Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೃತ್ತಿಯ ಸನಿಹಕ್ಕೆ ಮುಖ್ಯ ಕಾರ್ಯದರ್ಶಿ TM ವಿಜಯಭಾಸ್ಕರ್: ಮುಂದಿನ CS ಯಾರು?

ಬೆಂಗಳೂರು: ರಾಜ್ಯದಲ್ಲಿ ಕಾರ್ಯಾಂಗದ ಚುಕ್ಕಾಣಿ ಹಿಡಿದಿರುವ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಡಿಸೆಂಬರ್ 31ರಂದು ನಿವೃತ್ತರಾಗಲಿದ್ದಾರೆ. ಸೇವಾ ಜೇಷ್ಠತೆಯ ಪ್ರಕಾರ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ಪಿ.ರವಿಕುಮಾರ್ ನೇಮಕವಾಗುವ ಸಾಧ್ಯತೆಯಿದೆ. ಮುಖ್ಯವಾಗಿ ಬಿ.ಎಸ್.ಯಡಿಯೂರಪ್ಪ ಅವರಿಗೂ ರವಿಕುಮಾರ್ ಅವರ ಮೇಲೆ ವಿಶ್ವಾಸವಿದೆ. ಎರಡು ತಿಂಗಳ ಹಿಂದಿನವರೆಗೂ ರವಿಕುಮಾರ್, ಮುಖ್ಯಮಂತ್ರಿ ಕಚೇರಿಯಲ್ಲಿ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಮುಖ್ಯಕಾರ್ಯದರ್ಶಿಯಾಗಿ ನೇಮಕವಾದರೆ ರವಿಕುಮಾರ್ ಅವರ ಸೇವಾ ಅವಧಿ ಇನ್ನೂ ಒಂದೂವರೆ ವರ್ಷಗಳ ಅವಧಿಗೆ ವಿಸ್ತರಣೆಯಾಗಲಿದೆ. ಸೇವಾವಧಿ ವಿಸ್ತರಣೆ ಮಾಡುವ ಸಾಧ್ಯತೆ.. ರಾಜ್ಯ ಸರ್ಕಾರವು […]

ನಿವೃತ್ತಿಯ ಸನಿಹಕ್ಕೆ ಮುಖ್ಯ ಕಾರ್ಯದರ್ಶಿ TM ವಿಜಯಭಾಸ್ಕರ್: ಮುಂದಿನ CS ಯಾರು?
Follow us
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​

Updated on:Nov 21, 2020 | 3:12 PM

ಬೆಂಗಳೂರು: ರಾಜ್ಯದಲ್ಲಿ ಕಾರ್ಯಾಂಗದ ಚುಕ್ಕಾಣಿ ಹಿಡಿದಿರುವ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಡಿಸೆಂಬರ್ 31ರಂದು ನಿವೃತ್ತರಾಗಲಿದ್ದಾರೆ. ಸೇವಾ ಜೇಷ್ಠತೆಯ ಪ್ರಕಾರ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ಪಿ.ರವಿಕುಮಾರ್ ನೇಮಕವಾಗುವ ಸಾಧ್ಯತೆಯಿದೆ.

ಮುಖ್ಯವಾಗಿ ಬಿ.ಎಸ್.ಯಡಿಯೂರಪ್ಪ ಅವರಿಗೂ ರವಿಕುಮಾರ್ ಅವರ ಮೇಲೆ ವಿಶ್ವಾಸವಿದೆ. ಎರಡು ತಿಂಗಳ ಹಿಂದಿನವರೆಗೂ ರವಿಕುಮಾರ್, ಮುಖ್ಯಮಂತ್ರಿ ಕಚೇರಿಯಲ್ಲಿ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಮುಖ್ಯಕಾರ್ಯದರ್ಶಿಯಾಗಿ ನೇಮಕವಾದರೆ ರವಿಕುಮಾರ್ ಅವರ ಸೇವಾ ಅವಧಿ ಇನ್ನೂ ಒಂದೂವರೆ ವರ್ಷಗಳ ಅವಧಿಗೆ ವಿಸ್ತರಣೆಯಾಗಲಿದೆ.

ಸೇವಾವಧಿ ವಿಸ್ತರಣೆ ಮಾಡುವ ಸಾಧ್ಯತೆ.. ರಾಜ್ಯ ಸರ್ಕಾರವು ತನ್ನ ವಿವೇಚನಾಧಿಕಾರ ಬಳಸಿ, ಹಾಲಿ ಮುಖ್ಯಕಾರ್ಯದರ್ಶಿ ವಿಜಯಭಾಸ್ಕರ್ ಅವರ ಸೇವಾವಧಿ ವಿಸ್ತರಣೆ ಮಾಡುವ ಸಾಧ್ಯತೆಯನ್ನೂ ತಳ್ಳಿಹಾಕುವಂತಿಲ್ಲ. ಈ ಹಿಂದೆ ಮುಖ್ಯಕಾರ್ಯದರ್ಶಿಯಾಗಿದ್ದ ಕೆ.ರತ್ನಪ್ರಭಾ ಅವರ ಸೇವಾವಧಿಯನ್ನು ಮೂರು ತಿಂಗಳ ಕಾಲ ವಿಸ್ತರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ರಾಜ್ಯ ಸೇವೆಯಲ್ಲಿರುವ ಐಎಎಸ್ ಅಧಿಕಾರಿಗಳ ಪೈಕಿ ವಂದಿತಾ ಶರ್ಮ, ಪ್ರದೀಪ್ ಸಿಂಗ್ ಖರೋಲಾ, ಮಹೇಂದ್ರ ಜೈನ್, ಐಎಸ್ಎನ್ ಪ್ರಸಾದ್, ರಜನೀಶ್ ಗೋಯೆಲ್, ವಿ.ಮಂಜುಳಾ, ಅಜಯ್ ಸೇಠ್, ಅನಿಲ್ ಕುಮಾರ್, ಸಂಜೀವ್ ಕುಮಾರ್ ಅವರು ರವಿಕುಮಾರ್ ನಂತರದಲ್ಲಿ ಸೇವಾ ಹಿರಿತನ ಹೊಂದಿದ್ದಾರೆ. ರಾಜ್ಯ ಸರ್ಕಾರ ಸೇವಾ ಹಿರಿತನದ ಮಾನದಂಡವನ್ನೇ ಪರಿಗಣಿಸಿದಲ್ಲಿ ರವಿಕುಮಾರ್ ಮುಂದಿನ ಮುಖ್ಯಕಾರ್ಯದರ್ಶಿಯಾಗಿ ನೇಮಕವಾಗುವುದು ಬಹುತೇಕ ಖಚಿತ.

Published On - 3:11 pm, Sat, 21 November 20

ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