AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಪ್ರಧಾನಮಂತ್ರಿ ಕುಸುಮ್ ಯೋಜನೆ ಹೆಸರಿನಲ್ಲಿ ಸೈಬರ್ ವಂಚನೆ: ರೈತರಿಗೆ ಮೋಸ

ರೈತರು ವಿದ್ಯುತ್ ಬಳಕೆ ಕಡಿಮೆ ಮಾಡಲು ಪಂಪುಸೆಟ್‍ಗಳಿಗೆ ಡೀಸೆಲ್, ಪೆಟ್ರೋಲ್ ಅವಲಂಬನೆ ತಪ್ಪಿಸಲು ಸೋಲಾರ್ ಪಂಪುಗಳನ್ನು ಅಳವಡಿಸಿಕೊಳ್ಳಲು ಸೇರಿದಂತೆ ಪರಿಸರ ಮಾಲಿನ್ಯ ತಡೆಗಟ್ಟಲು ಕೇಂದ್ರಸರ್ಕಾರ ರೈತರಿಗಾಗಿ ಪ್ರಧಾನಮಂತ್ರಿ ಕುಸುಮ್ ಯೋಜನೆ ಜಾರಿಗೊಳಿಸಿದೆ. ರೈತರಿಗೆ ರಿಜಿಸ್ಟರ್‍ಗೆ ಹಣ, ವ್ಯರಿಪಿಕೇಷನ್‍ಗೆ ಹಣ, ಸಬ್ಸಿಡಿ ಹಣಕ್ಕೆ ಇಂತಿಷ್ಟು ಎಂದು ಹೇಳಿ ಹಣ ಪೀಕಿ ಮೋಸ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ.

ಚಿಕ್ಕಬಳ್ಳಾಪುರ: ಪ್ರಧಾನಮಂತ್ರಿ ಕುಸುಮ್ ಯೋಜನೆ ಹೆಸರಿನಲ್ಲಿ ಸೈಬರ್ ವಂಚನೆ: ರೈತರಿಗೆ ಮೋಸ
ಪ್ರಾತಿನಿಧಿಕ ಚಿತ್ರ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಗಂಗಾಧರ​ ಬ. ಸಾಬೋಜಿ|

Updated on: Mar 06, 2024 | 4:05 PM

Share

ಚಿಕ್ಕಬಳ್ಳಾಪುರ, ಮಾರ್ಚ್​ 6: ರೈತರು ವಿದ್ಯುತ್ ಬಳಕೆ ಕಡಿಮೆ ಮಾಡಲು ಪಂಪುಸೆಟ್‍ಗಳಿಗೆ ಡೀಸೆಲ್, ಪೆಟ್ರೋಲ್ ಅವಲಂಬನೆ ತಪ್ಪಿಸಲು ಸೋಲಾರ್ ಪಂಪುಗಳನ್ನು ಅಳವಡಿಸಿಕೊಳ್ಳಲು ಸೇರಿದಂತೆ ಪರಿಸರ ಮಾಲಿನ್ಯ ತಡೆಗಟ್ಟಲು ಕೇಂದ್ರಸರ್ಕಾರ ರೈತರಿಗಾಗಿ ಪ್ರಧಾನಮಂತ್ರಿ ಕುಸುಮ್ ಯೋಜನೆ (Pradhan Mantri Kusum Yojana) ಜಾರಿಗೊಳಿಸಿದೆ. ಫಲಾನುಭವಿ ರೈತರು ಕೇಂದ್ರ ಸರ್ಕಾರದಿಂದ ಶೇ.60% ಸಹಾಯಧನ, ಶೇ.30% ರಷ್ಟು ಸಾಲದ ರೂಪದಲ್ಲಿ ಸಬ್ಸಿಡಿ ಪಡೆದು ಕೇವಲ ಶೇ.10% ರಷ್ಟು ಹಣ ಮಾತ್ರ ಪಾವತಿ ಮಾಡುವುದರ ಮೂಲಕ ಸೋಲಾರ್ ಪ್ಯಾನಲ್ ಪಂಪ್ ಮೋಟಾರ್ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ. ಇದರಿಂದ ಇತ್ತೀಚಿನ ದಿನಗಳಲ್ಲಿ ರೈತರು ಪ್ರಧಾನಮಂತ್ರಿ ಕುಸುಮ್ ಯೋಜನೆಯಡಿ ಅರ್ಜಿಗಳನ್ನು ಸಲ್ಲಿಸಲು ಮುಗಿಬೀಳುತ್ತಿದ್ದಾರೆ.

