AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಇಳಿವಯಸ್ಸಿನಲ್ಲೂ ಓಡಾಡಿ ಕೆಲಸ ಮಾಡುತ್ತಿದ್ದಾರೆ: ವಿನಯ್ ಗುರೂಜಿ

ಪಿತೃಶಾಪ ನಿವಾರಣೆಗಾಗಿ ಗೋಕರ್ಣಕ್ಕೆ ಹೋಗುತ್ತೇವೆ. ಅದರ ಬದಲು ಆ ಹಣವನ್ನು ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಕೊಡಿ ಎಂದು ಬೆಂಗಳೂರಿನಲ್ಲಿ ವಿನಯ್ ಗುರೂಜಿ ಮನವಿ ಮಾಡಿದ್ದಾರೆ

ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಇಳಿವಯಸ್ಸಿನಲ್ಲೂ ಓಡಾಡಿ ಕೆಲಸ ಮಾಡುತ್ತಿದ್ದಾರೆ: ವಿನಯ್ ಗುರೂಜಿ
ವಿನಯ್ ಗುರೂಜಿ
TV9 Web
| Edited By: |

Updated on:Jul 03, 2021 | 1:54 PM

Share

ಬೆಂಗಳೂರು: ಪಿತೃಶಾಪ ನಿವಾರಣೆಗಾಗಿ ಗೋಕರ್ಣಕ್ಕೆ ಹೋಗುತ್ತೇವೆ. ಅದರ ಬದಲು ಆ ಹಣವನ್ನು ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಕೊಡಿ. ಐಟಿ ಕಂಪನಿಯಲ್ಲಿ ಕೆಲಸ ಮಾಡುವವರು ಅದರಲ್ಲೂ 1.5 ಲಕ್ಷ ಸಂಬಳ ಪಡೆಯುವವರು ಈ ಮಕ್ಕಳಿಗೆ ಸಹಾಯ ಮಾಡಿ. ಲಕ್ಷ ಲಕ್ಷ ಸಂಬಳ ಪಡೆಯುವವರು 5 ಸಾವಿರ ರೂಪಾಯಿ ಹಣವನ್ನು ಕೊರೊನಾದಿಂದ ಮೃತಪಟ್ಟ ಕುಟುಂಬಕ್ಕೆ ನೀಡಿ ಎಂದು ಬೆಂಗಳೂರಿನಲ್ಲಿ ವಿನಯ್ ಗುರೂಜಿ ಮನವಿ ಮಾಡಿದ್ದಾರೆ.

ಬಳಿಕ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರ ಕುರಿತು ಮಾತನಾಡಿದ ವಿನಯ್ ಗುರೂಜಿ, ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಇಳಿವಯಸ್ಸಿನಲ್ಲೂ ಓಡಾಡಿ ಕೆಲಸ ಮಾಡುತ್ತಿದ್ದಾರೆ. ನಮಗೆ ಆ ವಯಸ್ಸು ಬಂದರೆ ಓಡಾಡುವುದಕ್ಕೆ ಆಗುತ್ತೋ ಇಲ್ವೊ ಎಂದು ಹೇಳಿದ್ದಾರೆ.

