AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆ, ತೆರಿಗೆ ಏರುತ್ತಾ.. ನೀರಾವರಿ, ರೈತರಿಗೆ ಸಿಗುತ್ತಾ ಬಂಪರ್ ಗಿಫ್ಟ್ ?

ಬೆಂಗಳೂರು: ಮಹತ್ವಾಕಾಂಕ್ಷೆಯ ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಶುರು ಆಗಿದೆ. ಹೀಗಾಗಿಯೇ ಇಂದು ಸಿಎಂ ಯಡಿಯೂರಪ್ಪ ಮಂಡಿಸಲಿರೋ ಬಜೆಟ್ ಮೇಲೆ ರಾಜ್ಯದ ಜನ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇಷ್ಟಕ್ಕೂ ಸಿಎಂ ಬಿಎಸ್​ವೈ ಜನರ ನಿರೀಕ್ಷೆ ಈಡೇರಿಸ್ತಾರಾ..? ಯಾವ ಯೋಜನೆಗಳಿಗೆ ಆದ್ಯತೆ ನೀಡಬಹುದು ಅಂತಾ ನೊಡೋದಾದ್ರೆ.. ಬಹುನಿರೀಕ್ಷಿತ ರಾಜ್ಯ ಬಜೆಟ್ ಮಂಡನೆಗೆ ಕೌಂಟ್​ಡೌನ್ ಶುರುವಾಗಿದೆ. ರಾಜ್ಯದ ಆರ್ಥಿಕ ಪರಸ್ಥಿತಿ ಅಷ್ಟೇನು ಉತ್ತಮವಾಗಿಲ್ಲ ಅನ್ನೋ ಅನುಮಾನಗಳ ನಡುವೆ. ಸಿಎಂ ಯಡಿಯೂರಪ್ಪ ಇಂದು ಬಜೆಟ್ ಮಂಡಿಸಲಿದ್ದಾರೆ. ಸಿಎಂ ಬಿಎಸ್​ವೈ ಮಂಡಿಸೋ ಈ […]

ರಾಜ್ಯ ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆ, ತೆರಿಗೆ ಏರುತ್ತಾ.. ನೀರಾವರಿ, ರೈತರಿಗೆ ಸಿಗುತ್ತಾ ಬಂಪರ್ ಗಿಫ್ಟ್ ?
ಸಿಎಂ ಯಡಿಯೂರಪ್ಪ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Mar 05, 2020 | 10:52 AM

Share

ಬೆಂಗಳೂರು: ಮಹತ್ವಾಕಾಂಕ್ಷೆಯ ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಶುರು ಆಗಿದೆ. ಹೀಗಾಗಿಯೇ ಇಂದು ಸಿಎಂ ಯಡಿಯೂರಪ್ಪ ಮಂಡಿಸಲಿರೋ ಬಜೆಟ್ ಮೇಲೆ ರಾಜ್ಯದ ಜನ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇಷ್ಟಕ್ಕೂ ಸಿಎಂ ಬಿಎಸ್​ವೈ ಜನರ ನಿರೀಕ್ಷೆ ಈಡೇರಿಸ್ತಾರಾ..? ಯಾವ ಯೋಜನೆಗಳಿಗೆ ಆದ್ಯತೆ ನೀಡಬಹುದು ಅಂತಾ ನೊಡೋದಾದ್ರೆ..

ಬಹುನಿರೀಕ್ಷಿತ ರಾಜ್ಯ ಬಜೆಟ್ ಮಂಡನೆಗೆ ಕೌಂಟ್​ಡೌನ್ ಶುರುವಾಗಿದೆ. ರಾಜ್ಯದ ಆರ್ಥಿಕ ಪರಸ್ಥಿತಿ ಅಷ್ಟೇನು ಉತ್ತಮವಾಗಿಲ್ಲ ಅನ್ನೋ ಅನುಮಾನಗಳ ನಡುವೆ. ಸಿಎಂ ಯಡಿಯೂರಪ್ಪ ಇಂದು ಬಜೆಟ್ ಮಂಡಿಸಲಿದ್ದಾರೆ. ಸಿಎಂ ಬಿಎಸ್​ವೈ ಮಂಡಿಸೋ ಈ ಬಜೆಟ್​ನತ್ತ ಎಲ್ಲರ ಚಿತ್ತ ನೆಟ್ಟಿದೆ. ಬಜೆಟ್​ನಲ್ಲಿ ಯಾಱರಿಗೆ ಏನೇನು ಸಿಗಬಹುದು..? ತೆರಿಗೆ ಏರಿಸಿ ಜನರಿಗೆ ಹೊರೆ ಹೇರ್ತಾರಾ..? ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ಕೊಡ್ತಾರಾ..? ಮೂಲ ಸೌಕರ್ಯ ಕ್ಷೇತ್ರಕ್ಕೆ ಸಂಪನ್ಮೂಲ ಹೆಚ್ಚು ಮಾಡ್ತಾರಾ ಅನ್ನೋ ಪ್ರಶ್ನೆಗಳು ತಲೆ ಎತ್ತಿವೆ. ಇದರ ನಡುವೆ, ಈ ಬಾರಿಯ ಬಜೆಟ್ ಗಾತ್ರ ಭಾರಿ ಏರಿಕೆ ಕಾಣಲ್ಲ ಅನ್ನೋ ಮಾತುಗಳು ಕೇಳಿ ಬರ್ತಿವೆ.

