AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವುದೇ ಹೊಸ ಯೋಜನೆ ಘೋಷಣೆ ಮಾಡುವುದಿಲ್ಲ: ಸಿಎಂ ಯಡಿಯೂರಪ್ಪ ಹೀಗ್ಯಾಕಂದ್ರು?

ಬೆಂಗಳೂರು: ಆರು ವಲಯಗಳಾಗಿ ವಿಂಗಡಿಸಿ 2020-21ನೇ ಸಾಲಿನ ಬಜೆಟ್ ಮಂಡಿಸಲಾಗಿದೆ. ರಾಜ್ಯ ಆರ್ಥಿಕ ಸಂಕಷ್ಟವನ್ನ ಅನುಭವಿಸುತ್ತಿದೆ. ಹಿಂದೆಂದೂ ಇಂತಹ ಪರಿಸ್ಥಿತಿ ಎದುರಿಸಿರಲಿಲ್ಲ. ಕೇಂದ್ರ ಸರ್ಕಾರದಿಂದ ಬರಬೇಕಾದ ಹಣ ಬಂದಿಲ್ಲ. ಹೀಗಾಗಿ ಯಾವುದೇ ಹೊಸ ಯೋಜನೆ ಘೋಷಣೆ ಮಾಡಲ್ಲ ಎಂದು 7ನೇ ಬಾರಿ ಬಜೆಟ್ ಮಂಡಿಸುತ್ತಿರುವ ಸಿಎಂ ಯಡಿಯೂರಪ್ಪ ಬಜೆಟ್ ಮಂಡನೆ ವೇಳೆ ತಿಳಿಸಿದ್ದಾರೆ. ಈ ಬಾರಿ ಬಜೆಟ್​ ಅನ್ನು ಇಲಾಖಾವಾರು ವಿಂಗಡಣೆ ಮಾಡಿಲ್ಲ. ಆರು ವಲಯಗಳಾಗಿ ವಿಂಗಡಣೆ ಮಾಡಿ ಮಂಡನೆ ಮಾಡಲಾಗಿದೆ. ವಲಯ 1: ಕೃಷಿ ಮತ್ತು […]

ಯಾವುದೇ ಹೊಸ ಯೋಜನೆ ಘೋಷಣೆ ಮಾಡುವುದಿಲ್ಲ: ಸಿಎಂ ಯಡಿಯೂರಪ್ಪ ಹೀಗ್ಯಾಕಂದ್ರು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Mar 05, 2020 | 1:27 PM

Share

ಬೆಂಗಳೂರು: ಆರು ವಲಯಗಳಾಗಿ ವಿಂಗಡಿಸಿ 2020-21ನೇ ಸಾಲಿನ ಬಜೆಟ್ ಮಂಡಿಸಲಾಗಿದೆ. ರಾಜ್ಯ ಆರ್ಥಿಕ ಸಂಕಷ್ಟವನ್ನ ಅನುಭವಿಸುತ್ತಿದೆ. ಹಿಂದೆಂದೂ ಇಂತಹ ಪರಿಸ್ಥಿತಿ ಎದುರಿಸಿರಲಿಲ್ಲ. ಕೇಂದ್ರ ಸರ್ಕಾರದಿಂದ ಬರಬೇಕಾದ ಹಣ ಬಂದಿಲ್ಲ. ಹೀಗಾಗಿ ಯಾವುದೇ ಹೊಸ ಯೋಜನೆ ಘೋಷಣೆ ಮಾಡಲ್ಲ ಎಂದು 7ನೇ ಬಾರಿ ಬಜೆಟ್ ಮಂಡಿಸುತ್ತಿರುವ ಸಿಎಂ ಯಡಿಯೂರಪ್ಪ ಬಜೆಟ್ ಮಂಡನೆ ವೇಳೆ ತಿಳಿಸಿದ್ದಾರೆ.

ಈ ಬಾರಿ ಬಜೆಟ್​ ಅನ್ನು ಇಲಾಖಾವಾರು ವಿಂಗಡಣೆ ಮಾಡಿಲ್ಲ. ಆರು ವಲಯಗಳಾಗಿ ವಿಂಗಡಣೆ ಮಾಡಿ ಮಂಡನೆ ಮಾಡಲಾಗಿದೆ.

