AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರದ ಸರ್ಕಾರಿ ಆಸ್ಪತ್ರೆಯತ್ತ ಆಂಧ್ರದ ಸೋಂಕಿತರು; ಪ್ರಥಮ ಚಿಕಿತ್ಸೆ ನೀಡಿ ವಾಪಸ್ ಕಳಿಸುತ್ತಿರುವ ವೈದ್ಯರು

ಅನ್ಯ ರಾಜ್ಯದ ರೋಗಿಗಳ ಸಂಖ್ಯೆ ಇತ್ತಿಚೇಗೆ ಹೆಚ್ಚಾಗುತ್ತಿದೆ. ಇದರಿಂದ ಆಸ್ಪತ್ರೆಗಳಲ್ಲಿ ಮತ್ತೊಂದು ಸಮಸ್ಯೆ ತಲೆದೊರಿದೆ. ಇನ್ನೂ ಕೆಲವು ಅತಿ ಬುದ್ಧಿವಂತರು ಕರ್ನಾಟಕದ ತಮ್ಮ ಸಂಬಂಧಿಗಳ ಗುರುತಿನ ಚೀಟಿ ತಂದು ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಜಿಲ್ಲಾ ಸರ್ಜನ್ ಡಾ.ಪಿ.ವಿ.ರಮೇಶ ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರದ ಸರ್ಕಾರಿ ಆಸ್ಪತ್ರೆಯತ್ತ ಆಂಧ್ರದ ಸೋಂಕಿತರು; ಪ್ರಥಮ ಚಿಕಿತ್ಸೆ ನೀಡಿ ವಾಪಸ್ ಕಳಿಸುತ್ತಿರುವ ವೈದ್ಯರು
ಚಿಕ್ಕಬಳ್ಳಾಪುರ ಸರ್ಕಾರಿ ಆಸ್ಪತ್ರೆ
preethi shettigar
|

Updated on: May 31, 2021 | 3:38 PM

Share

ಚಿಕ್ಕಬಳ್ಳಾಪುರ: ಕೊರೊನಾ ಎರಡನೇ ಅಲೆ ಹೆಚ್ಚಾಗಿದ್ದು, ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಪರಿಸ್ಥಿತಿಯನ್ನು ಸುಧಾರಿಸಲು ಲಾಕ್​ಡೌನ್ ಘೋಷಿಸಿದೆ. ಜತೆಗೆ ಕೆಲವು ನಿಯಮಗಳನ್ನು ಜಾರಿಗೆ ತಂದಿದೆ. ಅದರಂತೆ ಕೊರೊನಾ ಇರುವ ಕಾರಣಕ್ಕೆ ಹೊರ ರಾಜ್ಯದ ರೋಗಿಗಳಿಗೆ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಅವಕಾಶ ಇಲ್ಲ ಎಂದು ತಿಳಿಸಿದೆ. ಆದರೆ ಚಿಕ್ಕಬಳ್ಳಾಪುರ ಜಿಲ್ಲೆ ಒಂದೆಡೆ ರಾಜಧಾನಿ ಬೆಂಗಳೂರಿಗೆ ಹೊಂದಿಕೊಂಡಿದೆ. ಮತ್ತೊಂದೆಡೆ ಆಂಧ್ರದ ಗಡಿನಾಡಿಗೂ ಅಂಟಿಕೊಂಡಿದೆ. ಇದರಿಂದಾಗಿ ಆಂಧ್ರದ ಜನರು ಚಿಕ್ಕಬಳ್ಳಾಪುರ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಬರುತ್ತಿದ್ದಾರೆ. ಹೀಗಾಗಿ ಇಲ್ಲಿನ ಸರ್ಕಾರಿ ವೈದ್ಯರು ನಿಯಮಕ್ಕಿಂತ ಮಾನವೀಯತೆ ಮುಖ್ಯ ಎಂದು ಎಲ್ಲರಿಗೂ ಚಿಕಿತ್ಸೆ ನೀಡುತ್ತಿದ್ದಾರೆ.

