AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಿ ಬೆಟ್ಟಕ್ಕೆ ಹೋಗಲು ಇದು ಪ್ರಶಸ್ತ ಸಮಯ, ಆದ್ರೆ ಪರಿಸರ ಹಾಳಾಗುತ್ತೆ ಯಾರೂ ಬರೋದು ಬೇಡಾ ಅಂತಿದೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ!

Chikkaballapur district administration: ಚಿಕ್ಕಬಳ್ಳಾಪುರ ಜಿಲ್ಲಾಡಳಿತದ ಈ ನಿರ್ಧಾರದ ವಿರುದ್ಧ ಪ್ರವಾಸಿಗರು ಆಕ್ರೋಶಗೊಂಡಿದ್ದಾರೆ. ಗಿರಿಧಾಮದಲ್ಲಿ ವಾಹನಗಳ ಪಾರ್ಕಿಂಗ್ ಸೌಲಭ್ಯವಿಲ್ಲ ಎಂದೂ ಸಬೂಬು ಹೇಳುತ್ತಿದೆ. ತಾನು ಸೂಕ್ತ ಕ್ರಮ ಕೈಗೊಳ್ಳದೆ. ಪರಿಸರ ಹಾಳಾಗುತ್ತೆ ಎನ್ನುವ ಮತ್ತೊಂದು ಸಬೂಬೂ ಉಲಿಯುತ್ತಿದೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ.

ನಂದಿ ಬೆಟ್ಟಕ್ಕೆ ಹೋಗಲು ಇದು ಪ್ರಶಸ್ತ ಸಮಯ, ಆದ್ರೆ ಪರಿಸರ ಹಾಳಾಗುತ್ತೆ ಯಾರೂ ಬರೋದು ಬೇಡಾ ಅಂತಿದೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ!
ನಂದಿ ಬೆಟ್ಟಕ್ಕೆ ಹೋಗಲು ಇದು ಪ್ರಶಸ್ತ ಸಮಯ, ಆದ್ರೆ ಪರಿಸರ ಹಾಳಾಗುತ್ತೆ ಎಂದು ಸಬೂಬು ಹೇಳಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ!
TV9 Web
| Updated By: ಸಾಧು ಶ್ರೀನಾಥ್​|

Updated on:Jan 29, 2022 | 9:50 AM

Share

ಚಿಕ್ಕಬಳ್ಳಾಪುರ: ಡಿಸೆಂಬರ್-ಜನವರಿ ಚುಮುಚುಮು ಚಳಿಯಲ್ಲಿ ನಂದಿ ಬೆಟ್ಟ ಹತ್ತಿ ( nandi hills) ಅಲ್ಲಿನ ಸೂರ್ಯೋದಯದ ಸೊಬಗನ್ನು ಸವಿಯುವುದೇ ಒಂದು ಭಾಗ್ಯ. ಬಹುತೇಕ ಪ್ರವಾಸಿಗರು, ಚಾರಣಿಗರು ಇಂತಹ ಅವಕಾಶಕ್ಕಾಗಿ ತಹತಹಿಸುತ್ತಾರೆ. ಆದರೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತವು ನಿರ್ದಾಕ್ಷಿಣ್ಯವಾಗಿ ಇಂತಹ ಅವಕಾಶವನ್ನು ಕಸಿದುಕೊಂಡಿದೆ. ಬೆಟ್ಟ ಹತ್ತಿ ಬರಲು ಪ್ರವಾಸಿಗರಿಗೆ ಬಿಲ್ಕುಲ್​ ಬೇಡಾ ಎಂದಿದೆ. ಅದರಲ್ಲೂ ಪ್ರವಾಸಿಗರಿಗೆ ಪ್ರಿಯವಾದ ವೀಕೆಂಡ್ ಕಾಲವಾದ ಶನಿವಾರ ಹಾಗೂ ಭಾನುವಾರಗಳಂದೇ ಈ ಕಡೆ ಬರಲೇಬೇಡಿ ಎಂದು ಚಿಕ್ಕಬಳ್ಳಾಪುರ ಜಿಲ್ಲಾಡಳಿತವು (Chikkaballapur district administration) ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಿ, ಕೈಕಟ್ಟಿ ಕುಳಿತುಬಿಟ್ಟಿದೆ.

