AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkaballapur Gelatin Blast | ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣ: ಕರ್ತವ್ಯ ನಿರ್ಲಕ್ಷ್ಯ ಆರೋಪ PSI ಗೋಪಾಲ ರೆಡ್ಡಿ ಅಮಾನತು

Chikkaballapur Gelatin Blast :ಬೇಜವಾಬ್ದಾರಿತನ್ನು ತೋರ್ಪಡಿಸಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಗುಡಿಬಂಡೆ ಪೊಲೀಸ್ ಠಾಣಾ ಪಿಎಸ್ ಐ PSI ಆರ್. ಗೋಪಾಲ ರೆಡ್ಡಿ ಅವರನ್ನು ಅಮಾನತು ಮಾಡಲಾಗಿದೆ ಎಂದು ಕೇಂದ್ರ ವಲಯ ಐಜಿಪಿ (IGP- Central Range) ಚಂದ್ರಶೇಕರ್​ ಅವರು ತಿಳಿಸಿದ್ದಾರೆ.

Chikkaballapur Gelatin Blast | ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣ: ಕರ್ತವ್ಯ ನಿರ್ಲಕ್ಷ್ಯ ಆರೋಪ PSI ಗೋಪಾಲ ರೆಡ್ಡಿ ಅಮಾನತು
ಪಿಎಸ್​ಐ ಆರ್.ಗೋಪಾಲರೆಡ್ಡಿ
shruti hegde
| Edited By: |

Updated on:Feb 24, 2021 | 6:09 PM

Share

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಪೋಟಕ್ಕೆ ಸಂಬಂಧಿಸಿದಂತೆ, ತನಿಖಾಧಿಕಾರಿಯಾದ ಪಿಎಸ್ಐ ಯಾವುದೇ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳದೇ ಕರ್ತವ್ಯದಲ್ಲಿ ಅತೀವ ನಿರ್ಲಕ್ಷತೆ ಮತ್ತು ಬೇಜವಾಬ್ದಾರಿತನ್ನು ತೋರ್ಪಡಿಸಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಗುಡಿಬಂಡೆ ಪೊಲೀಸ್ ಠಾಣಾ ಪಿಎಸ್ ಐ ಆರ್.ಗೋಪಾಲರೆಡ್ಡಿ ಅವರನ್ನು ಅಮಾನತು ಮಾಡಲಾಗಿದೆ ಎಂದು ಕೇಂದ್ರ ವಲಯ ಐಜಿಪಿ (IGP- Central Range) ಚಂದ್ರಶೇಕರ್​ ಅವರು ತಿಳಿಸಿದ್ದಾರೆ.

ಇದೇ ತಿಂಗಳು 07ನೇ ತಾರೀಕಿನಂದು ದಾಖಲಾಗಿದ್ದ ಪ್ರಕರಣದಲ್ಲಿ ಕರ್ತವ್ಯ ಲೋಪ ಕಂಡುಬಂದಿದೆ. ಪ್ರಕರಣದ ಆರೋಪಿಗಳಾದ ಮೂರ್ತಿ, ರಾಘವೇಂದ್ರ ಮತ್ತು ನಾಗರಾಜು ಪತ್ತೆ ಹಚ್ಚಿ ದಸ್ತಗಿರಿ ಮಾಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿರುವುದಿಲ್ಲ. ಸದರಿ ಪ್ರಕರಣವನ್ನು ದಾಖಲಿಸಿದ ಬಗ್ಗೆ ಪೊಲೀಸ್ ಐಟಿ ತಂತ್ರಾಂಶದಲ್ಲಿ ನಮೂದಿಸಿರುವುದಿಲ್ಲ.

ಇನ್ನು, ಮೇಲಧಿಕಾರಿಗಳಿಗೆ ಮಾಹಿತಿ ನೀಡದೇ 21ಮತ್ತು 22 ರಂದು ರಜೆಯ ಮೇಲೆ ತೆರಳಿದ್ದ PSI ಹಾಗೂ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡದೇ ಇದ್ದುದ್ದರಿಂದ ಸ್ಪೋಟ ಪ್ರಕರಣ ಸಂಭವಿಸಿದೆ. ಮೊದಲೇ ಪ್ರಕರಣದ ತನಿಖೆಯ ಬಗ್ಗೆ ಹಾಗೂ ಆರೋಪಿಗಳನ್ನು ಪತ್ತೆ ಹಚ್ಚುವ ಬಗ್ಗೆ ಅಧೀನ ಸಿಬ್ಬಂದಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಿರುವುದಿಲ್ಲ. ಎಲ್ಲಾ ಆರೋಪಿಗಳನ್ನು ಸೂಕ್ತ ಸಮಯದಲ್ಲಿ ದಸ್ತಗಿರಿ ಮಾಡಿದ್ದಲ್ಲಿ, ಸ್ಫೋಟದಲ್ಲಿ 06 ಜನ ಮೃತರಾಗಿರುವ ಘಟನೆಯನ್ನು ತಪ್ಪಿಸಬಹುದಾಗಿತ್ತು ಎಂಬ ವಿಚಾರ ಕೇಳಿಬರುತ್ತಿದೆ.

ತನಿಖಾಧಿಕಾರಿಯಾದ ಪಿಎಸ್ಐ ಯಾವುದೇ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳದೇ ಕರ್ತವ್ಯದಲ್ಲಿ ಅತೀವ ನಿರ್ಲಕ್ಷತೆ ಮತ್ತು ಬೇಜವಾಬ್ದಾರಿತನ್ನು ತೋರ್ಪಡಿಸಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಗುಡಿಬಂಡೆ ಪೊಲೀಸ್ ಠಾಣಾ ಪಿಎಸ್ ಐ ಆರ್.ಗೋಪಾಲರೆಡ್ಡಿ, ಅಮಾನತು ಮಾಡಲಾಗಿದೆ ಎಂದು ಕೇಂದ್ರ ವಲಯ ಐಜಿಪಿ ಚಂದ್ರಶೇಕರ್​ ಅವರು ಹೇಳಿದ್ದಾರೆ.

ಇದನ್ನೂ ಓದಿ: Chikkaballapura Gelatin Blast | ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ: ಕ್ರಷರ್​ ಹಾವಳಿಗೆ ಮುಚ್ಚಿಹೋದ ಪುರಾತನ ಹನುಮ ದೇಗುಲ!

ಇದನ್ನೂ ಓದಿ: Chikkaballapura Gelatin Blast: ಚಿಕ್ಕಬಳ್ಳಾಪುರ ಕ್ವಾರಿ ಮಾಲೀಕನಿಗೆ ಇದೆ ಭಾರೀ ರಾಜಕೀಯ ನಂಟು! ರೈಲ್ವೇ ಕೇಂದ್ರ ಸಮಿತಿಗೆ ನೇಮಕ ಮಾಡಿದ್ದು ಸ್ಥಳೀಯ ಸಂಸದ

Published On - 5:12 pm, Wed, 24 February 21

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್