AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

77ರ ಹರೆಯದಲ್ಲೂ ಭಾರೀ ‘ಕಸರತ್ತು’: ಸಿಎಂ BSYರಿಂದ ಜಿಮ್​ನಲ್ಲಿ ಸಖತ್ ವರ್ಕ್​ಔಟ್​!

KAS ಅಧಿಕಾರಿಗಳ ಸಂಘದ ಶತಮಾನೋತ್ಸವ ಭವನದ ಶಂಕುಸ್ಥಾಪನೆ ಹಾಗೂ ಜಿಮ್​ನ ಲೋಕಾರ್ಪಣೆ ವೇಳೆ ಮುಖ್ಯಮಂತ್ರಿ B.S.ಯಡಿಯೂರಪ್ಪ ಕೊಂಚ ಡಿಫರೆಂಟ್​ ಆಗಿ ಉದ್ಘಾಟನೆ ಮಾಡಲು ಮುಂದಾದರು.

77ರ ಹರೆಯದಲ್ಲೂ ಭಾರೀ ‘ಕಸರತ್ತು’: ಸಿಎಂ BSYರಿಂದ ಜಿಮ್​ನಲ್ಲಿ ಸಖತ್ ವರ್ಕ್​ಔಟ್​!
ಜಿಮ್ ಉದ್ಘಾಟನೆ ವೇಳೆ ಸಿಎಂ BSYರಿಂದ ​ಸಖತ್ ವರ್ಕಔಟ್​!
KUSHAL V
|

Updated on:Jan 08, 2021 | 9:48 PM

Share

ಬೆಂಗಳೂರು: KAS ಅಧಿಕಾರಿಗಳ ಸಂಘದ ಶತಮಾನೋತ್ಸವ ಭವನದ ಶಂಕುಸ್ಥಾಪನೆ ಹಾಗೂ ಜಿಮ್​ನ ಲೋಕಾರ್ಪಣೆ ವೇಳೆ ಮುಖ್ಯಮಂತ್ರಿ B.S.ಯಡಿಯೂರಪ್ಪ ಕೊಂಚ ಡಿಫರೆಂಟ್​ ಆಗಿ ಉದ್ಘಾಟನೆ ಮಾಡಲು ಮುಂದಾದರು.

ನಗರದ ಇನ್​ಫೆಂಟ್ರಿ ರಸ್ತೆಯಲ್ಲಿರುವ ಸಂಘದಲ್ಲಿ ನಡೆದ ಕಾರ್ಯಕ್ರಮದ ವೇಳೆ ಸಿಎಂ ಯಡಿಯೂರಪ್ಪ ಜಿಮ್ ಉದ್ಘಾಟಿಸಿ 2021ರ ದಿನಚರಿಯನ್ನು ಸಹ ಬಿಡುಗಡೆ ಮಾಡಿದರು. ಈ ವೇಳೆ, ವ್ಯಾಯಾಮ ಮಾಡುವ ಮೂಲಕ ಜಿಮ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಆಡಳಿತ ಸುಧಾರಣಾ ಆಯೋಗ-2 ಅಧ್ಯಕ್ಷ ವಿಜಯ ಭಾಸ್ಕರ್ ಹಾಗೂ ಕೆಎಎಸ್ ಅಧಿಕಾರಿಗಳ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಈ ನಡುವೆ, ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ ಮುಂದೆ ಅಧಿಕಾರಿಗಳು ತಮ್ಮ ಬೇಡಿಕೆಗಳ ಪಟ್ಟಿ ಸಲ್ಲಿಸಿದರು. ನಗರದಲ್ಲಿ ಮನೆ ಕಟ್ಟಿಕೊಳ್ಳಲು ನಮಗೆ ಒಂದು ನಿವೇಶನ ಬೇಕು. ಈಗಾಗಲೇ ಬಿಡಿಎ ಮೂಲಕ 25 ಎಕರೆ ಮಂಜೂರು ಆಗಿದೆ. ಅದಕ್ಕೆ ತಾವು ಅನುಮೋದನೆ ಮಾಡಿಕೊಡಬೇಕೆಂದು ಸಿಎಂಗೆ ಮನವಿ ಮಾಡಿದರು.

ಇನ್ನು ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಸಂಘದ ಬೇಡಿಕೆ ಬಗ್ಗೆ ಗಮನಹರಿಸೋದಾಗಿ ಸಿಎಸ್ ಹೇಳಿದ್ದಾರೆ. ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಮೇಲೆ ಜನರಿಗೆ ಬೇಸರ ಇದೆ. ಕಷ್ಟದಲ್ಲಿದ್ದಾಗ ಸ್ಪಂದಿಸುವುದಿಲ್ಲ ಎಂದು ಜನರಿಗೆ‌ ಬೇಸರ ಇದೆ. ಜನರು ಸಂಕಷ್ಟದಲ್ಲಿದ್ದಾಗ ಅವರಿಗೆ ಅಧಿಕಾರಿಗಳು ಸ್ಪಂದಿಸಬೇಕು ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

Published On - 7:29 pm, Fri, 8 January 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!