AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವುದೇ ಹೊಸ ಯೋಜನೆ ಘೋಷಣೆ ಮಾಡುವುದಿಲ್ಲ: ಸಿಎಂ ಯಡಿಯೂರಪ್ಪ ಹೀಗ್ಯಾಕಂದ್ರು?

ಬೆಂಗಳೂರು: ಆರು ವಲಯಗಳಾಗಿ ವಿಂಗಡಿಸಿ 2020-21ನೇ ಸಾಲಿನ ಬಜೆಟ್ ಮಂಡಿಸಲಾಗಿದೆ. ರಾಜ್ಯ ಆರ್ಥಿಕ ಸಂಕಷ್ಟವನ್ನ ಅನುಭವಿಸುತ್ತಿದೆ. ಹಿಂದೆಂದೂ ಇಂತಹ ಪರಿಸ್ಥಿತಿ ಎದುರಿಸಿರಲಿಲ್ಲ. ಕೇಂದ್ರ ಸರ್ಕಾರದಿಂದ ಬರಬೇಕಾದ ಹಣ ಬಂದಿಲ್ಲ. ಹೀಗಾಗಿ ಯಾವುದೇ ಹೊಸ ಯೋಜನೆ ಘೋಷಣೆ ಮಾಡಲ್ಲ ಎಂದು 7ನೇ ಬಾರಿ ಬಜೆಟ್ ಮಂಡಿಸುತ್ತಿರುವ ಸಿಎಂ ಯಡಿಯೂರಪ್ಪ ಬಜೆಟ್ ಮಂಡನೆ ವೇಳೆ ತಿಳಿಸಿದ್ದಾರೆ. ಈ ಬಾರಿ ಬಜೆಟ್​ ಅನ್ನು ಇಲಾಖಾವಾರು ವಿಂಗಡಣೆ ಮಾಡಿಲ್ಲ. ಆರು ವಲಯಗಳಾಗಿ ವಿಂಗಡಣೆ ಮಾಡಿ ಮಂಡನೆ ಮಾಡಲಾಗಿದೆ. ವಲಯ 1: ಕೃಷಿ ಮತ್ತು […]

ಯಾವುದೇ ಹೊಸ ಯೋಜನೆ ಘೋಷಣೆ ಮಾಡುವುದಿಲ್ಲ: ಸಿಎಂ ಯಡಿಯೂರಪ್ಪ ಹೀಗ್ಯಾಕಂದ್ರು?
ಸಾಧು ಶ್ರೀನಾಥ್​
|

Updated on:Mar 05, 2020 | 1:27 PM

Share

ಬೆಂಗಳೂರು: ಆರು ವಲಯಗಳಾಗಿ ವಿಂಗಡಿಸಿ 2020-21ನೇ ಸಾಲಿನ ಬಜೆಟ್ ಮಂಡಿಸಲಾಗಿದೆ. ರಾಜ್ಯ ಆರ್ಥಿಕ ಸಂಕಷ್ಟವನ್ನ ಅನುಭವಿಸುತ್ತಿದೆ. ಹಿಂದೆಂದೂ ಇಂತಹ ಪರಿಸ್ಥಿತಿ ಎದುರಿಸಿರಲಿಲ್ಲ. ಕೇಂದ್ರ ಸರ್ಕಾರದಿಂದ ಬರಬೇಕಾದ ಹಣ ಬಂದಿಲ್ಲ. ಹೀಗಾಗಿ ಯಾವುದೇ ಹೊಸ ಯೋಜನೆ ಘೋಷಣೆ ಮಾಡಲ್ಲ ಎಂದು 7ನೇ ಬಾರಿ ಬಜೆಟ್ ಮಂಡಿಸುತ್ತಿರುವ ಸಿಎಂ ಯಡಿಯೂರಪ್ಪ ಬಜೆಟ್ ಮಂಡನೆ ವೇಳೆ ತಿಳಿಸಿದ್ದಾರೆ.

ಈ ಬಾರಿ ಬಜೆಟ್​ ಅನ್ನು ಇಲಾಖಾವಾರು ವಿಂಗಡಣೆ ಮಾಡಿಲ್ಲ. ಆರು ವಲಯಗಳಾಗಿ ವಿಂಗಡಣೆ ಮಾಡಿ ಮಂಡನೆ ಮಾಡಲಾಗಿದೆ.

