AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

77ರ ಹರೆಯದಲ್ಲೂ ಭಾರೀ ‘ಕಸರತ್ತು’: ಸಿಎಂ BSYರಿಂದ ಜಿಮ್​ನಲ್ಲಿ ಸಖತ್ ವರ್ಕ್​ಔಟ್​!

KAS ಅಧಿಕಾರಿಗಳ ಸಂಘದ ಶತಮಾನೋತ್ಸವ ಭವನದ ಶಂಕುಸ್ಥಾಪನೆ ಹಾಗೂ ಜಿಮ್​ನ ಲೋಕಾರ್ಪಣೆ ವೇಳೆ ಮುಖ್ಯಮಂತ್ರಿ B.S.ಯಡಿಯೂರಪ್ಪ ಕೊಂಚ ಡಿಫರೆಂಟ್​ ಆಗಿ ಉದ್ಘಾಟನೆ ಮಾಡಲು ಮುಂದಾದರು.

77ರ ಹರೆಯದಲ್ಲೂ ಭಾರೀ ‘ಕಸರತ್ತು’: ಸಿಎಂ BSYರಿಂದ ಜಿಮ್​ನಲ್ಲಿ ಸಖತ್ ವರ್ಕ್​ಔಟ್​!
ಜಿಮ್ ಉದ್ಘಾಟನೆ ವೇಳೆ ಸಿಎಂ BSYರಿಂದ ​ಸಖತ್ ವರ್ಕಔಟ್​!
KUSHAL V
|

Updated on:Jan 08, 2021 | 9:48 PM

Share

ಬೆಂಗಳೂರು: KAS ಅಧಿಕಾರಿಗಳ ಸಂಘದ ಶತಮಾನೋತ್ಸವ ಭವನದ ಶಂಕುಸ್ಥಾಪನೆ ಹಾಗೂ ಜಿಮ್​ನ ಲೋಕಾರ್ಪಣೆ ವೇಳೆ ಮುಖ್ಯಮಂತ್ರಿ B.S.ಯಡಿಯೂರಪ್ಪ ಕೊಂಚ ಡಿಫರೆಂಟ್​ ಆಗಿ ಉದ್ಘಾಟನೆ ಮಾಡಲು ಮುಂದಾದರು.

ನಗರದ ಇನ್​ಫೆಂಟ್ರಿ ರಸ್ತೆಯಲ್ಲಿರುವ ಸಂಘದಲ್ಲಿ ನಡೆದ ಕಾರ್ಯಕ್ರಮದ ವೇಳೆ ಸಿಎಂ ಯಡಿಯೂರಪ್ಪ ಜಿಮ್ ಉದ್ಘಾಟಿಸಿ 2021ರ ದಿನಚರಿಯನ್ನು ಸಹ ಬಿಡುಗಡೆ ಮಾಡಿದರು. ಈ ವೇಳೆ, ವ್ಯಾಯಾಮ ಮಾಡುವ ಮೂಲಕ ಜಿಮ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಆಡಳಿತ ಸುಧಾರಣಾ ಆಯೋಗ-2 ಅಧ್ಯಕ್ಷ ವಿಜಯ ಭಾಸ್ಕರ್ ಹಾಗೂ ಕೆಎಎಸ್ ಅಧಿಕಾರಿಗಳ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಈ ನಡುವೆ, ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ ಮುಂದೆ ಅಧಿಕಾರಿಗಳು ತಮ್ಮ ಬೇಡಿಕೆಗಳ ಪಟ್ಟಿ ಸಲ್ಲಿಸಿದರು. ನಗರದಲ್ಲಿ ಮನೆ ಕಟ್ಟಿಕೊಳ್ಳಲು ನಮಗೆ ಒಂದು ನಿವೇಶನ ಬೇಕು. ಈಗಾಗಲೇ ಬಿಡಿಎ ಮೂಲಕ 25 ಎಕರೆ ಮಂಜೂರು ಆಗಿದೆ. ಅದಕ್ಕೆ ತಾವು ಅನುಮೋದನೆ ಮಾಡಿಕೊಡಬೇಕೆಂದು ಸಿಎಂಗೆ ಮನವಿ ಮಾಡಿದರು.

ಇನ್ನು ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಸಂಘದ ಬೇಡಿಕೆ ಬಗ್ಗೆ ಗಮನಹರಿಸೋದಾಗಿ ಸಿಎಸ್ ಹೇಳಿದ್ದಾರೆ. ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಮೇಲೆ ಜನರಿಗೆ ಬೇಸರ ಇದೆ. ಕಷ್ಟದಲ್ಲಿದ್ದಾಗ ಸ್ಪಂದಿಸುವುದಿಲ್ಲ ಎಂದು ಜನರಿಗೆ‌ ಬೇಸರ ಇದೆ. ಜನರು ಸಂಕಷ್ಟದಲ್ಲಿದ್ದಾಗ ಅವರಿಗೆ ಅಧಿಕಾರಿಗಳು ಸ್ಪಂದಿಸಬೇಕು ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

Published On - 7:29 pm, Fri, 8 January 21

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!