AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಇಳಿವಯಸ್ಸಿನಲ್ಲೂ ಓಡಾಡಿ ಕೆಲಸ ಮಾಡುತ್ತಿದ್ದಾರೆ: ವಿನಯ್ ಗುರೂಜಿ

ಪಿತೃಶಾಪ ನಿವಾರಣೆಗಾಗಿ ಗೋಕರ್ಣಕ್ಕೆ ಹೋಗುತ್ತೇವೆ. ಅದರ ಬದಲು ಆ ಹಣವನ್ನು ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಕೊಡಿ ಎಂದು ಬೆಂಗಳೂರಿನಲ್ಲಿ ವಿನಯ್ ಗುರೂಜಿ ಮನವಿ ಮಾಡಿದ್ದಾರೆ

ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಇಳಿವಯಸ್ಸಿನಲ್ಲೂ ಓಡಾಡಿ ಕೆಲಸ ಮಾಡುತ್ತಿದ್ದಾರೆ: ವಿನಯ್ ಗುರೂಜಿ
ವಿನಯ್ ಗುರೂಜಿ
TV9 Web
| Edited By: |

Updated on:Jul 03, 2021 | 1:54 PM

Share

ಬೆಂಗಳೂರು: ಪಿತೃಶಾಪ ನಿವಾರಣೆಗಾಗಿ ಗೋಕರ್ಣಕ್ಕೆ ಹೋಗುತ್ತೇವೆ. ಅದರ ಬದಲು ಆ ಹಣವನ್ನು ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಕೊಡಿ. ಐಟಿ ಕಂಪನಿಯಲ್ಲಿ ಕೆಲಸ ಮಾಡುವವರು ಅದರಲ್ಲೂ 1.5 ಲಕ್ಷ ಸಂಬಳ ಪಡೆಯುವವರು ಈ ಮಕ್ಕಳಿಗೆ ಸಹಾಯ ಮಾಡಿ. ಲಕ್ಷ ಲಕ್ಷ ಸಂಬಳ ಪಡೆಯುವವರು 5 ಸಾವಿರ ರೂಪಾಯಿ ಹಣವನ್ನು ಕೊರೊನಾದಿಂದ ಮೃತಪಟ್ಟ ಕುಟುಂಬಕ್ಕೆ ನೀಡಿ ಎಂದು ಬೆಂಗಳೂರಿನಲ್ಲಿ ವಿನಯ್ ಗುರೂಜಿ ಮನವಿ ಮಾಡಿದ್ದಾರೆ.

ಬಳಿಕ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರ ಕುರಿತು ಮಾತನಾಡಿದ ವಿನಯ್ ಗುರೂಜಿ, ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಇಳಿವಯಸ್ಸಿನಲ್ಲೂ ಓಡಾಡಿ ಕೆಲಸ ಮಾಡುತ್ತಿದ್ದಾರೆ. ನಮಗೆ ಆ ವಯಸ್ಸು ಬಂದರೆ ಓಡಾಡುವುದಕ್ಕೆ ಆಗುತ್ತೋ ಇಲ್ವೊ ಎಂದು ಹೇಳಿದ್ದಾರೆ.