ಹೀಗೆ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ ತೆರವುಗೊಳಿಸದ ಹಿನ್ನೆಲೆ ನಂದಿ ಗಿರಿಧಾಮದ ಬಳಿ ಪ್ರವಾಸಿಗರು ಪರದಾಡುವಂತಾಗಿದೆ. ಇಂದು ಶನಿವಾರ ಬೆಳಂಬೆಳಗ್ಗೆ ನಂದಿ ಗಿರಿಧಾಮ ನೋಡಲು ಆಗಮಿಸಿರುವ ಪ್ರವಾಸಿಗರು ದಿಕ್ಕುತೋಚದಂತಾಗಿ ನಿರಾಶೆಗೊಂಡಿದ್ದಾರೆ. ಮೂಲಭೂತ ಸೌಕರ್ಯಗಳ ಕೊರತೆಯಿಂದ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ ಅಂತಾ ಸಬೂಬು ಹೇಳುತ್ತಿದೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ. ಅಂದಹಾಗೆ ಕಳೆದ 6 ತಿಂಗಳಿಂದ ಪ್ರವಾಸಿಗರ ಪ್ರವೇಶಕ್ಕೆ ಹೀಗೆ ನಿರ್ಬಂಧ ಹೇರಲಾಗಿದೆ. ವೀಕೆಂಡ್ ಶನಿವಾರ ಹಾಗೂ ಭಾನುವಾರ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧವಿದೆ.

ಕೋವಿಡ್​ ವೀಕೆಂಡ್ ಕರ್ಫ್ಯೂ ಸಬೂಬು ಚಾಲ್ತಿಯಲ್ಲಿದೆ! ಚಿಕ್ಕಬಳ್ಳಾಪುರ ಜಿಲ್ಲಾಡಳಿತದ ಈ ನಿರ್ಧಾರದ ವಿರುದ್ಧ ಪ್ರವಾಸಿಗರು ಆಕ್ರೋಶಗೊಂಡಿದ್ದಾರೆ. ಗಿರಿಧಾಮದಲ್ಲಿ ವಾಹನಗಳ ಪಾರ್ಕಿಂಗ್ ಸೌಲಭ್ಯವಿಲ್ಲ ಎಂದೂ ಸಬೂಬು ಹೇಳುತ್ತಿದೆ. ತಾನು ಸೂಕ್ತ ಕ್ರಮ ಕೈಗೊಳ್ಳದೆ. ಪರಿಸರ ಹಾಳಾಗುತ್ತೆ ಎನ್ನುವ ಮತ್ತೊಂದು ಸಬೂಬೂ ಉಲಿಯುತ್ತಿದೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ. ಒಟ್ಟಿನಲ್ಲಿ ಇಂತಹ ಕ್ರಮಗಳಿಗೆಲ್ಲಾ ಬ್ರೇಕ್​ ಹಾಕಿ, ಆದಷ್ಟೂ ಬೇಗಾ ಜಿಲ್ಲಾಡಳಿತವು ಪ್ರವಾಸಿಗರನ್ನು ಕೈಬೀಸಿ ಕರೆಯುವಂತಾಗಲಿ ಎಂಬುದು ಪರಿಸರ ಪ್ರೇಮಿಗಳು ಮನದಾಳದ ಹಾರೈಕೆಯಾಗಿದೆ.

