ರಾಜ್ಯ ಸರ್ಕಾರಿ ನೌಕರರು, ಅಧಿಕಾರಿಗಳ ವಿರುದ್ಧ ಅನಾಮಧೇಯ ದೂರು: ಪೂರಕ ದಾಖಲೆ ಒದಗಿಸಿದ ಬಳಿಕವೇ ತನಿಖೆ

ದೂರುದಾರ ಪೂರಕ ದಾಖಲೆ ಒದಗಿಸಿದ ಬಳಿಕವೇ ತನಿಖೆ ನಡೆಸಬೇಕು. ದಾಖಲೆ ಒದಗಿಸಿದ ಬಳಿಕ ಪ್ರಾಥಮಿಕ ತನಿಖೆ ನಡೆಸಬೇಕು ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಸುತ್ತೋಲೆಯಲ್ಲಿ ಉಲ್ಲೇಖಿಸಿದ್ದಾರೆ. ಸಿಎಂ ಯಡಿಯೂರಪ್ಪ ಸೂಚನೆ ಮೇರೆಗೆ ಸಿಎಸ್ ಸುತ್ತೋಲೆ ಹೊರಡಿಸಿದ್ದಾರೆ.

ರಾಜ್ಯ ಸರ್ಕಾರಿ ನೌಕರರು, ಅಧಿಕಾರಿಗಳ ವಿರುದ್ಧ ಅನಾಮಧೇಯ ದೂರು: ಪೂರಕ ದಾಖಲೆ ಒದಗಿಸಿದ ಬಳಿಕವೇ ತನಿಖೆ
ವಿಧಾನ ಸೌಧ

Updated on: Mar 06, 2021 | 11:02 PM

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು, ಅಧಿಕಾರಿಗಳ ವಿರುದ್ಧ ಅನಾಮಧೇಯ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ. ಸಿಎಂ ಬಿ.ಎಸ್​. ಯಡಿಯೂರಪ್ಪ ಸೂಚನೆ ಹಿನ್ನೆಲೆಯಲ್ಲಿ ಸಿ.ಎಸ್ ಸುತ್ತೋಲೆ ಹೊರಡಿಸಿದ್ದಾರೆ. ದೂರಿನಲ್ಲಿ ಹೆಸರು ಹಾಗೂ ವಿಳಾಸ ಖಚಿತಪಡಿಸಿಕೊಳ್ಳಬೇಕು. ದೂರುದಾರರ ಹೆಸರು ಮತ್ತು ವಿಳಾಸವನ್ನು ಖಚಿತಪಡಿಸಿಕೊಳ್ಳಬೇಕು ಎಂದು ಉಲ್ಲೇಖಿಸಲಾಗಿದೆ.

ದೂರುದಾರ ಪೂರಕ ದಾಖಲೆ ಒದಗಿಸಿದ ಬಳಿಕವೇ ತನಿಖೆ ನಡೆಸಬೇಕು. ದಾಖಲೆ ಒದಗಿಸಿದ ಬಳಿಕ ಪ್ರಾಥಮಿಕ ತನಿಖೆ ನಡೆಸಬೇಕು ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಸುತ್ತೋಲೆಯಲ್ಲಿ ಉಲ್ಲೇಖಿಸಿದ್ದಾರೆ. ಸಿಎಂ ಯಡಿಯೂರಪ್ಪ ಸೂಚನೆ ಮೇರೆಗೆ ಸಿಎಸ್ ಸುತ್ತೋಲೆ ಹೊರಡಿಸಿದ್ದಾರೆ.

ರಾಜ್ಯ ಒಕ್ಕಲಿಗರ ಸಂಘಕ್ಕೆ ಎಲೆಕ್ಷನ್​: ಚುನಾವಣಾಧಿಕಾರಿಯಾಗಿ ರವೀಂದ್ರ ನೇಮಕ
ಇತ್ತ, ರಾಜ್ಯ ಒಕ್ಕಲಿಗರ ಸಂಘಕ್ಕೆ ಚುನಾವಣೆ ನಡೆಸಲು ಆದೇಶ ಬಂದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಯಾಗಿ ಐಎಎಸ್ ಅಧಿಕಾರಿ ರವೀಂದ್ರ ನೇಮಕಗೊಂಡಿದ್ದಾರೆ. ಪಿ.ಎನ್‌.ರವೀಂದ್ರರನ್ನು ನೇಮಕ ಮಾಡಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ರವೀಂದ್ರ ಸದ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಬಜೆಟ್​ ಅನುಮೋದಿಸಲು ನಿಗದಿಯಾಗಿದ್ದ ಸಭೆ ಮುಂದೂಡಿಕೆ
ಅತ್ತ, ಬಜೆಟ್​ ಅನುಮೋದಿಸಲು ನಿಗದಿಯಾಗಿದ್ದ ಸಭೆ ಮುಂದೂಡಿಕೆಯಾಗಿದೆ. ಸಚಿವ ಸಂಪುಟ ವಿಶೇಷ ಸಭೆ ಒಂದು ಗಂಟೆ ಮುಂದೂಡಿಕೆಯಾಗಿದೆ. ಸೋಮವಾರ ಬೆಳಗ್ಗೆ ವಿಧಾನಸೌಧದಲ್ಲಿ 10.30ಕ್ಕೆ ನಿಗದಿಯಾಗಿದ್ದ ಸಭೆ 11.30ಕ್ಕೆ ಮುಂದೂಡಿಕೆಯಾಗಿದೆ.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿಯಲ್ಲಿರುವ ಲೇಡಿಯ ಬೆನ್ನಟ್ಟಿದ ಪೊಲೀಸರಿಗೆ ಸಿಕ್ತಾ ಮಹತ್ತರ ಸುಳಿವು?

Sex Cd Gate Has Reunited The Gokak's Infighting Jarkiholi Brothers

Follow Us