AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಡ್ಲಘಟ್ಟದಲ್ಲಿ 185 ಕೋಟಿ ರೂ. ವೆಚ್ಚದ ಸರ್ಕಾರಿ ಹೈಟೆಕ್ ರೇಷ್ಮೆ ಮಾರ್ಕೆಟ್ ನಿರ್ಮಾಣ: ಸಚಿವ ಕೆ ವೆಂಕಟೇಶ್

ಶಿಡ್ಲಘಟ್ಟ ನಗರದ ಹೊರವಲಯದಲ್ಲಿ 185 ಕೋಟಿ ರೂಪಾಯಿ ವೆಚ್ಚದಲ್ಲಿ ಮುಂದಿನ ವರ್ಷದ ವೇಳೆಗೆ ಹೈಟೆಕ್ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಯನ್ನು ನಿರ್ಮಿಸುವ ಉದ್ದೇಶವಿದೆ. ಇಂದು ಸ್ಥಳ ಗುರುತಿಸಲಾಗಿದೆ, ಸದ್ಯದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ರೇಷ್ಮೆ ಹಾಗೂ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್​ ಹೇಳಿದ್ದಾರೆ.

ಶಿಡ್ಲಘಟ್ಟದಲ್ಲಿ 185 ಕೋಟಿ ರೂ. ವೆಚ್ಚದ ಸರ್ಕಾರಿ ಹೈಟೆಕ್ ರೇಷ್ಮೆ ಮಾರ್ಕೆಟ್ ನಿರ್ಮಾಣ: ಸಚಿವ ಕೆ ವೆಂಕಟೇಶ್
ರೇಷ್ಮೆ ಮಾರ್ಕೆಟ್ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ ಸಚಿವ ಕೆ. ವೆಂಕಟೇಶ್
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Oct 05, 2023 | 7:55 PM

Share

ಚಿಕ್ಕಬಳ್ಳಾಪುರ, ಅಕ್ಟೋಬರ್​ 05: ಜಿಲ್ಲೆಯ ಶಿಡ್ಲಘಟ್ಟ ನಗರದ ಹೊರವಲಯದಲ್ಲಿ 185 ಕೋಟಿ ರೂಪಾಯಿ ವೆಚ್ಚದಲ್ಲಿ ಮುಂದಿನ ವರ್ಷದ ವೇಳೆಗೆ ಹೈಟೆಕ್ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಯನ್ನು ನಿರ್ಮಿಸುವ ಉದ್ದೇಶವಿದೆ. ಇಂದು ಸ್ಥಳ ಗುರುತಿಸಲಾಗಿದೆ, ಸದ್ಯದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ರೇಷ್ಮೆ ಹಾಗೂ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ (K Venkatesh)​ ಹೇಳಿದ್ದಾರೆ. ಇಂದು ಶಿಡ್ಲಘಟ್ಟ ನಗರಕ್ಕೆ ಭೇಟಿ ನೀಡಿ ನಗರದ ಹೊರವಲಯದ ಹನುಮಂತಪುರ ಗ್ರಾಮದ ಸರ್ವೇ ನಂ 19ರ ಸರ್ಕಾರಿ ಜಮೀನಿಗೆ ಭೇಟಿ ನೀಡಿ, ಅಧಿಕಾರಿಗಳಿಂದ ಮಾಹಿತಿ ಪಡೆದರು.

ನಂತರ ಮಾತನಾಡಿದ ಅವರು, ರೇಷ್ಮೆ ಗೂಡಿನ ಮಾರುಕಟ್ಟೆ ನಿರ್ಮಿಸುವುದು ಈ ಭಾಗದ ರೈತರ ಬಹುದಿನದ ಬೇಡಿಕೆ ಆಗಿತ್ತು. ಇದನ್ನು ಮನಗಂಡ ಸರ್ಕಾರ 2023-24 ಸಾಲಿನ ಆಯವ್ಯಯದಲ್ಲಿ “ಶಿಡ್ಲಘಟ್ಟ ನಗರದಲ್ಲಿ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆ ನಿರ್ಮಿಸಲು 75 ಕೋಟಿ ರೂ. ಅನುದಾನವನ್ನು ಮಿಸಲಿಡಲಾಗಿತ್ತು. ಈ ಯೋಜನೆಗೆ ಒಟ್ಟು 185 ಅನುದಾನದ ಅವಶ್ಯಕತೆ ಇದ್ದು ಪ್ರಸ್ತುತ ಮೊದಲನೇ ಹಂತದಲ್ಲಿ 80 ಕೋಟಿ ರೂ. ಅನುದಾನದಲ್ಲಿ ಕೆಲಸ ಆರಂಭ ಆಗಲಿದೆ ಎಂದರು.

ಇದನ್ನೂ ಓದಿ: ಅ. 6 ರಂದು ಚಿಕ್ಕಬಳ್ಳಾಪುರಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ; ಇಲ್ಲಿದೆ ವಿವರ

ಮುಂದಿನ ವರ್ಷದಲ್ಲಿ ಉಳಿಕೆ ಅನುದಾನವನ್ನು ಒದಗಿಸಿ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು. ಸದ್ಯದಲ್ಲೇ ಮಾರುಕಟ್ಟೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಲಿದೆ ಎಂದು ತಿಳಿಸಿದರು.

ಪ್ರಸ್ತುತ ಹನುಮಂತಪುರ ಗ್ರಾಮದ ಬಳಿ ಗುರ್ತಿಸಿರುವ ಜಾಗ 15 ಎಕರೆ ವಿಸ್ತೀರ್ಣವನ್ನು ಹೊಂದಿದ್ದು, ನಗರಕ್ಕೆ ಸಮೀಪ ಇರುವುದರಿಂದ ರೇಷ್ಮೆ ಗೂಡನ್ನು ರೈತರು ಮಾರುಕಟ್ಟೆಗೆ ತರಲು ಅನುಕೂಲ ಆಗಲಿದೆ. ರೇಷ್ಮೆ ವಹಿವಾಟಿಗೂ ಸಹಕಾರಿಯಾಗುತ್ತದೆ.

ಇದನ್ನೂ ಓದಿ: ವಿವಾದದ ಗೂಡಾದ ಐತಿಹಾಸಿಕ ಪ್ರಸಿದ್ಧ ಪಾಪಾಘ್ನಿ ಮಠ: ಒಂದೇ ಸಮುದಾಯದ 2 ಬಣಗಳ ಮಧ್ಯೆ ಪೈಟ್

ಮುಂದಿನ ದಿನಗಳಲ್ಲಿ ಆನ್ ಲೈನ್ ವ್ಯವಸ್ಥೆ ಮೂಲಕ ವಹಿವಾಟು ನಡೆಯುವುದರಿಂದ ಅದಕ್ಕೆ ಪೂರಕವಾಗಿ ಮಾರುಕಟ್ಟೆಯನ್ನು ರೈತರಿಗೆ ಮತ್ತು ವ್ಯಾಪರಸ್ಥರಿಗೆ ಅನುಕೂಲ ಆಗುವ ರೀತಿಯಲ್ಲಿ ಸುಸಜ್ಜಿತವಾಗಿ ನಿರ್ಮಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