ವಲಯ 1: ಕೃಷಿ ಮತ್ತು ಪೂರಕ ಚಟುವಟಿಕೆಗಳು ವಲಯ 2: ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ ವಲಯ 3: ಆರ್ಥಿಕ ಅಭಿವೃದ್ಧಿಗೆ ಪ್ರಚೋದನೆ ವಲಯ 4: ಬೆಂಗಳೂರು ಸಮಗ್ರ ಅಭಿವೃದ್ಧಿ ವಲಯ 5: ಸಂಸ್ಕೃತಿ, ಪರಂಪರೆ ಹಾಗೂ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ವಲಯ 6: ಅಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವೆಗಳು

ಕೃಷಿ ಮತ್ತು ಪೂರಕ ಚಟುವಟಿಕೆಗಳು: ಸರ್ಕಾರದಿಂದ ಹೊಸ ಕೃಷಿ ನೀತಿ ಜಾರಿಗೊಳಿಸಲಾಗುವುದು. ತೋಟಗಾರಿಕೆಯನ್ನು ಉದ್ದಿಮೆಯಾಗಿ ಪರಿಗಣಿಸಲು ನಿರ್ಧರಿಸಲಾಗಿದೆ. ಕೃಷಿ ವಲಯಕ್ಕೆ ಹೊಸ ಆಯಾಮ ನೀಡಲು ಪ್ರಯತ್ನಿಸಲಾಗುವುದು. ಸಂಚಾರಿ ಕೃಷಿ ಹೆಲ್ತ್ ಕ್ಲಿನಿಕ್ ಪ್ರಾರಂಭಿಸಲಾಗುವುದು. ಸಾವಯವ ಕೃಷಿಗೆ ₹200 ಕೋಟಿ ಅನುದಾನ ನೀಡಲಾಗುತ್ತೆ ಎಂದರು. ಇದೇ ವೇಳೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ಯಡಿಯೂರಪ್ಪ ಮರು ಘೋಷಣೆ ಮಾಡಿದರು.

ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಸಾಲ ಯೋಜನೆ ನೀಡಲಾಗುವುದು. ಸಿರಿಧಾನ್ಯ ಖರೀದಿಗೆ ರೈತರಿಗೆ ಪ್ರತಿ ಹೆಕ್ಟೇರಿಗೆ 10 ರಿಂದ 20 ಸಾವಿರ ಪ್ರೋತ್ಸಾಹ ಧನ ನೀಡಲಾಗುವುದು. ಮಣ್ಣು ಪರೀಕ್ಷೆ ಸಹಿತ ರೈತರಿಗೆ ಕೃಷಿಯಲ್ಲಿ ಸಹಕಾರಿಯಾಗಲಿದೆ. ಕೃಷಿ ಉತ್ಪಾದನೆ ಹೆಚ್ಚಿಸಲು ಆದ್ಯತೆ ನೀಡಲಾಗುತ್ತದೆ. ಇದಕ್ಕಾಗಿ ರಾಜ್ಯದ 40 ಕಡೆಗಳಲ್ಲಿ ಕೇಂದ್ರಗಳನ್ನು ತೆರೆಯಲಾಗುವುದು.

ಕೃಷಿ ವಲಯಕ್ಕೆ ಬಜೆಟ್‌ನಲ್ಲಿ 32,259 ಕೋಟಿ ರೂಪಾಯಿ ಮೀಸಲಿಡಲಾಗುವುದು. ನೀರಿನ ಭದ್ರತೆ, ಭೂ ಸಂಚಯ ಮತ್ತು ಸಾಮೂಹಿಕ ಕೃಷಿ ಹಾಗೂ ಕೃಷಿ ಉತ್ಪನ್ನಗಳ ಸಂಸ್ಕರಣೆ, ಮಾರುಕಟ್ಟೆಗೆ ಉತ್ತೇಜನ ನೀಡಲಾಗುವುದು.

Published On - 11:49 am, Thu, 5 March 20

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?