AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RSS ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿನಂದನೆ

ಬೆಂಗಳೂರು: ಆರ್​ಎಸ್​ಎಸ್​ ನ ಎರಡನೇ ಅತ್ಯುನ್ನತ ಹುದ್ದೆಯಾದ ಅಖಿಲ ಭಾರತ ಸರಕಾರ್ಯವಾಹರಾಗಿ ನಿಯುಕ್ತಿ ಹೊಂದಿದ ಕರ್ನಾಟಕದ ದತ್ತಾತ್ರೇಯ ಹೊಸಬಾಳೆ ಅವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಬಾಲ್ಯದಿಂದಲೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರಿಯ, ನಿಷ್ಠಾವಂತ ಸ್ವಯಂ ಸೇವಕರಾಗಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ, ಉನ್ನತ ಸ್ಥಾನಕ್ಕೇರಿರುವುದು ಹೆಮ್ಮೆಯ ವಿಷಯ. ಸಂಘಟನಾ ಚಾತುರ್ಯ, ಸಮಾಜದ ಆಗುಹೋಗುಗಳ ಕುರಿತ ಅರಿವು, ಸಂವೇದನಾಶೀಲತೆ ಹೊಂದಿರುವ ಅವರು ಬಹುವಿಧ ಆಸಕ್ತಿ ಹಾಗೂ ಬಹುಮುಖ ಪ್ರತಿಭೆಯ ಸಂಗಮ. ತುರ್ತು ಪರಿಸ್ಥಿತಿ […]

RSS ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿನಂದನೆ
ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿನಂದನೆ
ಸಾಧು ಶ್ರೀನಾಥ್​
|

Updated on:Mar 20, 2021 | 4:19 PM

Share

ಬೆಂಗಳೂರು: ಆರ್​ಎಸ್​ಎಸ್​ ನ ಎರಡನೇ ಅತ್ಯುನ್ನತ ಹುದ್ದೆಯಾದ ಅಖಿಲ ಭಾರತ ಸರಕಾರ್ಯವಾಹರಾಗಿ ನಿಯುಕ್ತಿ ಹೊಂದಿದ ಕರ್ನಾಟಕದ ದತ್ತಾತ್ರೇಯ ಹೊಸಬಾಳೆ ಅವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಬಾಲ್ಯದಿಂದಲೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರಿಯ, ನಿಷ್ಠಾವಂತ ಸ್ವಯಂ ಸೇವಕರಾಗಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ, ಉನ್ನತ ಸ್ಥಾನಕ್ಕೇರಿರುವುದು ಹೆಮ್ಮೆಯ ವಿಷಯ. ಸಂಘಟನಾ ಚಾತುರ್ಯ, ಸಮಾಜದ ಆಗುಹೋಗುಗಳ ಕುರಿತ ಅರಿವು, ಸಂವೇದನಾಶೀಲತೆ ಹೊಂದಿರುವ ಅವರು ಬಹುವಿಧ ಆಸಕ್ತಿ ಹಾಗೂ ಬಹುಮುಖ ಪ್ರತಿಭೆಯ ಸಂಗಮ. ತುರ್ತು ಪರಿಸ್ಥಿತಿ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಹೊಸಬಾಳೆಯವರು ಅಂದಿನ ಕರಾಳ ಅನುಭವದ ಚಿತ್ರಣ ನೀಡುವ ‘ಭುಗಿಲು’ ಸಂಪಾದನಾ ತಂಡದ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ. ಇಂಡಿಯಾ ಪಾಲಿಸಿ ಫೌಂಡೇಷನ್ ನ ಸ್ಥಾಪಕ ಸದಸ್ಯರಾಗಿ, ‘ಅಸೀಮಾ’ ಮಾಸ ಪತ್ರಿಕೆಯ ಸ್ಥಾಪಕ ಸಂಪಾದಕರಾಗಿ ಗಮನ ಸೆಳೆದವರು ಎಂದು ಯಡಿಯೂರಪ್ಪ ಅವರು ಶ್ಲಾಘಿಸಿದ್ದಾರೆ. dattatreya-hosabale-appointed-as-general-secretary-of-rss ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತ ಸರಕಾರ್ಯವಾಹರ ಹೊಣೆಗಾರಿಕೆ ಅವರ ಪ್ರತಿಭೆ, ಸಾಮರ್ಥ್ಯಕ್ಕೆ ಸಂದ ಗೌರವವಾಗಿದೆ. ಭಗವಂತನು ಅವರಿಗೆ ಆಯುರಾರೋಗ್ಯವನ್ನು ಕರುಣಿಸಿ, ಭಾರತಮಾತೆಯ ಸೇವೆಯಲ್ಲಿ ಇನ್ನಷ್ಟು ತತ್ಪರರಾಗಲು ಸ್ಫೂರ್ತಿ ನೀಡಲಿ ಎಂದು ಹಾರೈಸುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ.

 ದತ್ತಾತ್ರೇಯ ಹೊಸಬಾಳೆ ಆರ್​ಎಸ್​ಎಸ್​ ಸರಕಾರ್ಯವಾಹ್​ ಆಗಿ ಆಯ್ಕೆ; ಮುಖ್ಯಮಂತ್ರಿ ಅಭಿನಂದನೆ

Published On - 4:13 pm, Sat, 20 March 21

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