AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಯಡಿಯೂರಪ್ಪ ಲಸಿಕೆ ಇಲ್ಲದೆಯೇ ಅಭಿಯಾನ ಆರಂಭಿದ್ದಾರೆ! ಇದು ಕೇವಲ ಫೋಟೋಗಾಗಿ: ಸಿದ್ದರಾಮಯ್ಯ ಟೀಕೆ

ಜನರಿಗೆ ನಾನು ಮನವಿ ಮಾಡುತ್ತೇನೆ. ಗುಂಪಿನಿಂದ ದೂರ ಇರಿ. ಲಸಿಕೆ ಕಡ್ಡಾಯವಾಗಿ ಹಾಕಿಸಿಕೊಳ್ಳಿ. ಲಾಕ್ ಡೌನ್ ಗೆ ಸಹಕಾರ ಕೊಡಿ ಎಂದು ಸಿದ್ದರಾಮಯ್ಯ ಹೇಳಿದರು.

ಸಿಎಂ ಯಡಿಯೂರಪ್ಪ ಲಸಿಕೆ ಇಲ್ಲದೆಯೇ ಅಭಿಯಾನ ಆರಂಭಿದ್ದಾರೆ! ಇದು ಕೇವಲ ಫೋಟೋಗಾಗಿ: ಸಿದ್ದರಾಮಯ್ಯ ಟೀಕೆ
ಸಿದ್ದರಾಮಯ್ಯ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 01, 2021 | 1:16 PM

Share

ಬೆಂಗಳೂರು: ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಕೊರೊನಾ ಸೋಂಕಿನ ವಿರುದ್ಧ ರಾಜ್ಯದಲ್ಲಿ ಲಸಿಕೆ ಅಭಿಯಾನ ಆರಂಭಿಸಿದ್ದಾರೆ. ಆದರೆ ಸಿಎಂ ಲಸಿಕೆ ಇಲ್ಲದೇ ಇಂದು ಅಭಿಯಾನ ಆರಂಭಿದ್ದಾರೆ. ಇದು ಕೇವಲ ಫೋಟೋಗಾಗಿ ಅಭಿಯಾನ ಆರಂಭಿಸಿದ್ದಾರೆ; ಮಾಧ್ಯಮದವರು ತೋರಿಸಿದ್ದಾರೆ. ಆದರೆ ರಾಜ್ಯದಲ್ಲಿ ಮೇ ಅಂತ್ಯದವರೆಗೆ ಲಸಿಕೆ ಸಿಗುವುದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮಾತನಾಡುವಾಗ ಮಾಹಿತಿ ಕೊರತೆ ಇತ್ತೋ ಗೊತ್ತಿಲ್ಲ. ಪಿಎಂ ಮೇ 1 ರಿಂದ 18 ವಯೋಮಾನದವರಿಗೆ ಲಸಿಕೆ ನೀಡ್ತಿವಿ ಅಂದರು. ಆದರೆ ಯಾವುದೇ ಪೂರ್ವ ತಯಾರಿ ಇಲ್ಲದೆ ಸುಮ್ಮನೆ ಭರವಸೆ ಕೊಟ್ಟಿಬಿಡುವುದು. ಪ್ರಧಾನಿ ಬೇಜಾಬ್ದಾರಿ ಹೇಳಿಕೆ‌ ಕೊಡ್ತಾರೆ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದರು.

ನಾನು ಹೇಳ್ತಾ ಇರುವುದು ಸತ್ಯ. ನಾನು ಮುಖ್ಯ ಕಾರ್ಯದರ್ಶಿಗೆ ಮಾತನಾಡಿದ್ದೀನಿ. ನಿನ್ನೆ ಸುಧಾಕರ್ ಏನಂತ ಹೇಳಿದ್ದಾನೆ. ಲಸಿಕೆ ಇಲ್ಲ ಅಂತಾ ಹೇಳಿದ್ದಾನೆ. ಪ್ರಧಾನಿ ಹೆಸರು ಏಳೆದು ತರಬೇಡಿ ಅಂತಾ ಸಿಎಂ ಹೇಳ್ತಾರೆ. ಸಿಎಂ ಏನಾಗಿದಾರೆ. ಅವರನ್ನ ಕೇಳದೆ ಯಾರನ್ನ ಕೇಳ ಬೇಕು? ಎಂದು ಸಿದ್ದರಾಮಯ್ಯ ಗುಡುಗಿದ್ದಾರೆ.

