AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರದಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿಗಳ ಬಂಧನ; 33 ಕೆಜಿ ಮಾದಕ ವಸ್ತು ವಶಪಡಿಸಿಕೊಂಡ ಪೊಲೀಸರು

ಟಾಟಾ ಎಸ್ ವಾಹನದಲ್ಲಿ ವಸ್ತುಗಳ ಮಧ್ಯೆ ಎರಡು ಕೆಜಿಯ ಗಾಂಜಾ ಪಾಕೇಟ್​ಗಳನ್ನು ಇಟ್ಟುಕೊಂಡು ಗಾಂಜಾ ವಿತರಕರಿಗೆ ಸರಬರಾಜು ಮಾಡುತ್ತಿದ್ದರು. ಆದರೆ ನಿನ್ನೆ ಶಿಡ್ಲಘಟ್ಟ ಪೊಲೀಸ್ ಸರ್ಕಲ್ ಇನ್ಸ್​ಪೇಕ್ಟರ್ ಸುರೇಶ, ದಿಬ್ಬೂರಹಳ್ಳಿ ಪೊಲೀಸ್ ಠಾಣೆ ಸಬ್ ಇನ್ಸ್​ಪೇಕ್ಟರ್ ರಂಜನ್ ಕುಮಾರ್ ಮತ್ತವರ ತಂಡ, ಆರೋಪಿಗಳ ಬಣ್ಣ ಬಯಲು ಮಾಡಿ ಗಾಂಜಾ ಸಮೇತ ಆರೋಪಿಗಳನ್ನು ಬಂಧಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿಗಳ ಬಂಧನ; 33 ಕೆಜಿ ಮಾದಕ ವಸ್ತು ವಶಪಡಿಸಿಕೊಂಡ ಪೊಲೀಸರು
ಚಿಕ್ಕಬಳ್ಳಾಪುರದಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿಗಳ ಬಂಧನ
preethi shettigar
|

Updated on: May 11, 2021 | 1:24 PM

Share

ಚಿಕ್ಕಬಳ್ಳಾಪುರ: ಇದು ಲಾಕ್​ಡೌನ್ ಸಮಯ, ಎಲ್ಲಿ ನೋಡಿದರು ಪೊಲೀಸ್ ಬಂದೋಬಸ್ತ್ ಇರುತ್ತದೆ. ಪೊಲೀಸರ ಕಣ್ಗಾವಲಿನಿಂದ ತಪ್ಪಿಸಿಕೊಳ್ಳಲು ಅಷ್ಟು ಸುಲಭವಲ್ಲ. ಹೀಗಿರುವಾಗಲೇ ಗಾಂಜಾ ಮಾಫಿಯಾ ಮಾಡುವ ತಂಡವೊಂದು ಚಿಕ್ಕಬಳ್ಳಾಪುರದಲ್ಲಿ ಪೊಲೀಸರ ಮುಂದೆಯೇ ಯಾರಿಗೂ ಅನುಮಾನ ಬಾರದ ರೀತಿಯಲ್ಲಿ ಲೋಡ್ ಗಟ್ಟಲೆ ಗಾಂಜಾ ಸಾಗಿಸುತ್ತಿದ್ದರು. ಆದರೆ ಆರೋಪಿಗಳು ಛಾಪೆ ಕೆಳಗೆ ತೂರಿ ಗಾಂಜಾ ಸಾಗಾಟ ಮಾಡಿದರೆ ಪೊಲೀಸರು ರಂಗೋಲಿ ಕೆಳಗೆ ತೂರಿ ಆರೋಪಿಗಳನ್ನು ಹಾಗೂ ಸಾಗಿಸುತ್ತಿದ್ದ ಗಾಂಜಾವನ್ನು ಜಪ್ತಿ ಮಾಡಿದ್ದಾರೆ.

