AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ರಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 108 ಜನ ಮಹಿಳೆಯರು ಕಾಣೆ; ಆತಂಕ ವ್ಯಕ್ತಪಡಿಸಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 2024 ರಲ್ಲಿ ಬರೊಬ್ಬರಿ 108 ಜನ ಮಹಿಳೆಯರು ಕಾಣೆಯಾಗಿದ್ದು, ಅದರಲ್ಲಿ 24 ಜನ ಮಹಿಳೆಯರು ಇನ್ನೂ ಪತ್ತೆ ಆಗಿಲ್ಲ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ(Karnataka State Commission for Women) ಡಾ.ನಾಗಲಕ್ಷ್ಮೀ ಚೌಧರಿ ಆತಂಕ ವ್ಯಕ್ತಪಡಿಸಿದ್ದಾರೆ.

2024ರಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 108 ಜನ ಮಹಿಳೆಯರು ಕಾಣೆ; ಆತಂಕ ವ್ಯಕ್ತಪಡಿಸಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Mar 15, 2024 | 8:46 PM

Share

ಚಿಕ್ಕಬಳ್ಳಾಪುರ, ಮಾ.15: 2024ರಲ್ಲಿ ಚಿಕ್ಕಬಳ್ಳಾಪುರ(Chikkaballapur) ಜಿಲ್ಲೆಯಲ್ಲಿಯೇ ಬರೊಬ್ಬರಿ 108 ಜನ ಮಹಿಳೆಯರು ಕಾಣೆಯಾಗಿದ್ದು, ಅದರಲ್ಲಿ 24 ಜನ ಮಹಿಳೆಯರು ಇನ್ನೂ ಪತ್ತೆ ಆಗಿಲ್ಲ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ(Karnataka State Commission for Women) ಡಾ.ನಾಗಲಕ್ಷ್ಮೀ ಚೌಧರಿ ಆತಂಕ ವ್ಯಕ್ತಪಡಿಸಿದ್ದಾರೆ. ಇಂದು(ಮಾ.15) ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ‘ಮಹಿಳೆಯರು ಕಾಣೆಯಾಗುವುದರ ಹಿಂದೆ ದೊಡ್ಡ ಮಾಫಿಯಾನೇ ಇದೆ ಎಂದಿದ್ದಾರೆ.

ಇನ್ನು ಅಪ್ರಾಪ್ತ ಬಾಲಕಿಯರ ಅತ್ಯಾಚಾರಕ್ಕೆ ಅವರ ಸಂಬಂಧಿ ಪುರುಷರೇ ಕಾರಣರಾಗಿದ್ದಾರೆ. ಅಪ್ರಾಪ್ತ ವಯಸ್ಸಿನಲ್ಲಿ ಗರ್ಭಿಣಿ ಮಾಡಿ ಅವರನ್ನು ನರಕಕ್ಕೆ ದೂಡುತ್ತಿದ್ದಾರೆ. 7 ರಿಂದ 8ನೇ ತರಗತಿ ಓದುವಾಗ 7-8 ತಿಂಗಳ ಗರ್ಭಿಣಿಯಾದರೆ ಏನು ಮಾಡುವುದು. ಹೆಣ್ಣುಮಕ್ಕಳ ಮೇಲೆ ತಂದೆ-ತಾಯಿಗಳು ಹೆಚ್ಚಿನ ನಿಗಾ ಇಡಬೇಕು. ಇಲ್ಲದಿದ್ದರೆ ಇಂತಹ ಅನಾಹುತಗಳು ಹೆಚ್ಚೆಚ್ಚು ಆಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ:ಕಾಬೂಲ್​ನ ಶಹರ್-ಇ-ನಾವ್ ಪಾರ್ಕ್​ನಲ್ಲಿ ಆಶ್ರಯ ಪಡೆದಿದ್ದ ನೂರಾರು ಮಹಿಳೆಯರು ನಾಪತ್ತೆ; ಕುಟುಂಬಗಳಿಂದ ಹುಡುಕಾಟ

ಮಹಿಳೆಯರ ಬಳಿ ಹಣವಿದ್ದರೆ ಆರೋಗ್ಯ, ಶಿಕ್ಷಣಕ್ಕೆ ಒತ್ತು ಸಿಗುತ್ತೆ

ಇದೇ ವೇಳೆ ಕಾಂಗ್ರೆಸ್​ನ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಅವರು, ‘ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರ ಹಕ್ಕುಗಳಿಗೆ ಗೌರವ ಬಂದಿದೆ. ಮಹಿಳೆಯರ ಮೇಲೆ ಹೂಡಿಕೆ ಮಾಡುವುದರಿಂದ ಕುಟುಂಬ, ಸಮಾಜ ಹಾಗೂ ದೇಶದ ಅಭಿವೃದ್ಧಿಯಾಗುತ್ತದೆ. ಜೊತೆಗೆ ಮಹಿಳೆಯರ ಬಳಿ ಹಣವಿದ್ದರೆ ಆರೋಗ್ಯ ಮತ್ತು ಶಿಕ್ಷಣಕ್ಕೆ ಒತ್ತು ಸಿಗುತ್ತದೆ ಎನ್ನುವ ಮೂಲಕ ಗ್ಯಾರಂಟಿ ಯೋಜನೆಗಳ ಲಾಭದ ಕುರಿತು ಹರ್ಷ ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?