AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkaballapur Gelatin Blast | ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣ: ಕರ್ತವ್ಯ ನಿರ್ಲಕ್ಷ್ಯ ಆರೋಪ PSI ಗೋಪಾಲ ರೆಡ್ಡಿ ಅಮಾನತು

Chikkaballapur Gelatin Blast :ಬೇಜವಾಬ್ದಾರಿತನ್ನು ತೋರ್ಪಡಿಸಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಗುಡಿಬಂಡೆ ಪೊಲೀಸ್ ಠಾಣಾ ಪಿಎಸ್ ಐ PSI ಆರ್. ಗೋಪಾಲ ರೆಡ್ಡಿ ಅವರನ್ನು ಅಮಾನತು ಮಾಡಲಾಗಿದೆ ಎಂದು ಕೇಂದ್ರ ವಲಯ ಐಜಿಪಿ (IGP- Central Range) ಚಂದ್ರಶೇಕರ್​ ಅವರು ತಿಳಿಸಿದ್ದಾರೆ.

Chikkaballapur Gelatin Blast | ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣ: ಕರ್ತವ್ಯ ನಿರ್ಲಕ್ಷ್ಯ ಆರೋಪ PSI ಗೋಪಾಲ ರೆಡ್ಡಿ ಅಮಾನತು
ಪಿಎಸ್​ಐ ಆರ್.ಗೋಪಾಲರೆಡ್ಡಿ
shruti hegde
| Edited By: ಸಾಧು ಶ್ರೀನಾಥ್​|

Updated on:Feb 24, 2021 | 6:09 PM

Share

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಪೋಟಕ್ಕೆ ಸಂಬಂಧಿಸಿದಂತೆ, ತನಿಖಾಧಿಕಾರಿಯಾದ ಪಿಎಸ್ಐ ಯಾವುದೇ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳದೇ ಕರ್ತವ್ಯದಲ್ಲಿ ಅತೀವ ನಿರ್ಲಕ್ಷತೆ ಮತ್ತು ಬೇಜವಾಬ್ದಾರಿತನ್ನು ತೋರ್ಪಡಿಸಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಗುಡಿಬಂಡೆ ಪೊಲೀಸ್ ಠಾಣಾ ಪಿಎಸ್ ಐ ಆರ್.ಗೋಪಾಲರೆಡ್ಡಿ ಅವರನ್ನು ಅಮಾನತು ಮಾಡಲಾಗಿದೆ ಎಂದು ಕೇಂದ್ರ ವಲಯ ಐಜಿಪಿ (IGP- Central Range) ಚಂದ್ರಶೇಕರ್​ ಅವರು ತಿಳಿಸಿದ್ದಾರೆ.

ಇದೇ ತಿಂಗಳು 07ನೇ ತಾರೀಕಿನಂದು ದಾಖಲಾಗಿದ್ದ ಪ್ರಕರಣದಲ್ಲಿ ಕರ್ತವ್ಯ ಲೋಪ ಕಂಡುಬಂದಿದೆ. ಪ್ರಕರಣದ ಆರೋಪಿಗಳಾದ ಮೂರ್ತಿ, ರಾಘವೇಂದ್ರ ಮತ್ತು ನಾಗರಾಜು ಪತ್ತೆ ಹಚ್ಚಿ ದಸ್ತಗಿರಿ ಮಾಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿರುವುದಿಲ್ಲ. ಸದರಿ ಪ್ರಕರಣವನ್ನು ದಾಖಲಿಸಿದ ಬಗ್ಗೆ ಪೊಲೀಸ್ ಐಟಿ ತಂತ್ರಾಂಶದಲ್ಲಿ ನಮೂದಿಸಿರುವುದಿಲ್ಲ.

ಇನ್ನು, ಮೇಲಧಿಕಾರಿಗಳಿಗೆ ಮಾಹಿತಿ ನೀಡದೇ 21ಮತ್ತು 22 ರಂದು ರಜೆಯ ಮೇಲೆ ತೆರಳಿದ್ದ PSI ಹಾಗೂ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡದೇ ಇದ್ದುದ್ದರಿಂದ ಸ್ಪೋಟ ಪ್ರಕರಣ ಸಂಭವಿಸಿದೆ. ಮೊದಲೇ ಪ್ರಕರಣದ ತನಿಖೆಯ ಬಗ್ಗೆ ಹಾಗೂ ಆರೋಪಿಗಳನ್ನು ಪತ್ತೆ ಹಚ್ಚುವ ಬಗ್ಗೆ ಅಧೀನ ಸಿಬ್ಬಂದಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಿರುವುದಿಲ್ಲ. ಎಲ್ಲಾ ಆರೋಪಿಗಳನ್ನು ಸೂಕ್ತ ಸಮಯದಲ್ಲಿ ದಸ್ತಗಿರಿ ಮಾಡಿದ್ದಲ್ಲಿ, ಸ್ಫೋಟದಲ್ಲಿ 06 ಜನ ಮೃತರಾಗಿರುವ ಘಟನೆಯನ್ನು ತಪ್ಪಿಸಬಹುದಾಗಿತ್ತು ಎಂಬ ವಿಚಾರ ಕೇಳಿಬರುತ್ತಿದೆ.

ತನಿಖಾಧಿಕಾರಿಯಾದ ಪಿಎಸ್ಐ ಯಾವುದೇ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳದೇ ಕರ್ತವ್ಯದಲ್ಲಿ ಅತೀವ ನಿರ್ಲಕ್ಷತೆ ಮತ್ತು ಬೇಜವಾಬ್ದಾರಿತನ್ನು ತೋರ್ಪಡಿಸಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಗುಡಿಬಂಡೆ ಪೊಲೀಸ್ ಠಾಣಾ ಪಿಎಸ್ ಐ ಆರ್.ಗೋಪಾಲರೆಡ್ಡಿ, ಅಮಾನತು ಮಾಡಲಾಗಿದೆ ಎಂದು ಕೇಂದ್ರ ವಲಯ ಐಜಿಪಿ ಚಂದ್ರಶೇಕರ್​ ಅವರು ಹೇಳಿದ್ದಾರೆ.

ಇದನ್ನೂ ಓದಿ: Chikkaballapura Gelatin Blast | ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ: ಕ್ರಷರ್​ ಹಾವಳಿಗೆ ಮುಚ್ಚಿಹೋದ ಪುರಾತನ ಹನುಮ ದೇಗುಲ!

ಇದನ್ನೂ ಓದಿ: Chikkaballapura Gelatin Blast: ಚಿಕ್ಕಬಳ್ಳಾಪುರ ಕ್ವಾರಿ ಮಾಲೀಕನಿಗೆ ಇದೆ ಭಾರೀ ರಾಜಕೀಯ ನಂಟು! ರೈಲ್ವೇ ಕೇಂದ್ರ ಸಮಿತಿಗೆ ನೇಮಕ ಮಾಡಿದ್ದು ಸ್ಥಳೀಯ ಸಂಸದ

Published On - 5:12 pm, Wed, 24 February 21

Follow Us
shruti hegde
shruti hegde
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