AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿಗೆ ಹೊಸ ಜೋಡೆತ್ತುಗಳ ಪರಿಚಯಿಸಿದ ಯಡಿಯೂರಪ್ಪ

ಹಾವೇರಿ: ಜೋಡೆತ್ತು ಎಂದಾಕ್ಷಣ ನೆನಪಾಗೋದು ಸ್ಯಾಂಡಲ್​ವುಡ್​ನ ದರ್ಶನ್ ಮತ್ತು ಯಶ್. ಲೋಕಸಭಾ ಚುನಾವಣೆ ವೇಳೆ ಮಂಡ್ಯ ಅಖಾಡದಲ್ಲಿ ಸುಮಲತಾ ಪರ ಪ್ರಚಾರಕ್ಕೆ ನಿಂತ ಈ ನಟರು ಜೋಡೆತ್ತು ಎಂದೇ ಖ್ಯಾತಿಯಾದರು. ಅದೇ ಸಮಯದಲ್ಲಿ ರಾಜಕೀಯ ನಾಯಕರ ಪೈಕಿ ಹೆಚ್.​ಡಿ.ಕುಮಾರಸ್ವಾಮಿ ಮತ್ತು ಡಿ.ಕೆ.ಶಿವಕುಮಾರ್ ತಮ್ಮನ್ನು ತಾವೇ ಜೋಡೆತ್ತು ಎಂದು ಕರೆದುಕೊಂಡರು. ಆದ್ರೆ ಇದೀಗ ಮುಖ್ಯಮಂತ್ರಿ ಬಿ.ಎಸ್.​ಯಡಿಯೂರಪ್ಪ ಸಹ ಜಿಲ್ಲೆಯಿಂದ ಹೊಸ ಜೋಡೆತ್ತುಗಳನ್ನು ಪರಿಚಯಿಸಿದ್ದಾರೆ. ಜೋಡೆತ್ತು ರೀತಿ ಕೆಲಸ ಮಾಡ್ತಾರೆ: ಅನರ್ಹ ಶಾಸಕ ಬಿ.ಸಿ.ಪಾಟೀಲ್ ಮತ್ತು ಯು.ಬಿ.ಬಣಕಾರ ಒಂದಾದ್ಮೇಲೆ ಹಾವೇರಿಗೆ […]

ಹಾವೇರಿಗೆ ಹೊಸ ಜೋಡೆತ್ತುಗಳ ಪರಿಚಯಿಸಿದ ಯಡಿಯೂರಪ್ಪ
ಸಾಧು ಶ್ರೀನಾಥ್​
|

Updated on:Nov 07, 2019 | 6:12 PM

Share

ಹಾವೇರಿ: ಜೋಡೆತ್ತು ಎಂದಾಕ್ಷಣ ನೆನಪಾಗೋದು ಸ್ಯಾಂಡಲ್​ವುಡ್​ನ ದರ್ಶನ್ ಮತ್ತು ಯಶ್. ಲೋಕಸಭಾ ಚುನಾವಣೆ ವೇಳೆ ಮಂಡ್ಯ ಅಖಾಡದಲ್ಲಿ ಸುಮಲತಾ ಪರ ಪ್ರಚಾರಕ್ಕೆ ನಿಂತ ಈ ನಟರು ಜೋಡೆತ್ತು ಎಂದೇ ಖ್ಯಾತಿಯಾದರು. ಅದೇ ಸಮಯದಲ್ಲಿ ರಾಜಕೀಯ ನಾಯಕರ ಪೈಕಿ ಹೆಚ್.​ಡಿ.ಕುಮಾರಸ್ವಾಮಿ ಮತ್ತು ಡಿ.ಕೆ.ಶಿವಕುಮಾರ್ ತಮ್ಮನ್ನು ತಾವೇ ಜೋಡೆತ್ತು ಎಂದು ಕರೆದುಕೊಂಡರು. ಆದ್ರೆ ಇದೀಗ ಮುಖ್ಯಮಂತ್ರಿ ಬಿ.ಎಸ್.​ಯಡಿಯೂರಪ್ಪ ಸಹ ಜಿಲ್ಲೆಯಿಂದ ಹೊಸ ಜೋಡೆತ್ತುಗಳನ್ನು ಪರಿಚಯಿಸಿದ್ದಾರೆ.

