AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವುದೇ ಹೊಸ ಯೋಜನೆ ಘೋಷಣೆ ಮಾಡುವುದಿಲ್ಲ: ಸಿಎಂ ಯಡಿಯೂರಪ್ಪ ಹೀಗ್ಯಾಕಂದ್ರು?

ಬೆಂಗಳೂರು: ಆರು ವಲಯಗಳಾಗಿ ವಿಂಗಡಿಸಿ 2020-21ನೇ ಸಾಲಿನ ಬಜೆಟ್ ಮಂಡಿಸಲಾಗಿದೆ. ರಾಜ್ಯ ಆರ್ಥಿಕ ಸಂಕಷ್ಟವನ್ನ ಅನುಭವಿಸುತ್ತಿದೆ. ಹಿಂದೆಂದೂ ಇಂತಹ ಪರಿಸ್ಥಿತಿ ಎದುರಿಸಿರಲಿಲ್ಲ. ಕೇಂದ್ರ ಸರ್ಕಾರದಿಂದ ಬರಬೇಕಾದ ಹಣ ಬಂದಿಲ್ಲ. ಹೀಗಾಗಿ ಯಾವುದೇ ಹೊಸ ಯೋಜನೆ ಘೋಷಣೆ ಮಾಡಲ್ಲ ಎಂದು 7ನೇ ಬಾರಿ ಬಜೆಟ್ ಮಂಡಿಸುತ್ತಿರುವ ಸಿಎಂ ಯಡಿಯೂರಪ್ಪ ಬಜೆಟ್ ಮಂಡನೆ ವೇಳೆ ತಿಳಿಸಿದ್ದಾರೆ. ಈ ಬಾರಿ ಬಜೆಟ್​ ಅನ್ನು ಇಲಾಖಾವಾರು ವಿಂಗಡಣೆ ಮಾಡಿಲ್ಲ. ಆರು ವಲಯಗಳಾಗಿ ವಿಂಗಡಣೆ ಮಾಡಿ ಮಂಡನೆ ಮಾಡಲಾಗಿದೆ. ವಲಯ 1: ಕೃಷಿ ಮತ್ತು […]

ಯಾವುದೇ ಹೊಸ ಯೋಜನೆ ಘೋಷಣೆ ಮಾಡುವುದಿಲ್ಲ: ಸಿಎಂ ಯಡಿಯೂರಪ್ಪ ಹೀಗ್ಯಾಕಂದ್ರು?
ಸಾಧು ಶ್ರೀನಾಥ್​
|

Updated on:Mar 05, 2020 | 1:27 PM

Share

ಬೆಂಗಳೂರು: ಆರು ವಲಯಗಳಾಗಿ ವಿಂಗಡಿಸಿ 2020-21ನೇ ಸಾಲಿನ ಬಜೆಟ್ ಮಂಡಿಸಲಾಗಿದೆ. ರಾಜ್ಯ ಆರ್ಥಿಕ ಸಂಕಷ್ಟವನ್ನ ಅನುಭವಿಸುತ್ತಿದೆ. ಹಿಂದೆಂದೂ ಇಂತಹ ಪರಿಸ್ಥಿತಿ ಎದುರಿಸಿರಲಿಲ್ಲ. ಕೇಂದ್ರ ಸರ್ಕಾರದಿಂದ ಬರಬೇಕಾದ ಹಣ ಬಂದಿಲ್ಲ. ಹೀಗಾಗಿ ಯಾವುದೇ ಹೊಸ ಯೋಜನೆ ಘೋಷಣೆ ಮಾಡಲ್ಲ ಎಂದು 7ನೇ ಬಾರಿ ಬಜೆಟ್ ಮಂಡಿಸುತ್ತಿರುವ ಸಿಎಂ ಯಡಿಯೂರಪ್ಪ ಬಜೆಟ್ ಮಂಡನೆ ವೇಳೆ ತಿಳಿಸಿದ್ದಾರೆ.

ಈ ಬಾರಿ ಬಜೆಟ್​ ಅನ್ನು ಇಲಾಖಾವಾರು ವಿಂಗಡಣೆ ಮಾಡಿಲ್ಲ. ಆರು ವಲಯಗಳಾಗಿ ವಿಂಗಡಣೆ ಮಾಡಿ ಮಂಡನೆ ಮಾಡಲಾಗಿದೆ.