ಅರ್ಜಿದಾರ ರೈತರನ್ನು ಟಾರ್ಗೆಟ್ ಮಾಡಿರುವ ಸೈಬರ್ ವಂಚಕರು

ರೈತರು ಯೋಜನೆ ಸದ್ಬಳಕೆ ಮಾಡಿಕೊಳ್ಳಲು ಕೇಂದ್ರದ ಕುಸುಮ್ ಯೋಜನೆ ವೆಬ್‍ಸೈಟ್‍ಗಳನ್ನು ಸರ್ಚ್ ಮಾಡುತ್ತಿದ್ದಾರೆ. ವೆಬ್‍ಗಳಲ್ಲಿ ಅಸಲಿಗಿಂತ ನಕಲಿ ವೆಬ್‍ಗಳ ಹಾವಳಿ ಹೆಚ್ಚಾಗಿದ್ದು, ಅರ್ಜಿ ಸಲ್ಲಿಸುವ ರೈತರನ್ನು ಸಂಪರ್ಕಿಸಿ ದಾಖಲೆಗಳ ಪರಿಶೀಲನೆ ನೆಪದಲ್ಲಿ ಅರ್ಜಿದಾರರನ್ನು ವಾಟ್ಸಾಪ್ ಮೂಲಕ ಸಂಪರ್ಕಿಸಿ ರೈತರಿಗೆ ರಿಜಿಸ್ಟರ್‍ಗೆ ಹಣ, ವ್ಯರಿಪಿಕೇಷನ್‍ಗೆ ಹಣ, ಸಬ್ಸಿಡಿ ಹಣಕ್ಕೆ ಇಂತಿಷ್ಟು ಎಂದು ಹೇಳಿ ಹಣ ಪೀಕಿ ಮೋಸ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವಂಚನೆ ಪ್ರಕರಣಗಳ ಹೆಚ್ಚಳ 

ಪ್ರಗತಿಪರ ರೈತರಿಗೆ ಖ್ಯಾತಿಯಾಗಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ, ಶಿಡ್ಲಘಟ್ಟ, ಚಿಕ್ಕಬಳ್ಳಾಪುರದಲ್ಲಿ ಪ್ರತಿದಿನ ಒಂದಿಲ್ಲೊಂದು ಪ್ರಕರಣ ನಡೆಯುತ್ತಿದೆ. ಇನ್ನು ಮಾರ್ಚ್ 3 ರಂದು ಶಿಡ್ಲಘಟ್ಟ ತಾಲ್ಲೂಕು, ಇ-ತಿಮ್ಮಸಂದ್ರ ಗ್ರಾಮದ ಚಂದ್ರಶೇಖರರೆಡ್ಡಿ ಎನ್ನುವವರಿಗೂ ಸಹಾ ರೂ. 1,93,600/-ಗಳನ್ನು ಮೋಸ ಮಾಡಿದ್ದಾರೆ.

ಇದನ್ನೂ ಓದಿ: ಚಾಮರಾಜನಗರದಲ್ಲಿ ಹೆಚ್ಚಾಯ್ತು ಬಾಲ್ಯ ವಿವಾಹ ಪ್ರಕರಣಗಳು! ಒಂದೇ ವರ್ಷದಲ್ಲಿ ಬರೋಬ್ಬರಿ 167 ಕೇಸ್​ ದಾಖಲು

ರೈತರಿಗೆ ಸೋಲಾರ್ ಮೋಟಾರ್ ಪಂಪು ನೀಡದೇ, ವಾಪಸ್ಸು ಹಣವನ್ನು ನೀಡದೇ ರೈತನಿಗೆ ಮೋಸ ಮಾಡಲಾಗಿದೆ. ಇದರಿಂದ ನೊಂದ ರೈತ ಚಿಕ್ಕಬಳ್ಳಾಪುರ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!