ಆಂಧ್ರದ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗಿದ್ದು, ಅಲ್ಲಿ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ. ಹೀಗಾಗಿ ಗಡಿನಾಡು ಆಂಧ್ರದ ಕೊರೊನಾ ಸೋಂಕಿತರು ಹಾಗೂ ಸಾಮಾನ್ಯ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯಲು ಅಲ್ಲಿಯ ಜನ ಈಗ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಗುಡಿಬಂಡೆ ಗೌರಿಬಿದನೂರು ಆಸ್ಪತ್ರೆಗಳಿಗೆ ವಲಸೆ ಬರ್ತಿದ್ದಾರೆ. ಆದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ರಾಜ್ಯದ ಜನರಿಗೆ ಮಾತ್ರ ಉಚಿತ ಚಿಕಿತ್ಸೆ ನೀಡಲು ಅವಕಾಶ ಇದೆ. ಆದರೂ ಆಸ್ಪತ್ರೆಗೆ ಬಂದ ಆಂಧ್ರದ ರೋಗಿಗಳನ್ನು ಹಾಗೆ ವಾಪಸ್ ಕಳುಹಿಸದೆ ವೈದ್ಯರು ಪ್ರಥಮ ಚಿಕಿತ್ಸೆ ನೀಡಿ ವಾಪಸ್ ಕಳುಹಿಸುತ್ತಿದ್ದಾರೆ.

ಕೊರೊನಾ ಸೋಂಕಿತರು ಹಾಗೂ ಸಾಮಾನ್ಯ ಕಾಯಿಲೆಗಳಿಗೆ ಎಂದು ಆಸ್ಪತ್ರೆಗೆ ಬರುವ ಸ್ಥಳಿಯ ರೋಗಿಗಳನ್ನು ನೋಡಲು ತಜ್ಞ ವೈದ್ಯರ ಕೊರತೆಯಿದೆ. ಇಂಥದರಲ್ಲಿ ಅನ್ಯ ರಾಜ್ಯದ ರೋಗಿಗಳ ಸಂಖ್ಯೆ ಇತ್ತಿಚೇಗೆ ಹೆಚ್ಚಾಗುತ್ತಿದೆ. ಇದರಿಂದ ಆಸ್ಪತ್ರೆಗಳಲ್ಲಿ ಮತ್ತೊಂದು ಸಮಸ್ಯೆ ತಲೆದೊರಿದೆ. ಇನ್ನೂ ಕೆಲವು ಅತಿ ಬುದ್ಧಿವಂತರು ಕರ್ನಾಟಕದ ತಮ್ಮ ಸಂಬಂಧಿಗಳ ಗುರುತಿನ ಚೀಟಿ ತಂದು ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಜಿಲ್ಲಾ ಸರ್ಜನ್ ಡಾ.ಪಿ.ವಿ.ರಮೇಶ ತಿಳಿಸಿದ್ದಾರೆ.

ನಮ್ಮಲ್ಲೆ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ, ಇನ್ನೂ ಇಂಥದರಲ್ಲಿ ನೆರೆ ರಾಜ್ಯದ ಸೋಂಕಿತರಿಗೆ ಅಲ್ಲಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುತ್ತಿಲ್ಲ ಎಂದು ಕರ್ನಾಟಕದಲ್ಲಿ ಉತ್ತಮ ಗುಣಮಟ್ಟದ ಚಿಕಿತ್ಸೆಗಾಗಿ ಆಗಮಿಸುತ್ತಿದ್ದಾರೆ. ಹೀಗೆ ಆಂಧ್ರದ ರೋಗಿಗಳು ಗಡಿನಾಡು ಚಿಕ್ಕಬಳ್ಳಾಪುರ ಜಿಲ್ಲೆಯತ್ತ ಮುಖ ಮಾಡುತ್ತಿರುವುದು ಸರ್ಕಾರಿ ಆಸ್ಪತ್ರೆಯ ವೈದ್ಯರಿಗೆ ಸದ್ಯ ಮತ್ತೊಂದು ಸಮಸ್ಯೆಯಾಗಿದೆ.

ಇದನ್ನೂ ಓದಿ:

ಶಿವಮೊಗ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್‌ಗೆ ಶಸ್ತ್ರಚಿಕಿತ್ಸೆ ಯಶಸ್ವಿ; ಸೋಂಕಿತ ಅಪಾಯದಿಂದ ಪಾರು

ಗ್ರಾಮೀಣ ಭಾಗದ ಜನರ ಮನೆಗೆ ವೈದ್ಯಕೀಯ ಸೇವೆ; ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಸೋಂಕಿತರಿಗೆ ನೆರವು

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?