18 ವರ್ಷ ಮೇಲ್ಪಟ್ಟವರಿಗೆ ಕೊವಿಡ್ ಲಸಿಕೆ ನೀಡೋದಾಗಿ ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ. ಆದ್ರೆ ಪೂರ್ವ ತಯಾರಿ ಇಲ್ಲದೆ ಪ್ರಧಾನಿ ಭರವಸೆ ನೀಡಿದ್ದಾರೆ. ರಾಜ್ಯ ಸರ್ಕಾರ ಯಾವ ತಯಾರಿ ಮಾಡಿಕೊಂಡಿದೆ? ನನಗಿರುವ ಮಾಹಿತಿ ಪ್ರಕಾರ ಮೇ ತಿಂಗಳಾಂತ್ಯಕ್ಕೆ ಲಸಿಕೆ ಸಿಗಬಹುದು ಎಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಪೋಲಿಯೋ ಮಾದರಿಯಲ್ಲಿ ಕೊವಿಡ್ ಲಸಿಕೆ ನೀಡಬೇಕು: ಸಿದ್ದರಾಮಯ್ಯ

18 ವರ್ಷ ಮೇಲ್ಪಟ್ಟವರಿಗೆ ಕೊವಿಡ್ ಲಸಿಕೆ ಸಿಗಲಿದೆ. ಪೋಲಿಯೋ ಮಾದರಿಯಲ್ಲಿ ಕೊವಿಡ್ ಲಸಿಕೆ ನೀಡಬೇಕು. ಮನೆ ಮನೆಗೂ ತೆರಳಿ ಕೊವಿಡ್ ಲಸಿಕೆ ನೀಡಬೇಕು. ರಾಜ್ಯದಲ್ಲಿ ಲಸಿಕೆ ಅಭಿಯಾನಕ್ಕೆ ₹2,000 ಕೋಟಿ ಬೇಕು. ರಾಜ್ಯದಲ್ಲಿ ರೆಮ್‌ಡಿಸಿವಿರ್ ಇಂಜೆಕ್ಷನ್ ಕೂಡ ಸಿಗುತ್ತಿಲ್ಲ. ನನ್ನ ಬಾವ ಮೈದನಿಗೆ ರೆಮಿಡೆಸ್ವಿರ್ ಸಿಕ್ಕಿಲ್ಲ. ಇಂಜೆಕ್ಷನ್‌ಗಾಗಿ ನಾನು ಡಿಸಿಎಂ ಅಶ್ವತ್ಥ್‌ಗೆ ಕರೆ ಮಾಡಿದ್ದೆ. ಉಮೇಶ್ ಜಾಧವ್‌ಗೆ ಮೂಟೆ ಮೂಟೆ ಲಸಿಕೆ ಕೊಡ್ತಿದ್ದಾರೆ. ಪ್ರಿಯಾಂಕ್ ಖರ್ಗೆ ಕೇಳಿದರೆ ಮಾತ್ರ ಲಸಿಕೆ ಇಲ್ಲ ಅಂತಾರೆ. ಆರೋಗ್ಯ ಸಚಿವರು ನಮ್ಮ ಸಂಪರ್ಕಕ್ಕೆ ಸಿಗುತ್ತಿಲ್ಲ. ರಾಜ್ಯದಲ್ಲಿ ಅರಾಜಕತೆ ಇದೆ, ಆಡಳಿತ ಇಲ್ಲವೆಂದು ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದರು.

ಗುಂಪಿನಿಂದ ದೂರ ಇರಿ. ಲಸಿಕೆ ಕಡ್ಡಾಯವಾಗಿ ಹಾಕಿಸಿಕೊಳ್ಳಿ: ಸಿದ್ದರಾಮಯ್ಯ ಮನವಿ

ಜನರಿಗೆ ನಾನು ಮನವಿ ಮಾಡುತ್ತೇನೆ. ಗುಂಪಿನಿಂದ ದೂರ ಇರಿ. ಲಸಿಕೆ ಕಡ್ಡಾಯವಾಗಿ ಹಾಕಿಸಿಕೊಳ್ಳಿ. ಲಾಕ್ ಡೌನ್ ಗೆ ಸಹಕಾರ ಕೊಡಿ. ಸರ್ಕಾರ ಆರ್ಥಿಕ ಪ್ಯಾಕೇಜ್ ನೀಡಬೇಕು. 1.5 ಕೋಟಿ ಸಂಘಟಿತ ಅಸಂಘಟಿತ ಕೆಲಸ ಮಾಡಬೇಕು. ಅವರೆಲ್ಲ ಹೊಟ್ಟೆಗೆ ತಣ್ಣೀರು ಬಟ್ಟೆ ಹಾಕಿಕೊಳ್ಳಬೇಕಾ? ಎಂಥಂಥಾ ಮಂತ್ರಿಗಳು ಇದಾರಲ್ಲ. ಕತ್ತಿ ಏನ್ ಹೇಳಿದಾ ಗೊತ್ತಲ್ಲಾ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ:

ಲಸಿಕೆಯೇ ನಮ್ಮ ಸುರಕ್ಷಾ ಕವಚ: 18 ವರ್ಷ ಮೇಲ್ಪಟ್ಟವರಿಗಾಗಿ ಲಸಿಕಾ ಅಭಿಯಾನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?