ವಲಯ 1: ಕೃಷಿ ಮತ್ತು ಪೂರಕ ಚಟುವಟಿಕೆಗಳು ವಲಯ 2: ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ ವಲಯ 3: ಆರ್ಥಿಕ ಅಭಿವೃದ್ಧಿಗೆ ಪ್ರಚೋದನೆ ವಲಯ 4: ಬೆಂಗಳೂರು ಸಮಗ್ರ ಅಭಿವೃದ್ಧಿ ವಲಯ 5: ಸಂಸ್ಕೃತಿ, ಪರಂಪರೆ ಹಾಗೂ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ವಲಯ 6: ಅಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವೆಗಳು

ಕೃಷಿ ಮತ್ತು ಪೂರಕ ಚಟುವಟಿಕೆಗಳು: ಸರ್ಕಾರದಿಂದ ಹೊಸ ಕೃಷಿ ನೀತಿ ಜಾರಿಗೊಳಿಸಲಾಗುವುದು. ತೋಟಗಾರಿಕೆಯನ್ನು ಉದ್ದಿಮೆಯಾಗಿ ಪರಿಗಣಿಸಲು ನಿರ್ಧರಿಸಲಾಗಿದೆ. ಕೃಷಿ ವಲಯಕ್ಕೆ ಹೊಸ ಆಯಾಮ ನೀಡಲು ಪ್ರಯತ್ನಿಸಲಾಗುವುದು. ಸಂಚಾರಿ ಕೃಷಿ ಹೆಲ್ತ್ ಕ್ಲಿನಿಕ್ ಪ್ರಾರಂಭಿಸಲಾಗುವುದು. ಸಾವಯವ ಕೃಷಿಗೆ ₹200 ಕೋಟಿ ಅನುದಾನ ನೀಡಲಾಗುತ್ತೆ ಎಂದರು. ಇದೇ ವೇಳೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ಯಡಿಯೂರಪ್ಪ ಮರು ಘೋಷಣೆ ಮಾಡಿದರು.

ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಸಾಲ ಯೋಜನೆ ನೀಡಲಾಗುವುದು. ಸಿರಿಧಾನ್ಯ ಖರೀದಿಗೆ ರೈತರಿಗೆ ಪ್ರತಿ ಹೆಕ್ಟೇರಿಗೆ 10 ರಿಂದ 20 ಸಾವಿರ ಪ್ರೋತ್ಸಾಹ ಧನ ನೀಡಲಾಗುವುದು. ಮಣ್ಣು ಪರೀಕ್ಷೆ ಸಹಿತ ರೈತರಿಗೆ ಕೃಷಿಯಲ್ಲಿ ಸಹಕಾರಿಯಾಗಲಿದೆ. ಕೃಷಿ ಉತ್ಪಾದನೆ ಹೆಚ್ಚಿಸಲು ಆದ್ಯತೆ ನೀಡಲಾಗುತ್ತದೆ. ಇದಕ್ಕಾಗಿ ರಾಜ್ಯದ 40 ಕಡೆಗಳಲ್ಲಿ ಕೇಂದ್ರಗಳನ್ನು ತೆರೆಯಲಾಗುವುದು.

ಕೃಷಿ ವಲಯಕ್ಕೆ ಬಜೆಟ್‌ನಲ್ಲಿ 32,259 ಕೋಟಿ ರೂಪಾಯಿ ಮೀಸಲಿಡಲಾಗುವುದು. ನೀರಿನ ಭದ್ರತೆ, ಭೂ ಸಂಚಯ ಮತ್ತು ಸಾಮೂಹಿಕ ಕೃಷಿ ಹಾಗೂ ಕೃಷಿ ಉತ್ಪನ್ನಗಳ ಸಂಸ್ಕರಣೆ, ಮಾರುಕಟ್ಟೆಗೆ ಉತ್ತೇಜನ ನೀಡಲಾಗುವುದು.

Published On - 11:49 am, Thu, 5 March 20

Follow Us
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!