AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nandi Hills: ಪ್ರವಾಸಿಗರೇ ಗಮನಿಸಿ; ನಂದಿಬೆಟ್ಟಕ್ಕೆ ಜುಲೈ 19ರವರೆಗೆ ಪ್ರವೇಶ ನಿರ್ಬಂಧ

ನಾಳೆ ಮತ್ತು ನಾಡಿದ್ದು ವಾರಾಂತ್ಯವೂ ಇದ್ದು, ಕೊವಿಡ್ ಸೋಂಕು ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ. ಚಿಕ್ಕಬಳ್ಳಾಪುರದಲ್ಲಿ 27 ಜನರಿಗೆ ಕೊವಿಡ್ ಖಚಿತವಾಗಿದ್ದು,  ಇಬ್ಬರು ಮೃತಪಟ್ಟಿದ್ದಾರೆ.

Nandi Hills: ಪ್ರವಾಸಿಗರೇ ಗಮನಿಸಿ; ನಂದಿಬೆಟ್ಟಕ್ಕೆ ಜುಲೈ 19ರವರೆಗೆ ಪ್ರವೇಶ ನಿರ್ಬಂಧ
ನಂದಿ ಬೆಟ್ಟದ ಮೇಲಿಂದ ಕಾಣುವ ವಿಹಂಗಮ ದೃಶ್ಯ
TV9 Web
| Edited By: |

Updated on:Jul 16, 2021 | 8:41 PM

Share

ಚಿಕ್ಕಬಳ್ಳಾಪುರ: ಕೊವಿಡ್​ ಸೋಂಕಿನ ಹೆಚ್ಚಳವಾಗುವ ಸಾಧ್ಯತೆ ಇರುವುದರಿಂದ ನಂದಿಬೆಟ್ಟಕ್ಕೆ (Nandi Hills) ಪ್ರವೇಶ ನಿರ್ಬಂಧಿಸಲಾಗಿದೆ. ಜುಲೈ 19ರ ಬೆಳಗ್ಗೆ 6ರವರೆಗೂ ಪ್ರವೇಶ ನಿರ್ಬಂಧ ಇರಲಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಲತಾ ಆದೇಶಿಸಿದ್ದಾರೆ. ನಾಳೆ ಮತ್ತು ನಾಡಿದ್ದು ವಾರಾಂತ್ಯವೂ ಇದ್ದು, ಕೊವಿಡ್ ಸೋಂಕು ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ. ಚಿಕ್ಕಬಳ್ಳಾಪುರದಲ್ಲಿ ಇಂದು 27 ಜನರಿಗೆ ಕೊವಿಡ್ ಖಚಿತವಾಗಿದ್ದು,  ಇಬ್ಬರು ಮೃತಪಟ್ಟಿದ್ದಾರೆ.

ಇಂದಿನ ಕೊವಿಡ್ ಅಪ್​ಡೇಟ್ ಇಲ್ಲಿದೆ ರಾಜ್ಯದಲ್ಲಿ ಇಂದು ಒಂದೇ ದಿನ 1,977 ಜನರಿಗೆ ಕೊವಿಡ್ ಸೋಂಕು ದೃಢಪಟ್ಟಿದ್ದು, 48 ಜನರು ನಿಧನರಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಇದೇ ಅವಧಿಯಲ್ಲಿ 462 ಜನರಿಗೆ ಸೋಂಕು ಖಚಿತಪಟ್ಟಿದ್ದು, 10 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28,78,564ಕ್ಕೆ ಏರಿಕೆಯಾಗಿದೆ. ಈವರೆಗೆ ರಾಜ್ಯದಲ್ಲಿ 28,10,121 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 36,037 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 32,383 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಇಂದು ಒಂದೇ ದಿನ 3,188 ಜನರು ಕೊವಿಡ್​ನಿಂದ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಇಂದಿನ ಕೊವಿಡ್ ಪಾಸಿಟಿವಿಟಿ ಪ್ರಮಾಣ ಶೇಕಡಾ 1.42ರಷ್ಟಿದೆ. (Karnataka Covid Update 1977 new cases and 48 deaths today)

ನಂದಿಬೆಟ್ಟಕ್ಕೆ ರೋಪ್ ವೇ ನಂದಿಬೆಟ್ಟ ಗಿರಿಧಾಮಕ್ಕೆ ರೋಪ್ ವೇ ನಿರ್ಮಿಸಲು ಜುಲೈ 23ಕ್ಕೆ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್​ ಸ್ಥಳ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ. ಕೆಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ನಂದಿ ಬೆಟ್ಟಕ್ಕೆ (Nandi Hills) ರೋಪ್ ವೇ ಯೋಜನೆಗೆ ತ್ವರಿತವಾಗಿ ಚಾಲನೆ ನೀಡಲು ಅವರು ಇದೇ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರಿನ ಕುಮಾರಕೃಪಾ ಅತಿಥಿಗೃಹದಲ್ಲಿ ಇಂದು ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.  ಜತೆಗೆ, ಒಡಿಶಾದ ಕೋನಾರ್ಕ್ ಸೂರ್ಯ ದೇವಾಲಯದ ಮಾದರಿಯಲ್ಲಿ ಶ್ರವಣಬೆಳಗೊಳದಲ್ಲಿ ಬಾಹುಬಲಿ ಸಾಕ್ಷ್ಯಚಿತ್ರ ಪ್ರದರ್ಶನದ ವ್ಯವಸ್ಥೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ನಂದಿಬೆಟ್ಟ ಗಿರಿಧಾಮಕ್ಕೆ ರೋಪ್ ವೇಯನ್ನು ಖಾಸಗಿ ಸಂಸ್ಥೆಯೊಂದು ನಿರ್ಮಿಸಲಿದ್ದು, ದೇಶ ವಿದೇಶಗಳಲ್ಲಿ ರೋಪ್ ವೇಗಳನ್ನು ನಿರ್ಮಿಸಿದ ಅನುಭವಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಇದನ್ನೂ ಓದಿ:  

ಪ್ರವಾಸಿಗರಿಗಾಗಿ ಹೊನ್ನಾವರ-ಗೇರಸೊಪ್ಪಾ ಜಲಯಾನ ಯೋಜನೆ; ಇತಿಹಾಸದ ಕಾಲಗರ್ಭದಿಂದ ಇಲ್ಲಿಯವರೆಗೆ..

World Population Day 2021: ಜಗತ್ತಿನಲ್ಲಿ ಅತಿ ಕಡಿಮೆ ಜನಸಂಖ್ಯೆ ಹೊಂದಿರುವ ದೇಶಗಳು ಯಾವುವು? ಅಲ್ಲಿನ ವಿಶೇಷಗಳೇನು? ಇಲ್ಲಿದೆ ವಿವರ

(Chikkaballapur Nandi Hills Travel restrictions till 19th July due to covid spread)

Published On - 8:30 pm, Fri, 16 July 21

Follow Us
Web contact
Web contact

TV9 Kannada

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್