3ನೇ ಅಲೆಯ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ ಎಂದು ಸಿಎಂಗೆ ವಿನಯ್ ಗುರೂಜಿ ಸಲಹೆ ಕೊರೊನಾ 2ನೇ ಅಲೆ ಅಬ್ಬರ ಇನ್ನೂ ಮುಗಿದಿಲ್ಲ. ಅಷ್ಟರಲ್ಲಾಗಲೇ ಮೂರನೇ ಅಲೆ ಆತಂಕ ಎಲ್ಲೆಡೆ ಮನೆಮಾಡಿದೆ. ಮಹಾಮಾರಿಯ 2ನೇ ಹೊಡೆತದಿಂದ ತತ್ತರಿಸಿರೋ ಜನ ಇನ್ನೇನು ವೈರಸ್ ಕಪಿಮುಷ್ಠಿಯಿಂದ ಹೊರಬರಬೇಕು ಅನ್ನುವಷ್ಟರಲ್ಲಿ ಮತ್ತೊಂದು ಅಟ್ಯಾಕ್ ಕಟ್ಟಿಟ್ಟ ಬುತ್ತಿ ಅಂತಿದ್ದಾರೆ ತಜ್ಞರು. ಇನ್ನು ಕೆಲವೇ ತಿಂಗಳಲ್ಲಿ ಕೊರೊನಾ ಮತ್ತೊಂದು ದಾಳಿಗೂ ನಾವು ಸಜ್ಜಾಗಬೇಕಿದೆ. 3ನೇ ಅಲೆಗೆ ಸಜ್ಜಾಗುವಂತೆ ಸಿಎಂ ಬಿಎಸ್‌ವೈಗೆ ವಿನಯ್ ಗುರೂಜಿ ಸಲಹೆ ನೀಡಿದ್ದಾರೆ. ತಜ್ಞರು ಹೇಳಿದಂತೆ ಕೊರೊನಾ ಸೋಂಕು ಹರಡುತ್ತಿದೆ. ಹೀಗಾಗಿ 3ನೇ ಅಲೆಯ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ. ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸಿಎಂ ಭೇಟಿ ವೇಳೆ ಸಲಹೆ ನೀಡಿದ್ದಾರೆ. ಹಾಗೂ ಅಕೇಶಿಯಾ ಗಿಡ ನೆಡುವುದಕ್ಕೆ ರಾಜ್ಯದಲ್ಲಿ ಅವಕಾಶ ನೀಡಬಾರದು ಎಂದು ಸಿಎಂಗೆ ಮನವಿ ಮಾಡಿದ್ದಾರೆ.

ಎರಡು ತಿಂಗಳಲ್ಲೇ ಭಾರತಕ್ಕೆ ಕೊರೊನಾ 3ನೇ ಅಲೆ ಅಟ್ಯಾಕ್ ಭಾರತವು ಕೊರೊನಾದ ಮೂರನೇ ಅಲೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಭಾರತದಲ್ಲಿ ಮುಂದಿನ 6 ರಿಂದ 8 ವಾರಗಳಲ್ಲಿ ಕೊರೊನಾದ ಮೂರನೇ ಅಲೆ ಬರಬಹುದು ಅಂತಾ ದೆಹಲಿಯ ಏಮ್ಸ್ ಆಸ್ಪತ್ರೆಯ ಮುಖ್ಯಸ್ಥ ರಣದೀಪ್ ಗುಲೇರಿಯಾ ಶಾಕಿಂಗ್ ನ್ಯೂಸ್ ಕೊಟ್ಟಿದ್ದಾರೆ. ಕೊರೊನಾದ ಮೂರನೇ ಅಲೆಯನ್ನು ತಡೆಯಲಾಗಲ್ಲ. ಮೂರನೇ ಅಲೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಇನ್ನೆರಡು ತಿಂಗಳಲ್ಲೇ ಕೊರೊನಾದ ಮೂರನೇ ಅವತಾರ ದೇಶದಲ್ಲಿ ಮತ್ತೆ ಹಾಹಾಕರ ಸೃಷ್ಟಿಸಬಹುದು ಅಂತಾ ಗುಲೇರಿಯಾ ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಭಾರತಕ್ಕೆ ಅಪ್ಪಳಿಸಲಿದೆಯಾ ಕೊರೊನಾ 3ನೇ ಅಲೆ.. 3ನೇ ಅಲೆಯ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ ಎಂದು ಸಿಎಂಗೆ ವಿನಯ್ ಗುರೂಜಿ ಸಲಹೆ

National Flag ರಾಷ್ಟ್ರಧ್ವಜ ತಯಾರಕರಿಗೆ ನೆರವು ನೀಡುವಂತೆ ವಿನಯ್ ಗುರೂಜಿ ಮನವಿ!

Published On - 1:52 pm, Sat, 3 July 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?