Nandi Hills: ಮೂಲಭೂತ ಸೌಕರ್ಯಗಳ ಕೊರತೆ ಹಿನ್ನೆಲೆ ಪ್ರವಾಸಿಗರಿಗೆ ನಿರ್ಬಂಧ

ಶ್ಯಾವಿಗೆ ಪಾಯಸದಲ್ಲಿ ಹುಳುಗಳು ಪತ್ತೆ! ರಾತ್ರಿ 12 ಗಂಟೆಯಾದರೂ ಊಟ ಇಲ್ಲದೆ ಪರದಾಡಿದ ವಿದ್ಯಾರ್ಥಿಗಳು

ಗದಗ: ಶ್ಯಾವಿಗೆ ಪಾಯಸದಲ್ಲಿ ಹುಳುಗಳು ಪತ್ತೆಯಾಗಿದ್ದಕ್ಕೆ ಗದಗನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿರುವ ಪ್ರಸಂಗ ನಡೆದಿದೆ. ಶುಕ್ರವಾರ ರಾತ್ರಿ ಶ್ಯಾವಿಗೆ ಪಾಯಸದಲ್ಲಿ ಹುಳುಗಳು ಕಂಡು ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ಇನ್ನು ಕೆಲ ವಿದ್ಯಾರ್ಥಿಗಳು ಹುಳುಗಳು ಗೊತ್ತಾಗದೆ ಹಾಗೇ ಪಾಯಸ ಸೇವಿಸಿದ್ದಾರೆ. ಗದಗ ನಗರದ ಹೊಸ ಬಸ್ ನಿಲ್ದಾಣದ ಬಳಿ ಇರುವ ಎಸ್ಸಿ, ಎಸ್ಟಿ ವಸತಿ ನಿಲಯದಲ್ಲಿ ಈ ಘಟನೆ ನಡೆದಿದೆ. ವಸತಿ ನಿಲಯದ ವಾರ್ಡನ್ ಬಿ ಎಸ್ ಗೂಡಿ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶಗೊಂಡಿದ್ದಾರೆ.

ರಾತ್ರಿ 12 ಗಂಟೆಯಾದರೂ ಊಟವಿಲ್ಲದೆ ವಿದ್ಯಾರ್ಥಿಗಳು ಪರದಾಡಿದ್ದಾರೆ. ಹಸಿವಿನಿಂದ ಬಳಲುತ್ತಿರುವ ವಿದ್ಯಾರ್ಥಿಗಳು ರಾತ್ರೋರಾತ್ರಿ ವಾರ್ಡನ್ ವಿರುದ್ಧ ಆಕ್ರೋಶಗೊಂಡಿದ್ದಾರೆ. ನಂತರ ವಸತಿ ಶಾಲೆಯ ಸಿಬ್ಬಂದಿ ಬೇರೆ ಅಡುಗೆ ಮಾಡಿ, ಹಸಿದ ಮಕ್ಕಳಿಗೆ ಬಡಿಸಿದ್ದಾರೆ. ಅವ್ಯವಸ್ಥೆ ಸರಿ ಮಾಡುವಂತೆ ಸಿಎಂ ಬಸವರಾಜ್ ಬೊಮ್ಮಾಯಿ‌ ಅವರಿಗೂ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ನಂದಿಗಿರಿಧಾಮದಲ್ಲಿ ಕ್ರಿಸ್​ಮಸ್​ ಆಚರಣೆಗೆ ಬ್ರೇಕ್​; ವೀಕೆಂಡ್​ನಲ್ಲಿ ಗಿರಿಧಾಮ ಬಂದ್ ಮಾಡಿದ ಹಿನ್ನಲೆ ಪ್ರವಾಸಿಗರ ಪರದಾಟ

ಇದನ್ನೂ ಓದಿ: ನಂದಿಬೆಟ್ಟದ ಮೇಲಿನ ವಾತಾವರಣ, ಮಂಜು ಮತ್ತು ಕುಳಿರ್ಗಾಳಿ ನಿಮ್ಮನ್ನು ಮತ್ತೊಂದು ಲೋಕಕ್ಕೆ ಕರೆದೊಯ್ಯುವುದು ನಿಸ್ಸಂಶಯ!

Published On - 8:05 am, Sat, 29 January 22

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?