್​ ಅರ್ಜಿದಾರ ಯಡಿಯೂರಪ್ಪಗೆ 25 ಸಾವಿರ ರೂಪಾಯಿ ‌ದಂಡ ಸಹ ವಿಧಿಸಿ, ನ್ಯಾ. ಜಾನ್ ಮೈಕೆಲ್ ಕುನ್ಹಾ ಆದೇಶ ಹೊರಡಿಸಿದ್ದಾರೆ.

ಏನಿದು ಪ್ರಕರಣ? ಗಂಗೇನಹಳ್ಳಿಯಲ್ಲಿ 1.11 ಎಕರೆ ಡಿನೋಟಿಫಿಕೇಷನ್ ಆರೋಪದಡಿ H.D. ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅರ್ಜಿ ಸಲ್ಲಿಸಲಾಗಿತ್ತು. ಜೊತೆಗೆ, ಯಡಿಯೂರಪ್ಪ ಮುಖ್ಯಮಂತ್ರಿ ಆದ ನಂತರ ಡಿನೋಟಿಫಿಕೇಷನ್ ಮಾಡಲಾಗಿತ್ತು.

ಮತ್ತೊಂದು ಪ್ರಕರಣದಲ್ಲೂ ಬಿಎಸ್‌ವೈಗೆ ಹಿನ್ನಡೆ ಇದಲ್ಲದೆ, ಮತ್ತೊಂದು ಪ್ರಕರಣದಲ್ಲೂ ಸಿಎಂ BSYಗೆ ಹಿನ್ನಡೆ ಆಗಿದೆ. ಮಾಜಿ ಸಚಿವ ಮುರುಗೇಶ್ ನಿರಾಣಿ ಹಾಗೂ ಯಡಿಯೂರಪ್ಪ ವಿರುದ್ಧ ಆಲಂ ಪಾಷಾ ಎಂಬುವವರು ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ಅಂಗೀಕರಿಸಿದೆ. ಜೊತೆಗೆ, ಖಾಸಗಿ ದೂರು ಮುಂದುವರಿಸಲು ಹೈಕೋರ್ಟ್ ಆದೇಶಿಸಿದೆ.

2014ರಲ್ಲಿ ಮುರುಗೇಶ್ ನಿರಾಣಿ ವಿರುದ್ಧ ಆಲಂ ಪಾಷಾ ಎಂಬುವವರು ಖಾಸಗಿ ದೂರು ದಾಖಲಿಸಿದ್ದರು. ಆಲಂ ಪಾಷಾ ಕಂಪನಿಗೆ ನೀಡಿದ್ದ ಜಮೀನು ವಾಪಸ್ ಪಡೆಯಲು ಅಂದಿನ‌ ಸಿಎಂ ನೇತೃತ್ವದ ಸಮಿತಿ ತೀರ್ಮಾನಿಸಿತ್ತು. ಈ ನಡುವೆ, ನಕಲಿ ದಾಖಲೆ ಸೃಷ್ಟಿಸಿ ಜಮೀನನ್ನು ಹಿಂಪಡೆಯಲಾಗಿತ್ತು ಎಂದು ಆರೋಪಿಸಿ ಆಲಂ ಪಾಷಾ ಖಾಸಗಿ ದೂರು ದಾಖಲಿಸಿದ್ದರು.

ಅಂದ ಹಾಗೆ, ಪೂರ್ವಾನುಮತಿ ಇಲ್ಲದ ಕಾರಣ ದೂರಿನ ವಿಚಾರಣೆಗೆ ಕೋರ್ಟ್ ನಿರಾಕರಿಸಿತ್ತು. ಹಾಗಾಗಿ, ‌ಇದನ್ನು ಪ್ರಶ್ನಿಸಿ ಆಲಂ ಪಾಷಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇದೀಗ, ಆಲಂ ಪಾಷಾ ಅರ್ಜಿಯನ್ನು ಹೈಕೋರ್ಟ್ ಅಂಗೀಕರಿಸಿದೆ. ಜೊತೆಗೆ, ಪೂರ್ವಾನುಮತಿ ಅಗತ್ಯವಿಲ್ಲವೆಂದು ನ್ಯಾ.ಜಾನ್ ಮೈಕೆಲ್ ಕುನ್ಹಾ ಅಭಿಪ್ರಾಯ ಪಟ್ಟಿದ್ದಾರೆ. ಇದಲ್ಲದೆ, BSY ಮತ್ತು ನಿರಾಣಿ ವಿರುದ್ಧ ಪ್ರಕರಣ ಮುಂದುವರಿಕೆಗೆ ಆದೇಶ ಸಹ ನೀಡಿದ್ದಾರೆ.

ವಿನಯ್ ಕುಲಕರ್ಣಿ ಬಿಡುಗಡೆಗಾಗಿ ವಿಶೇಷ ಪೂಜೆ ಸಲ್ಲಿಕೆ

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