ವಲಯ 1: ಕೃಷಿ ಮತ್ತು ಪೂರಕ ಚಟುವಟಿಕೆಗಳು ವಲಯ 2: ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ ವಲಯ 3: ಆರ್ಥಿಕ ಅಭಿವೃದ್ಧಿಗೆ ಪ್ರಚೋದನೆ ವಲಯ 4: ಬೆಂಗಳೂರು ಸಮಗ್ರ ಅಭಿವೃದ್ಧಿ ವಲಯ 5: ಸಂಸ್ಕೃತಿ, ಪರಂಪರೆ ಹಾಗೂ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ವಲಯ 6: ಅಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವೆಗಳು

ಕೃಷಿ ಮತ್ತು ಪೂರಕ ಚಟುವಟಿಕೆಗಳು: ಸರ್ಕಾರದಿಂದ ಹೊಸ ಕೃಷಿ ನೀತಿ ಜಾರಿಗೊಳಿಸಲಾಗುವುದು. ತೋಟಗಾರಿಕೆಯನ್ನು ಉದ್ದಿಮೆಯಾಗಿ ಪರಿಗಣಿಸಲು ನಿರ್ಧರಿಸಲಾಗಿದೆ. ಕೃಷಿ ವಲಯಕ್ಕೆ ಹೊಸ ಆಯಾಮ ನೀಡಲು ಪ್ರಯತ್ನಿಸಲಾಗುವುದು. ಸಂಚಾರಿ ಕೃಷಿ ಹೆಲ್ತ್ ಕ್ಲಿನಿಕ್ ಪ್ರಾರಂಭಿಸಲಾಗುವುದು. ಸಾವಯವ ಕೃಷಿಗೆ ₹200 ಕೋಟಿ ಅನುದಾನ ನೀಡಲಾಗುತ್ತೆ ಎಂದರು. ಇದೇ ವೇಳೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ಯಡಿಯೂರಪ್ಪ ಮರು ಘೋಷಣೆ ಮಾಡಿದರು.

ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಸಾಲ ಯೋಜನೆ ನೀಡಲಾಗುವುದು. ಸಿರಿಧಾನ್ಯ ಖರೀದಿಗೆ ರೈತರಿಗೆ ಪ್ರತಿ ಹೆಕ್ಟೇರಿಗೆ 10 ರಿಂದ 20 ಸಾವಿರ ಪ್ರೋತ್ಸಾಹ ಧನ ನೀಡಲಾಗುವುದು. ಮಣ್ಣು ಪರೀಕ್ಷೆ ಸಹಿತ ರೈತರಿಗೆ ಕೃಷಿಯಲ್ಲಿ ಸಹಕಾರಿಯಾಗಲಿದೆ. ಕೃಷಿ ಉತ್ಪಾದನೆ ಹೆಚ್ಚಿಸಲು ಆದ್ಯತೆ ನೀಡಲಾಗುತ್ತದೆ. ಇದಕ್ಕಾಗಿ ರಾಜ್ಯದ 40 ಕಡೆಗಳಲ್ಲಿ ಕೇಂದ್ರಗಳನ್ನು ತೆರೆಯಲಾಗುವುದು.

ಕೃಷಿ ವಲಯಕ್ಕೆ ಬಜೆಟ್‌ನಲ್ಲಿ 32,259 ಕೋಟಿ ರೂಪಾಯಿ ಮೀಸಲಿಡಲಾಗುವುದು. ನೀರಿನ ಭದ್ರತೆ, ಭೂ ಸಂಚಯ ಮತ್ತು ಸಾಮೂಹಿಕ ಕೃಷಿ ಹಾಗೂ ಕೃಷಿ ಉತ್ಪನ್ನಗಳ ಸಂಸ್ಕರಣೆ, ಮಾರುಕಟ್ಟೆಗೆ ಉತ್ತೇಜನ ನೀಡಲಾಗುವುದು.

Published On - 11:49 am, Thu, 5 March 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