ಬಜೆಟ್​ನಲ್ಲಿ ಜನಪ್ರಿಯ ಯೋಜನೆಗಳಿಗೆ ಬೀಳುತ್ತಾ ಬ್ರೇಕ್​..? ಸಿಎಂ ಯಡಿಯೂರಪ್ಪ ಇಂದು ಬಜೆಟ್ ಮಂಡನೆ ಮಾಡಲು ಸೂಕ್ತ ತಯಾರಿ ಮಾಡಿಕೊಂಡಿದ್ದಾರೆ. ಇದಕ್ಕಾಗಿ ನಾನಾ ಇಲಾಖೆಗಳ ಅಧಿಕಾರಿಗಳ ಜೊತೆ ಹಲವು ಸುತ್ತಿನ ಮಾತುಕತೆಗಳನ್ನ ನಡೆಸಿದ್ದಾರೆ. ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನ ಗಮನದಲ್ಲಿಟ್ಟುಕೊಂಡು, ಆರ್ಥಿಕ ಶಿಸ್ತಿಗೆ ಹೆಚ್ಚಿನ ಒತ್ತು ನೀಡುವ ಸಾಧ್ಯತೆ ಇದೆ ಅಂತಾ ಬಜೆಟ್ ಸಭೆಯಲ್ಲಿ ಭಾಗಿಯಾಗಿದ್ದ ಅಧಿಕಾರಿಗಳು ಹೇಳಿದ್ದಾರೆ.

ಹೀಗಾಗಿ ಬಜೆಟ್​ನಲ್ಲಿ ಜನಪ್ರಿಯ ಯೋಜನೆಗಳಿಗೆ ಬ್ರೇಕ್ ಬೀಳೋ ಸಾಧ್ಯತೆಗಳು ದಟ್ಟವಾಗಿ ಕಂಡು ಬರ್ತಿವೆ. ಇದರ ಬದಲಿಗೆ ಕೃಷಿಕರು ಮತ್ತು ಬಡವರ ಕಲ್ಯಾಣ ಕಾರ್ಯಕ್ರಮಗಳಿಗೆ ಆದ್ಯತೆ ನೀಡುವ ಸಾಧ್ಯತೆ ಇದೆ ಅಂತಾ ಹೇಳಲಾಗ್ತಿದೆ.

ಕಳೆದ ಬಾರಿ ಬಜೆಟ್ ಮಂಡನೆ ಮಾಡಿದ್ದ ಅಂದಿನ ಸಿಎಂ ಹೆಚ್​.ಡಿ.ಕುಮಾರಸ್ವಾಮಿ, 2 ಲಕ್ಷ 34 ಸಾವಿರ ಕೋಟಿ ರೂಪಾಯಿ ಬಜೆಟ್ ಮಂಡಿಸಿದ್ರು. ಈ ಬಾರಿ ಬಜೆಟ್ ಗಾತ್ರದಲ್ಲಿ ಅಲ್ಪ ಏರಿಕೆಯಾಗೋ ಸಾಧ್ಯತೆ ಇದೆ. ಹೀಗಾಗಿ ಬಜೆಟ್​ 2 ಲಕ್ಷ 40 ಸಾವಿರ ರೂಪಾಯಿ ಆಸುಪಾಸಿನಲ್ಲಿರಬಹುದು ಅನ್ನೋ ಲೆಕ್ಕಾಚಾರ ಇದೆ. ಕೃಷಿ, ನೀರಾವರಿ, ಲೋಕೋಪಯೋಗಿ, ಸಮಾಜ ಕಲ್ಯಾಣಕ್ಕೆ ಬಜೆಟ್​ನಲ್ಲಿ ಹೆಚ್ಚಿನ ಆದ್ಯತೆ ನೀಡೋ ಸಾಧ್ಯತೆ ಇದೆ. ಹೀಗಾಗಿ ಬಜೆಟ್​ನಿಂದ ಏನನ್ನ ನಿರೀಕ್ಷಿಸಬಹುದು ಅನ್ನೋದನ್ನ ನೋಡೋದಾದ್ರೆ,

