AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿಗೆ ಹೊಸ ಜೋಡೆತ್ತುಗಳ ಪರಿಚಯಿಸಿದ ಯಡಿಯೂರಪ್ಪ

ಹಾವೇರಿ: ಜೋಡೆತ್ತು ಎಂದಾಕ್ಷಣ ನೆನಪಾಗೋದು ಸ್ಯಾಂಡಲ್​ವುಡ್​ನ ದರ್ಶನ್ ಮತ್ತು ಯಶ್. ಲೋಕಸಭಾ ಚುನಾವಣೆ ವೇಳೆ ಮಂಡ್ಯ ಅಖಾಡದಲ್ಲಿ ಸುಮಲತಾ ಪರ ಪ್ರಚಾರಕ್ಕೆ ನಿಂತ ಈ ನಟರು ಜೋಡೆತ್ತು ಎಂದೇ ಖ್ಯಾತಿಯಾದರು. ಅದೇ ಸಮಯದಲ್ಲಿ ರಾಜಕೀಯ ನಾಯಕರ ಪೈಕಿ ಹೆಚ್.​ಡಿ.ಕುಮಾರಸ್ವಾಮಿ ಮತ್ತು ಡಿ.ಕೆ.ಶಿವಕುಮಾರ್ ತಮ್ಮನ್ನು ತಾವೇ ಜೋಡೆತ್ತು ಎಂದು ಕರೆದುಕೊಂಡರು. ಆದ್ರೆ ಇದೀಗ ಮುಖ್ಯಮಂತ್ರಿ ಬಿ.ಎಸ್.​ಯಡಿಯೂರಪ್ಪ ಸಹ ಜಿಲ್ಲೆಯಿಂದ ಹೊಸ ಜೋಡೆತ್ತುಗಳನ್ನು ಪರಿಚಯಿಸಿದ್ದಾರೆ. ಜೋಡೆತ್ತು ರೀತಿ ಕೆಲಸ ಮಾಡ್ತಾರೆ: ಅನರ್ಹ ಶಾಸಕ ಬಿ.ಸಿ.ಪಾಟೀಲ್ ಮತ್ತು ಯು.ಬಿ.ಬಣಕಾರ ಒಂದಾದ್ಮೇಲೆ ಹಾವೇರಿಗೆ […]

ಹಾವೇರಿಗೆ ಹೊಸ ಜೋಡೆತ್ತುಗಳ ಪರಿಚಯಿಸಿದ ಯಡಿಯೂರಪ್ಪ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 07, 2019 | 6:12 PM

Share

ಹಾವೇರಿ: ಜೋಡೆತ್ತು ಎಂದಾಕ್ಷಣ ನೆನಪಾಗೋದು ಸ್ಯಾಂಡಲ್​ವುಡ್​ನ ದರ್ಶನ್ ಮತ್ತು ಯಶ್. ಲೋಕಸಭಾ ಚುನಾವಣೆ ವೇಳೆ ಮಂಡ್ಯ ಅಖಾಡದಲ್ಲಿ ಸುಮಲತಾ ಪರ ಪ್ರಚಾರಕ್ಕೆ ನಿಂತ ಈ ನಟರು ಜೋಡೆತ್ತು ಎಂದೇ ಖ್ಯಾತಿಯಾದರು. ಅದೇ ಸಮಯದಲ್ಲಿ ರಾಜಕೀಯ ನಾಯಕರ ಪೈಕಿ ಹೆಚ್.​ಡಿ.ಕುಮಾರಸ್ವಾಮಿ ಮತ್ತು ಡಿ.ಕೆ.ಶಿವಕುಮಾರ್ ತಮ್ಮನ್ನು ತಾವೇ ಜೋಡೆತ್ತು ಎಂದು ಕರೆದುಕೊಂಡರು. ಆದ್ರೆ ಇದೀಗ ಮುಖ್ಯಮಂತ್ರಿ ಬಿ.ಎಸ್.​ಯಡಿಯೂರಪ್ಪ ಸಹ ಜಿಲ್ಲೆಯಿಂದ ಹೊಸ ಜೋಡೆತ್ತುಗಳನ್ನು ಪರಿಚಯಿಸಿದ್ದಾರೆ.

ಜೋಡೆತ್ತು ರೀತಿ ಕೆಲಸ ಮಾಡ್ತಾರೆ: ಅನರ್ಹ ಶಾಸಕ ಬಿ.ಸಿ.ಪಾಟೀಲ್ ಮತ್ತು ಯು.ಬಿ.ಬಣಕಾರ ಒಂದಾದ್ಮೇಲೆ ಹಾವೇರಿಗೆ ನಾನು ಬರುವ ಅವಶ್ಯಕತೆ ಇಲ್ಲ. ಬಣಕಾರ ತಲೆ ತಗ್ಗಿಸೋ ಕೆಲಸ ಮಾಡಲು ಬಿಡೋದಿಲ್ಲ. ಈ ಇಬ್ಬರೂ ನನ್ನೆರಡು ಕಣ್ಣುಗಳು. ಜೋಡೆತ್ತು ರೀತಿಯಲ್ಲಿ ಇಬ್ಬರೂ ಕೆಲಸ ಮಾಡ್ತಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಕೆಲವೇ ದಿನಗಳಲ್ಲಿ ಜಿಲ್ಲೆಗೆ 100 ಕೋಟಿ : ಹಿರೇಕೆರೂರಿನ ಕ್ರೀಡಾಂಗಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಮತ್ತು ಶಿಲಾನ್ಯಾಸ ನೆರವೇರಿಸಿದ ಸಿಎಂ ಯಡಿಯೂರಪ್ಪ, ಯಾವುದೇ ತಾಲೂಕಿಗೆ ಕೊಡದಷ್ಟು ಅನುದಾನವನ್ನು ಹಿರೇಕೆರೂರಿಗೆ ಕೊಟ್ಟಿದ್ದೇನೆ ಎಂದರು. U.B.ಬಣಕಾರ, ಬಿ.ಸಿ.ಪಾಟೀಲ್​ ಆಸೆಯಂತೆ ಹಿರೇಕೆರೂರು ಪಟ್ಟಣವನ್ನ ಮಾದರಿ ಕ್ಷೇತ್ರವಾಗಿ ಮಾಡುತ್ತೇವೆ. ಮುಂದಿನ ಬಜೆಟ್​ನಲ್ಲಿ ತಾಲೂಕಿನ ಎಲ್ಲ ಬೇಡಿಕೆ ಈಡೇರಿಸುವೆ. ಕೇಂದ್ರ ಮತ್ತು ಎನ್​ಡಿಆರ್​ಎಫ್ ನಿಯಮ ಪಕ್ಕಕ್ಕಿಟ್ಟು ಮನೆ ನಿರ್ಮಾಣಕ್ಕೆ 5 ಲಕ್ಷ ಕೊಡುತ್ತೇನೆ. ನನ್ನ ಜೊತೆ ನಮ್ಮ ಸಚಿವರೂ ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ. ಕೆಲವೇ ದಿನಗಳಲ್ಲಿ ಜಿಲ್ಲೆಗೆ 100 ಕೋಟಿ ಹಣ ಕೊಡುತ್ತೇನೆ ಎಂದು ಬಿಎಸ್​ವೈ ಭರವಸೆ ನೀಡಿದರು.

Published On - 6:00 pm, Thu, 7 November 19

Follow Us
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್