AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವುದೇ ಹೊಸ ಯೋಜನೆ ಘೋಷಣೆ ಮಾಡುವುದಿಲ್ಲ: ಸಿಎಂ ಯಡಿಯೂರಪ್ಪ ಹೀಗ್ಯಾಕಂದ್ರು?

ಬೆಂಗಳೂರು: ಆರು ವಲಯಗಳಾಗಿ ವಿಂಗಡಿಸಿ 2020-21ನೇ ಸಾಲಿನ ಬಜೆಟ್ ಮಂಡಿಸಲಾಗಿದೆ. ರಾಜ್ಯ ಆರ್ಥಿಕ ಸಂಕಷ್ಟವನ್ನ ಅನುಭವಿಸುತ್ತಿದೆ. ಹಿಂದೆಂದೂ ಇಂತಹ ಪರಿಸ್ಥಿತಿ ಎದುರಿಸಿರಲಿಲ್ಲ. ಕೇಂದ್ರ ಸರ್ಕಾರದಿಂದ ಬರಬೇಕಾದ ಹಣ ಬಂದಿಲ್ಲ. ಹೀಗಾಗಿ ಯಾವುದೇ ಹೊಸ ಯೋಜನೆ ಘೋಷಣೆ ಮಾಡಲ್ಲ ಎಂದು 7ನೇ ಬಾರಿ ಬಜೆಟ್ ಮಂಡಿಸುತ್ತಿರುವ ಸಿಎಂ ಯಡಿಯೂರಪ್ಪ ಬಜೆಟ್ ಮಂಡನೆ ವೇಳೆ ತಿಳಿಸಿದ್ದಾರೆ. ಈ ಬಾರಿ ಬಜೆಟ್​ ಅನ್ನು ಇಲಾಖಾವಾರು ವಿಂಗಡಣೆ ಮಾಡಿಲ್ಲ. ಆರು ವಲಯಗಳಾಗಿ ವಿಂಗಡಣೆ ಮಾಡಿ ಮಂಡನೆ ಮಾಡಲಾಗಿದೆ. ವಲಯ 1: ಕೃಷಿ ಮತ್ತು […]

ಯಾವುದೇ ಹೊಸ ಯೋಜನೆ ಘೋಷಣೆ ಮಾಡುವುದಿಲ್ಲ: ಸಿಎಂ ಯಡಿಯೂರಪ್ಪ ಹೀಗ್ಯಾಕಂದ್ರು?
ಸಾಧು ಶ್ರೀನಾಥ್​
|

Updated on:Mar 05, 2020 | 1:27 PM

Share

ಬೆಂಗಳೂರು: ಆರು ವಲಯಗಳಾಗಿ ವಿಂಗಡಿಸಿ 2020-21ನೇ ಸಾಲಿನ ಬಜೆಟ್ ಮಂಡಿಸಲಾಗಿದೆ. ರಾಜ್ಯ ಆರ್ಥಿಕ ಸಂಕಷ್ಟವನ್ನ ಅನುಭವಿಸುತ್ತಿದೆ. ಹಿಂದೆಂದೂ ಇಂತಹ ಪರಿಸ್ಥಿತಿ ಎದುರಿಸಿರಲಿಲ್ಲ. ಕೇಂದ್ರ ಸರ್ಕಾರದಿಂದ ಬರಬೇಕಾದ ಹಣ ಬಂದಿಲ್ಲ. ಹೀಗಾಗಿ ಯಾವುದೇ ಹೊಸ ಯೋಜನೆ ಘೋಷಣೆ ಮಾಡಲ್ಲ ಎಂದು 7ನೇ ಬಾರಿ ಬಜೆಟ್ ಮಂಡಿಸುತ್ತಿರುವ ಸಿಎಂ ಯಡಿಯೂರಪ್ಪ ಬಜೆಟ್ ಮಂಡನೆ ವೇಳೆ ತಿಳಿಸಿದ್ದಾರೆ.

ಈ ಬಾರಿ ಬಜೆಟ್​ ಅನ್ನು ಇಲಾಖಾವಾರು ವಿಂಗಡಣೆ ಮಾಡಿಲ್ಲ. ಆರು ವಲಯಗಳಾಗಿ ವಿಂಗಡಣೆ ಮಾಡಿ ಮಂಡನೆ ಮಾಡಲಾಗಿದೆ.