ಆಂಧ್ರ ಮೂಲದ ಪ್ರಕಾಶ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಚೇಳೂರು ಗ್ರಾಮ ಮೂಲದ ವೆಂಟಕರಮಣಪ್ಪ, ಆಂಧ್ರದಿಂದ ಶಿಡ್ಲಘಟ್ಟ ಮಾರ್ಗದ ಮೂಲಕ ಬೆಂಗಳೂರಿಗೆ ಗಾಂಜಾ ಸರಬರಾಜು ಮಾಡುತ್ತಿದ್ದರು. ತಮ್ಮ ಕಳ್ಳ ವ್ಯವಹಾರ ಯಾರಿಗೂ ಗೊತ್ತಾಗಬಾರದು ಎಂದು ಗೃಹೋಪಯೋಗಿ ವಸ್ತುಗಳ ಮಾರಾಟ ನೆಪದಲ್ಲಿ ಟಾಟಾ ಎಸ್ ವಾಹನದಲ್ಲಿ ವಸ್ತುಗಳ ಮಧ್ಯೆ ಎರಡು ಕೆಜಿಯ ಗಾಂಜಾ ಪಾಕೇಟ್​ಗಳನ್ನು ಇಟ್ಟುಕೊಂಡು ಗಾಂಜಾ ವಿತರಕರಿಗೆ ಸರಬರಾಜು ಮಾಡುತ್ತಿದ್ದರು. ಆದರೆ ನಿನ್ನೆ ಶಿಡ್ಲಘಟ್ಟ ಪೊಲೀಸ್ ಸರ್ಕಲ್ ಇನ್ಸ್​ಪೇಕ್ಟರ್ ಸುರೇಶ, ದಿಬ್ಬೂರಹಳ್ಳಿ ಪೊಲೀಸ್ ಠಾಣೆ ಸಬ್ ಇನ್ಸ್​ಪೇಕ್ಟರ್ ರಂಜನ್ ಕುಮಾರ್ ಮತ್ತವರ ತಂಡ, ಆರೋಪಿಗಳ ಬಣ್ಣ ಬಯಲು ಮಾಡಿ ಗಾಂಜಾ ಸಮೇತ ಆರೋಪಿಗಳನ್ನು ಬಂಧಿಸಿದ್ದಾರೆ.

ಮಾದಕ ವಸ್ತು ಮಾರಾಟ ಮಾಡುವವರಿಗೆ ಲಾಕ್​ಡೌನ್ ಇದ್ದರು ಹೆದರಿಕೆ ಇಲ್ಲ ಎನ್ನುವುದು ಈ ಪ್ರಕರಣದಿಂದ ಅರಿವಿಗೆ ಬರುತ್ತದೆ. ಮಾದಕ ವ್ಯಸನಿಗಳ ಬೇಡಿಕೆಗೆ ತಕ್ಕಂತೆ ಹಗಲು ವೇಷ ಧರಿಸಿ ನಿಷೇಧಿತ ವಸ್ತುವನ್ನು ಸಾಗಾಟ ಮಾಡುತ್ತಾರೆ. ಮನೆ ಮನೆಗಳಿಗೆ ಪಾತ್ರೆ, ಸಾಮಾನು, ಗೃಹೊಪಯೋಗಿ ವಸ್ತುಗಳನ್ನು ಮಾರಾಟ ಮಾಡುವ ನೆಪದಲ್ಲಿ 17 ಲಕ್ಷ ರೂಪಾಯಿ ಮೌಲ್ಯದ 33 ಕೆಜಿ ಗಾಂಜವನ್ನು ಸಾಗಾಟ ಮಾಡುತ್ತಿದ್ದರು. ಆದರೆ ಪೊಲೀಸರ ಕಾರ್ಯಚರಣೆ ವೇಳೆ ಈ ವಿಷಯ ಬೆಳಕಿಗೆ ಬಂದಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಚಿಕ್ಕಬಳ್ಳಾಪುರದ ಎಸ್​ಪಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.

ಈಗ ಲಾಕ್​ಡನ್​ ಸಮಯದಲ್ಲಿ ಮಾದಕ ವಸ್ತುಗಳಿಗೆ ಬಾರಿ ಬೇಡಿಕೆ ಇದೆ, ಡಬಲ್ ರೇಟ್​ಗೆ ಮಾದಕ ವಸ್ತುಗಳು ಮಾರಾಟ ಆಗುತ್ತಿವೆ ಎನ್ನುವ ಮಾತು ಕೂಡ ಇದೆ. ಆದರೆ ಎಲ್ಲೇಡೆ ಪೊಲೀಸ್ ಸರ್ಪಗಾವಲು ಇರುವ ಕಾರಣ ಆರೋಪಿಗಳು ಎನೇ ತಪ್ಪುದಾರಿ ಹಿಡಿದರು ಅದನ್ನು ಭೇಧಿಸುವಲ್ಲಿ ಪೊಲೀಸರು ಸದಾ ಒಂದು ಹೆಜ್ಜೆ ಮುಂದೆ ಇರುತ್ತಾರೆ ಎನ್ನುವುದು ಮಾತ್ರ ನಿಜ.

ಇದನ್ನೂ ಓದಿ:

ಫ್ಲವರ್ ಪಾಟ್​ನಲ್ಲಿ ಗಾಂಜಾ ಬೆಳೆಯುತ್ತಿದ್ದ ಇಬ್ಬರ ಬಂಧನ; ಚಿಕ್ಕಮಗಳೂರಿನಲ್ಲಿ ಪೊಲೀಸರ ಕಾರ್ಯಾಚರಣೆ ವೇಳೆ ಸತ್ಯ ಬಯಲು

ಬೆಂಗಳೂರಿನಲ್ಲಿ ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ; 84.60 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