ಬಜೆಟ್ ನಿರೀಕ್ಷೆಗಳೇನು..? ಯಡಿಯೂರಪ್ಪ ಇಂದು ಮಂಡಿಸಲಿರೋ ಬಜೆಟ್​ನಲ್ಲಿ ಕೃಷಿ ಉತ್ಪನ್ನಗಳಿಗೆ ಹೆಚ್ಚಿನ ಬೆಂಬಲ ಬೆಲೆ ನೀಡುವ ಘೋಷಣೆ ಮಾಡೋ ಸಾಧ್ಯತೆ ಇದೆ. ಇದರ ಜೊತೆಗೆ ನೀರಾವರಿಗೆ ಹೆಚ್ಚಿನ ಒತ್ತು ನೀಡುವುದರ ಜೊತೆಗೆ ಎತ್ತಿನಹೊಳೆ ಯೋಜನೆ ಬೇಗ ಪೂರ್ಣಗೊಳಿಸಲು ಅನುದಾನ ಘೋಷಿಸುವ ಸಾಧ್ಯತೆ ಇದೆ. ಜೊತೆ ಜೊತೆಗೆ ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ನೀಡೋ ಸಾಧ್ಯತೆ ಇದೆ.

ಬಡವರ ಹಸಿವು ನೀಗಿಸ್ತಿರೋ ಅನ್ನಭಾಗ್ಯ ಯೋಜನೆ‌ ಅಡಿ ಅಕ್ಕಿ ಜೊತೆಗೆ ಗೋಧಿ ವಿತರಣೆ ಮಾಡುವುದಕ್ಕೂ ಬಜೆಟ್​ನಲ್ಲಿ ಒತ್ತು ನೀಡೋ ಸಾಧ್ಯತೆ ಇದೆ. ಅಲ್ದೆ, ಮಕ್ಕಳು ಹಾಗೂ ಮಹಿಳೆಯರಿಗೆ ವಿಶೇಷ ಕಾರ್ಯಕ್ರಮ ರೂಪಿಸಿರೋ ಜೊತೆಗೆ ಹೊಸ ಸ್ವರೂಪದಲ್ಲಿ ಭಾಗ್ಯ ಲಕ್ಷ್ಮಿ ಯೋಜನೆ ಜಾರಿ ಮಾಡುವ ಸಾಧ್ಯತೆ ಇದೆ. ಬಜೆಟ್​ನಲ್ಲಿ ಅತ್ಯಂತ ಪ್ರಮುಖವಾಗಿ ಶಿಕ್ಷಣ, ಆರೋಗ್ಯ, ಲೋಕೋಪಯೋಗಿ, ಸಮಾಜ ಕಲ್ಯಾಣಕ್ಕೆ ಒತ್ತು ನೀಡಬಹುದು ಅನ್ನೋ ಮಾತುಗಳು ಕೇಳಿ ಬರ್ತಿವೆ.

ಬಜೆಟ್ ತಯಾರಿ ವೇಳೆ ಸಿಎಂ ಆರ್ಥಿಕ ಇಲಾಖೆ ಅಧಿಕಾರಿಗಳ ಮಾತಿಗೆ ಹೆಚ್ಚಿನ ಮನ್ನಣೆ ನೀಡಿದ್ದಾರೆ ಅಂತಾ ಹೇಳಲಾಗ್ತಿದೆ. ಇದರ ಪ್ರಕಾರ, ಬೊಕ್ಕಸಕ್ಕೆ ಹೊರೆಯಾಗೋ ಜನಪ್ರಿಯ ಯೋಜನೆಗಳ ಘೋಷಿಸುವ ಬದಲು, ಜನಪರ ಯೋಜನೆಗಳಿಗೆ ಆದ್ಯತೆ ಕೊಡಬಹುದು ಅನ್ನೋ ಮಾತುಗಳು ಕೇಳಿ ಬರ್ತಿವೆ. ಒಟ್ನಲ್ಲಿ, ಆರ್ಥಿಕ ಸಂಕಷ್ಟದ ನಡುವೆ ಕೃಷಿಕರಿಗೆ ಹಿತವಾಗುವ, ಬಡವರಿಗೆ ಖುಷಿ ನೀಡುವ ಮತ್ತು ಮಧ್ಯಮ ವರ್ಗದವರಿಗೆ ಹೊರೆ ಆಗದ ಬಜೆಟ್ ತಯಾರಿ ಮಾಡಿದ್ದಾರೆ ಎನ್ನಲಾಗ್ತಿದೆ. ಇದು ನಿಜವೇ ಅನ್ನೋದು ಬಜೆಟ್ ಮಂಡನೆ ಬಳಿಕ ಗೊತ್ತಾಗಲಿದೆ.

Published On - 8:33 am, Thu, 5 March 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