ಜೋಡೆತ್ತು ರೀತಿ ಕೆಲಸ ಮಾಡ್ತಾರೆ: ಅನರ್ಹ ಶಾಸಕ ಬಿ.ಸಿ.ಪಾಟೀಲ್ ಮತ್ತು ಯು.ಬಿ.ಬಣಕಾರ ಒಂದಾದ್ಮೇಲೆ ಹಾವೇರಿಗೆ ನಾನು ಬರುವ ಅವಶ್ಯಕತೆ ಇಲ್ಲ. ಬಣಕಾರ ತಲೆ ತಗ್ಗಿಸೋ ಕೆಲಸ ಮಾಡಲು ಬಿಡೋದಿಲ್ಲ. ಈ ಇಬ್ಬರೂ ನನ್ನೆರಡು ಕಣ್ಣುಗಳು. ಜೋಡೆತ್ತು ರೀತಿಯಲ್ಲಿ ಇಬ್ಬರೂ ಕೆಲಸ ಮಾಡ್ತಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಕೆಲವೇ ದಿನಗಳಲ್ಲಿ ಜಿಲ್ಲೆಗೆ 100 ಕೋಟಿ : ಹಿರೇಕೆರೂರಿನ ಕ್ರೀಡಾಂಗಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಮತ್ತು ಶಿಲಾನ್ಯಾಸ ನೆರವೇರಿಸಿದ ಸಿಎಂ ಯಡಿಯೂರಪ್ಪ, ಯಾವುದೇ ತಾಲೂಕಿಗೆ ಕೊಡದಷ್ಟು ಅನುದಾನವನ್ನು ಹಿರೇಕೆರೂರಿಗೆ ಕೊಟ್ಟಿದ್ದೇನೆ ಎಂದರು. U.B.ಬಣಕಾರ, ಬಿ.ಸಿ.ಪಾಟೀಲ್​ ಆಸೆಯಂತೆ ಹಿರೇಕೆರೂರು ಪಟ್ಟಣವನ್ನ ಮಾದರಿ ಕ್ಷೇತ್ರವಾಗಿ ಮಾಡುತ್ತೇವೆ. ಮುಂದಿನ ಬಜೆಟ್​ನಲ್ಲಿ ತಾಲೂಕಿನ ಎಲ್ಲ ಬೇಡಿಕೆ ಈಡೇರಿಸುವೆ. ಕೇಂದ್ರ ಮತ್ತು ಎನ್​ಡಿಆರ್​ಎಫ್ ನಿಯಮ ಪಕ್ಕಕ್ಕಿಟ್ಟು ಮನೆ ನಿರ್ಮಾಣಕ್ಕೆ 5 ಲಕ್ಷ ಕೊಡುತ್ತೇನೆ. ನನ್ನ ಜೊತೆ ನಮ್ಮ ಸಚಿವರೂ ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ. ಕೆಲವೇ ದಿನಗಳಲ್ಲಿ ಜಿಲ್ಲೆಗೆ 100 ಕೋಟಿ ಹಣ ಕೊಡುತ್ತೇನೆ ಎಂದು ಬಿಎಸ್​ವೈ ಭರವಸೆ ನೀಡಿದರು.

Published On - 6:00 pm, Thu, 7 November 19

ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಸಿಎಂ ಕುರ್ಚಿ ಕದನ: ಡಿಕೆಶಿಗೆ ಇನ್ನೂ ಸಿಕ್ಕಿಲ್ವಾ ಸ್ವಷ್ಟ ಚಿತ್ರಣ?
ಸಿಎಂ ಕುರ್ಚಿ ಕದನ: ಡಿಕೆಶಿಗೆ ಇನ್ನೂ ಸಿಕ್ಕಿಲ್ವಾ ಸ್ವಷ್ಟ ಚಿತ್ರಣ?