ವಲಯ 1: ಕೃಷಿ ಮತ್ತು ಪೂರಕ ಚಟುವಟಿಕೆಗಳು ವಲಯ 2: ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ ವಲಯ 3: ಆರ್ಥಿಕ ಅಭಿವೃದ್ಧಿಗೆ ಪ್ರಚೋದನೆ ವಲಯ 4: ಬೆಂಗಳೂರು ಸಮಗ್ರ ಅಭಿವೃದ್ಧಿ ವಲಯ 5: ಸಂಸ್ಕೃತಿ, ಪರಂಪರೆ ಹಾಗೂ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ವಲಯ 6: ಅಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವೆಗಳು

ಕೃಷಿ ಮತ್ತು ಪೂರಕ ಚಟುವಟಿಕೆಗಳು: ಸರ್ಕಾರದಿಂದ ಹೊಸ ಕೃಷಿ ನೀತಿ ಜಾರಿಗೊಳಿಸಲಾಗುವುದು. ತೋಟಗಾರಿಕೆಯನ್ನು ಉದ್ದಿಮೆಯಾಗಿ ಪರಿಗಣಿಸಲು ನಿರ್ಧರಿಸಲಾಗಿದೆ. ಕೃಷಿ ವಲಯಕ್ಕೆ ಹೊಸ ಆಯಾಮ ನೀಡಲು ಪ್ರಯತ್ನಿಸಲಾಗುವುದು. ಸಂಚಾರಿ ಕೃಷಿ ಹೆಲ್ತ್ ಕ್ಲಿನಿಕ್ ಪ್ರಾರಂಭಿಸಲಾಗುವುದು. ಸಾವಯವ ಕೃಷಿಗೆ ₹200 ಕೋಟಿ ಅನುದಾನ ನೀಡಲಾಗುತ್ತೆ ಎಂದರು. ಇದೇ ವೇಳೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ಯಡಿಯೂರಪ್ಪ ಮರು ಘೋಷಣೆ ಮಾಡಿದರು.

ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಸಾಲ ಯೋಜನೆ ನೀಡಲಾಗುವುದು. ಸಿರಿಧಾನ್ಯ ಖರೀದಿಗೆ ರೈತರಿಗೆ ಪ್ರತಿ ಹೆಕ್ಟೇರಿಗೆ 10 ರಿಂದ 20 ಸಾವಿರ ಪ್ರೋತ್ಸಾಹ ಧನ ನೀಡಲಾಗುವುದು. ಮಣ್ಣು ಪರೀಕ್ಷೆ ಸಹಿತ ರೈತರಿಗೆ ಕೃಷಿಯಲ್ಲಿ ಸಹಕಾರಿಯಾಗಲಿದೆ. ಕೃಷಿ ಉತ್ಪಾದನೆ ಹೆಚ್ಚಿಸಲು ಆದ್ಯತೆ ನೀಡಲಾಗುತ್ತದೆ. ಇದಕ್ಕಾಗಿ ರಾಜ್ಯದ 40 ಕಡೆಗಳಲ್ಲಿ ಕೇಂದ್ರಗಳನ್ನು ತೆರೆಯಲಾಗುವುದು.

ಕೃಷಿ ವಲಯಕ್ಕೆ ಬಜೆಟ್‌ನಲ್ಲಿ 32,259 ಕೋಟಿ ರೂಪಾಯಿ ಮೀಸಲಿಡಲಾಗುವುದು. ನೀರಿನ ಭದ್ರತೆ, ಭೂ ಸಂಚಯ ಮತ್ತು ಸಾಮೂಹಿಕ ಕೃಷಿ ಹಾಗೂ ಕೃಷಿ ಉತ್ಪನ್ನಗಳ ಸಂಸ್ಕರಣೆ, ಮಾರುಕಟ್ಟೆಗೆ ಉತ್ತೇಜನ ನೀಡಲಾಗುವುದು.

Published On - 11:49 am, Thu, 5 March 20

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!