AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿಗೆ ಹೊಸ ಜೋಡೆತ್ತುಗಳ ಪರಿಚಯಿಸಿದ ಯಡಿಯೂರಪ್ಪ

ಹಾವೇರಿ: ಜೋಡೆತ್ತು ಎಂದಾಕ್ಷಣ ನೆನಪಾಗೋದು ಸ್ಯಾಂಡಲ್​ವುಡ್​ನ ದರ್ಶನ್ ಮತ್ತು ಯಶ್. ಲೋಕಸಭಾ ಚುನಾವಣೆ ವೇಳೆ ಮಂಡ್ಯ ಅಖಾಡದಲ್ಲಿ ಸುಮಲತಾ ಪರ ಪ್ರಚಾರಕ್ಕೆ ನಿಂತ ಈ ನಟರು ಜೋಡೆತ್ತು ಎಂದೇ ಖ್ಯಾತಿಯಾದರು. ಅದೇ ಸಮಯದಲ್ಲಿ ರಾಜಕೀಯ ನಾಯಕರ ಪೈಕಿ ಹೆಚ್.​ಡಿ.ಕುಮಾರಸ್ವಾಮಿ ಮತ್ತು ಡಿ.ಕೆ.ಶಿವಕುಮಾರ್ ತಮ್ಮನ್ನು ತಾವೇ ಜೋಡೆತ್ತು ಎಂದು ಕರೆದುಕೊಂಡರು. ಆದ್ರೆ ಇದೀಗ ಮುಖ್ಯಮಂತ್ರಿ ಬಿ.ಎಸ್.​ಯಡಿಯೂರಪ್ಪ ಸಹ ಜಿಲ್ಲೆಯಿಂದ ಹೊಸ ಜೋಡೆತ್ತುಗಳನ್ನು ಪರಿಚಯಿಸಿದ್ದಾರೆ. ಜೋಡೆತ್ತು ರೀತಿ ಕೆಲಸ ಮಾಡ್ತಾರೆ: ಅನರ್ಹ ಶಾಸಕ ಬಿ.ಸಿ.ಪಾಟೀಲ್ ಮತ್ತು ಯು.ಬಿ.ಬಣಕಾರ ಒಂದಾದ್ಮೇಲೆ ಹಾವೇರಿಗೆ […]

ಹಾವೇರಿಗೆ ಹೊಸ ಜೋಡೆತ್ತುಗಳ ಪರಿಚಯಿಸಿದ ಯಡಿಯೂರಪ್ಪ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 07, 2019 | 6:12 PM

Share

ಹಾವೇರಿ: ಜೋಡೆತ್ತು ಎಂದಾಕ್ಷಣ ನೆನಪಾಗೋದು ಸ್ಯಾಂಡಲ್​ವುಡ್​ನ ದರ್ಶನ್ ಮತ್ತು ಯಶ್. ಲೋಕಸಭಾ ಚುನಾವಣೆ ವೇಳೆ ಮಂಡ್ಯ ಅಖಾಡದಲ್ಲಿ ಸುಮಲತಾ ಪರ ಪ್ರಚಾರಕ್ಕೆ ನಿಂತ ಈ ನಟರು ಜೋಡೆತ್ತು ಎಂದೇ ಖ್ಯಾತಿಯಾದರು. ಅದೇ ಸಮಯದಲ್ಲಿ ರಾಜಕೀಯ ನಾಯಕರ ಪೈಕಿ ಹೆಚ್.​ಡಿ.ಕುಮಾರಸ್ವಾಮಿ ಮತ್ತು ಡಿ.ಕೆ.ಶಿವಕುಮಾರ್ ತಮ್ಮನ್ನು ತಾವೇ ಜೋಡೆತ್ತು ಎಂದು ಕರೆದುಕೊಂಡರು. ಆದ್ರೆ ಇದೀಗ ಮುಖ್ಯಮಂತ್ರಿ ಬಿ.ಎಸ್.​ಯಡಿಯೂರಪ್ಪ ಸಹ ಜಿಲ್ಲೆಯಿಂದ ಹೊಸ ಜೋಡೆತ್ತುಗಳನ್ನು ಪರಿಚಯಿಸಿದ್ದಾರೆ.

ಜೋಡೆತ್ತು ರೀತಿ ಕೆಲಸ ಮಾಡ್ತಾರೆ: ಅನರ್ಹ ಶಾಸಕ ಬಿ.ಸಿ.ಪಾಟೀಲ್ ಮತ್ತು ಯು.ಬಿ.ಬಣಕಾರ ಒಂದಾದ್ಮೇಲೆ ಹಾವೇರಿಗೆ ನಾನು ಬರುವ ಅವಶ್ಯಕತೆ ಇಲ್ಲ. ಬಣಕಾರ ತಲೆ ತಗ್ಗಿಸೋ ಕೆಲಸ ಮಾಡಲು ಬಿಡೋದಿಲ್ಲ. ಈ ಇಬ್ಬರೂ ನನ್ನೆರಡು ಕಣ್ಣುಗಳು. ಜೋಡೆತ್ತು ರೀತಿಯಲ್ಲಿ ಇಬ್ಬರೂ ಕೆಲಸ ಮಾಡ್ತಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಕೆಲವೇ ದಿನಗಳಲ್ಲಿ ಜಿಲ್ಲೆಗೆ 100 ಕೋಟಿ : ಹಿರೇಕೆರೂರಿನ ಕ್ರೀಡಾಂಗಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಮತ್ತು ಶಿಲಾನ್ಯಾಸ ನೆರವೇರಿಸಿದ ಸಿಎಂ ಯಡಿಯೂರಪ್ಪ, ಯಾವುದೇ ತಾಲೂಕಿಗೆ ಕೊಡದಷ್ಟು ಅನುದಾನವನ್ನು ಹಿರೇಕೆರೂರಿಗೆ ಕೊಟ್ಟಿದ್ದೇನೆ ಎಂದರು. U.B.ಬಣಕಾರ, ಬಿ.ಸಿ.ಪಾಟೀಲ್​ ಆಸೆಯಂತೆ ಹಿರೇಕೆರೂರು ಪಟ್ಟಣವನ್ನ ಮಾದರಿ ಕ್ಷೇತ್ರವಾಗಿ ಮಾಡುತ್ತೇವೆ. ಮುಂದಿನ ಬಜೆಟ್​ನಲ್ಲಿ ತಾಲೂಕಿನ ಎಲ್ಲ ಬೇಡಿಕೆ ಈಡೇರಿಸುವೆ. ಕೇಂದ್ರ ಮತ್ತು ಎನ್​ಡಿಆರ್​ಎಫ್ ನಿಯಮ ಪಕ್ಕಕ್ಕಿಟ್ಟು ಮನೆ ನಿರ್ಮಾಣಕ್ಕೆ 5 ಲಕ್ಷ ಕೊಡುತ್ತೇನೆ. ನನ್ನ ಜೊತೆ ನಮ್ಮ ಸಚಿವರೂ ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ. ಕೆಲವೇ ದಿನಗಳಲ್ಲಿ ಜಿಲ್ಲೆಗೆ 100 ಕೋಟಿ ಹಣ ಕೊಡುತ್ತೇನೆ ಎಂದು ಬಿಎಸ್​ವೈ ಭರವಸೆ ನೀಡಿದರು.

Published On - 6:00 pm, Thu, 7 November 19

Follow Us
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