ಹಾವೇರಿಗೆ ಹೊಸ ಜೋಡೆತ್ತುಗಳ ಪರಿಚಯಿಸಿದ ಯಡಿಯೂರಪ್ಪ

ಹಾವೇರಿ: ಜೋಡೆತ್ತು ಎಂದಾಕ್ಷಣ ನೆನಪಾಗೋದು ಸ್ಯಾಂಡಲ್​ವುಡ್​ನ ದರ್ಶನ್ ಮತ್ತು ಯಶ್. ಲೋಕಸಭಾ ಚುನಾವಣೆ ವೇಳೆ ಮಂಡ್ಯ ಅಖಾಡದಲ್ಲಿ ಸುಮಲತಾ ಪರ ಪ್ರಚಾರಕ್ಕೆ ನಿಂತ ಈ ನಟರು ಜೋಡೆತ್ತು ಎಂದೇ ಖ್ಯಾತಿಯಾದರು. ಅದೇ ಸಮಯದಲ್ಲಿ ರಾಜಕೀಯ ನಾಯಕರ ಪೈಕಿ ಹೆಚ್.​ಡಿ.ಕುಮಾರಸ್ವಾಮಿ ಮತ್ತು ಡಿ.ಕೆ.ಶಿವಕುಮಾರ್ ತಮ್ಮನ್ನು ತಾವೇ ಜೋಡೆತ್ತು ಎಂದು ಕರೆದುಕೊಂಡರು. ಆದ್ರೆ ಇದೀಗ ಮುಖ್ಯಮಂತ್ರಿ ಬಿ.ಎಸ್.​ಯಡಿಯೂರಪ್ಪ ಸಹ ಜಿಲ್ಲೆಯಿಂದ ಹೊಸ ಜೋಡೆತ್ತುಗಳನ್ನು ಪರಿಚಯಿಸಿದ್ದಾರೆ. ಜೋಡೆತ್ತು ರೀತಿ ಕೆಲಸ ಮಾಡ್ತಾರೆ: ಅನರ್ಹ ಶಾಸಕ ಬಿ.ಸಿ.ಪಾಟೀಲ್ ಮತ್ತು ಯು.ಬಿ.ಬಣಕಾರ ಒಂದಾದ್ಮೇಲೆ ಹಾವೇರಿಗೆ […]

ಹಾವೇರಿಗೆ ಹೊಸ ಜೋಡೆತ್ತುಗಳ ಪರಿಚಯಿಸಿದ ಯಡಿಯೂರಪ್ಪ
ಸಾಧು ಶ್ರೀನಾಥ್​

Updated on: Nov 07, 2019 | 6:12 PM

ಹಾವೇರಿ: ಜೋಡೆತ್ತು ಎಂದಾಕ್ಷಣ ನೆನಪಾಗೋದು ಸ್ಯಾಂಡಲ್​ವುಡ್​ನ ದರ್ಶನ್ ಮತ್ತು ಯಶ್. ಲೋಕಸಭಾ ಚುನಾವಣೆ ವೇಳೆ ಮಂಡ್ಯ ಅಖಾಡದಲ್ಲಿ ಸುಮಲತಾ ಪರ ಪ್ರಚಾರಕ್ಕೆ ನಿಂತ ಈ ನಟರು ಜೋಡೆತ್ತು ಎಂದೇ ಖ್ಯಾತಿಯಾದರು. ಅದೇ ಸಮಯದಲ್ಲಿ ರಾಜಕೀಯ ನಾಯಕರ ಪೈಕಿ ಹೆಚ್.​ಡಿ.ಕುಮಾರಸ್ವಾಮಿ ಮತ್ತು ಡಿ.ಕೆ.ಶಿವಕುಮಾರ್ ತಮ್ಮನ್ನು ತಾವೇ ಜೋಡೆತ್ತು ಎಂದು ಕರೆದುಕೊಂಡರು. ಆದ್ರೆ ಇದೀಗ ಮುಖ್ಯಮಂತ್ರಿ ಬಿ.ಎಸ್.​ಯಡಿಯೂರಪ್ಪ ಸಹ ಜಿಲ್ಲೆಯಿಂದ ಹೊಸ ಜೋಡೆತ್ತುಗಳನ್ನು ಪರಿಚಯಿಸಿದ್ದಾರೆ.

ಜೋಡೆತ್ತು ರೀತಿ ಕೆಲಸ ಮಾಡ್ತಾರೆ:
ಅನರ್ಹ ಶಾಸಕ ಬಿ.ಸಿ.ಪಾಟೀಲ್ ಮತ್ತು ಯು.ಬಿ.ಬಣಕಾರ ಒಂದಾದ್ಮೇಲೆ ಹಾವೇರಿಗೆ ನಾನು ಬರುವ ಅವಶ್ಯಕತೆ ಇಲ್ಲ. ಬಣಕಾರ ತಲೆ ತಗ್ಗಿಸೋ ಕೆಲಸ ಮಾಡಲು ಬಿಡೋದಿಲ್ಲ. ಈ ಇಬ್ಬರೂ ನನ್ನೆರಡು ಕಣ್ಣುಗಳು. ಜೋಡೆತ್ತು ರೀತಿಯಲ್ಲಿ ಇಬ್ಬರೂ ಕೆಲಸ ಮಾಡ್ತಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಕೆಲವೇ ದಿನಗಳಲ್ಲಿ ಜಿಲ್ಲೆಗೆ 100 ಕೋಟಿ :
ಹಿರೇಕೆರೂರಿನ ಕ್ರೀಡಾಂಗಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಮತ್ತು ಶಿಲಾನ್ಯಾಸ ನೆರವೇರಿಸಿದ ಸಿಎಂ ಯಡಿಯೂರಪ್ಪ, ಯಾವುದೇ ತಾಲೂಕಿಗೆ ಕೊಡದಷ್ಟು ಅನುದಾನವನ್ನು ಹಿರೇಕೆರೂರಿಗೆ ಕೊಟ್ಟಿದ್ದೇನೆ ಎಂದರು. U.B.ಬಣಕಾರ, ಬಿ.ಸಿ.ಪಾಟೀಲ್​ ಆಸೆಯಂತೆ ಹಿರೇಕೆರೂರು ಪಟ್ಟಣವನ್ನ ಮಾದರಿ ಕ್ಷೇತ್ರವಾಗಿ ಮಾಡುತ್ತೇವೆ. ಮುಂದಿನ ಬಜೆಟ್​ನಲ್ಲಿ ತಾಲೂಕಿನ ಎಲ್ಲ ಬೇಡಿಕೆ ಈಡೇರಿಸುವೆ. ಕೇಂದ್ರ ಮತ್ತು ಎನ್​ಡಿಆರ್​ಎಫ್ ನಿಯಮ ಪಕ್ಕಕ್ಕಿಟ್ಟು ಮನೆ ನಿರ್ಮಾಣಕ್ಕೆ 5 ಲಕ್ಷ ಕೊಡುತ್ತೇನೆ. ನನ್ನ ಜೊತೆ ನಮ್ಮ ಸಚಿವರೂ ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ. ಕೆಲವೇ ದಿನಗಳಲ್ಲಿ ಜಿಲ್ಲೆಗೆ 100 ಕೋಟಿ ಹಣ ಕೊಡುತ್ತೇನೆ ಎಂದು ಬಿಎಸ್​ವೈ ಭರವಸೆ ನೀಡಿದರು.

Published On - 6:00 pm, Thu, 7 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us