3ನೇ ಅಲೆಯ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ ಎಂದು ಸಿಎಂಗೆ ವಿನಯ್ ಗುರೂಜಿ ಸಲಹೆ ಕೊರೊನಾ 2ನೇ ಅಲೆ ಅಬ್ಬರ ಇನ್ನೂ ಮುಗಿದಿಲ್ಲ. ಅಷ್ಟರಲ್ಲಾಗಲೇ ಮೂರನೇ ಅಲೆ ಆತಂಕ ಎಲ್ಲೆಡೆ ಮನೆಮಾಡಿದೆ. ಮಹಾಮಾರಿಯ 2ನೇ ಹೊಡೆತದಿಂದ ತತ್ತರಿಸಿರೋ ಜನ ಇನ್ನೇನು ವೈರಸ್ ಕಪಿಮುಷ್ಠಿಯಿಂದ ಹೊರಬರಬೇಕು ಅನ್ನುವಷ್ಟರಲ್ಲಿ ಮತ್ತೊಂದು ಅಟ್ಯಾಕ್ ಕಟ್ಟಿಟ್ಟ ಬುತ್ತಿ ಅಂತಿದ್ದಾರೆ ತಜ್ಞರು. ಇನ್ನು ಕೆಲವೇ ತಿಂಗಳಲ್ಲಿ ಕೊರೊನಾ ಮತ್ತೊಂದು ದಾಳಿಗೂ ನಾವು ಸಜ್ಜಾಗಬೇಕಿದೆ. 3ನೇ ಅಲೆಗೆ ಸಜ್ಜಾಗುವಂತೆ ಸಿಎಂ ಬಿಎಸ್‌ವೈಗೆ ವಿನಯ್ ಗುರೂಜಿ ಸಲಹೆ ನೀಡಿದ್ದಾರೆ. ತಜ್ಞರು ಹೇಳಿದಂತೆ ಕೊರೊನಾ ಸೋಂಕು ಹರಡುತ್ತಿದೆ. ಹೀಗಾಗಿ 3ನೇ ಅಲೆಯ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ. ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸಿಎಂ ಭೇಟಿ ವೇಳೆ ಸಲಹೆ ನೀಡಿದ್ದಾರೆ. ಹಾಗೂ ಅಕೇಶಿಯಾ ಗಿಡ ನೆಡುವುದಕ್ಕೆ ರಾಜ್ಯದಲ್ಲಿ ಅವಕಾಶ ನೀಡಬಾರದು ಎಂದು ಸಿಎಂಗೆ ಮನವಿ ಮಾಡಿದ್ದಾರೆ.

ಎರಡು ತಿಂಗಳಲ್ಲೇ ಭಾರತಕ್ಕೆ ಕೊರೊನಾ 3ನೇ ಅಲೆ ಅಟ್ಯಾಕ್ ಭಾರತವು ಕೊರೊನಾದ ಮೂರನೇ ಅಲೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಭಾರತದಲ್ಲಿ ಮುಂದಿನ 6 ರಿಂದ 8 ವಾರಗಳಲ್ಲಿ ಕೊರೊನಾದ ಮೂರನೇ ಅಲೆ ಬರಬಹುದು ಅಂತಾ ದೆಹಲಿಯ ಏಮ್ಸ್ ಆಸ್ಪತ್ರೆಯ ಮುಖ್ಯಸ್ಥ ರಣದೀಪ್ ಗುಲೇರಿಯಾ ಶಾಕಿಂಗ್ ನ್ಯೂಸ್ ಕೊಟ್ಟಿದ್ದಾರೆ. ಕೊರೊನಾದ ಮೂರನೇ ಅಲೆಯನ್ನು ತಡೆಯಲಾಗಲ್ಲ. ಮೂರನೇ ಅಲೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಇನ್ನೆರಡು ತಿಂಗಳಲ್ಲೇ ಕೊರೊನಾದ ಮೂರನೇ ಅವತಾರ ದೇಶದಲ್ಲಿ ಮತ್ತೆ ಹಾಹಾಕರ ಸೃಷ್ಟಿಸಬಹುದು ಅಂತಾ ಗುಲೇರಿಯಾ ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಭಾರತಕ್ಕೆ ಅಪ್ಪಳಿಸಲಿದೆಯಾ ಕೊರೊನಾ 3ನೇ ಅಲೆ.. 3ನೇ ಅಲೆಯ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ ಎಂದು ಸಿಎಂಗೆ ವಿನಯ್ ಗುರೂಜಿ ಸಲಹೆ

National Flag ರಾಷ್ಟ್ರಧ್ವಜ ತಯಾರಕರಿಗೆ ನೆರವು ನೀಡುವಂತೆ ವಿನಯ್ ಗುರೂಜಿ ಮನವಿ!

Published On - 1:52 pm, Sat, 3 July 21

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು