AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನೂತನ ವಿಧಾನಗಳ ಮೂಲಕ ಮಾವು ಬೆಳೆದು 75 ಲಕ್ಷ ರೂಪಾಯಿ ಸಂಪಾದಿಸಿದ ರೈತ!

ಇಲ್ಲೊಬ್ಬ ರೈತ ಮಾಡಿದ ಐಡಿಯಾದಿಂದ ಮೂರು ಪಟ್ಟು ಹೆಚ್ಚಾಗಿ ಮಾವಿನ ಇಳುವರಿ ಬಂದಿದೆ. ರೈತನೊಬ್ಬ ಬೇಸಿಗೆಯ ರಣಬಿಸಿಲಿಗೂ ಸೆಡ್ಡು ಹೊಡೆದು ಬಂಪರ್ ಮಾವು ಬೆಳಿದಿದ್ದ. ಕೈ ಕೆಸರಾದರೆ ಬಾಯಿ ಮೊಸರು ಎನ್ನುವ ಹಾಗೆ ಮಾವಿನ ಕಾಯಿಯಲ್ಲಿ 75 ಲಕ್ಷ ರೂಪಾಯಿ ಆದಾಯ ಗಳಿಸಿ, ಬೆಷ್ ಅನಿಸಿಕೊಂಡಿದ್ದಾನೆ. ಅಷ್ಟಕ್ಕೂ ಆ ರೈತ ಯಾರು ಅಂತೀರಾ? ಈ ಸ್ಟೋರಿ ಓದಿ.

ವಿನೂತನ ವಿಧಾನಗಳ ಮೂಲಕ ಮಾವು ಬೆಳೆದು 75 ಲಕ್ಷ ರೂಪಾಯಿ ಸಂಪಾದಿಸಿದ ರೈತ!
ವಿನೂತನ ವಿಧಾನಗಳ ಮೂಲಕ ಮಾವು ಬೆಳೆದು 75 ಲಕ್ಷ ರೂಪಾಯಿ ಸಂಪಾದಿಸಿದ ರೈತ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jun 06, 2024 | 8:04 PM

Share

ಚಿಕ್ಕಬಳ್ಳಾಪುರ, ಜೂ.06: ಈ ಬಾರಿಯ ಮಾವಿನ ಇಳುವರಿ(Mango Crop) ಕಂಡ ಬೆಂಗಳೂರು ನಗರ ಜಿಲ್ಲೆಯ ಉತ್ತರ ತಾಲೂಕಿನ ಮೀಸಗಾನಹಳ್ಳೀ ಗ್ರಾಮದ ರೈತ ಗೋಪಾಲಪ್ಪ, ಸ್ವತಃ  ಭೂಮಿತಾಯಿಗೆ ನಮೊ ಎನ್ನುತ್ತಿದ್ದಾರೆ. ಬೆಂಗಳೂರಿನ ಗೋಪಾಲಪ್ಪ ಚಿಕ್ಕಬಳ್ಳಾಪುರ(Chikkaballapur) ತಾಲೂಕಿನ ಲಕ್ಕನಾಯಕನಹಳ್ಳಿ ಗ್ರಾಮದ ಬಳಿ 25 ಎಕೆರೆ ಜಮೀನು ಹೊಂದಿದ್ದು, ಅದರಲ್ಲಿ 18 ಎಕರೆ ಜಮೀನಿಲ್ಲಿ ಬಾದಾಮಿ, ಮಲ್ಲಿಕಾ, ತೋತಾಪುರಿ, ಬೇಗನ್ ಪಲ್ಲಿ ಜಾತಿಯ ಮಾವು ಬೆಳೆದಿದ್ದಾನೆ. ಈ ಭಾರಿ ಇಸ್ರೇಲ್ ತಂತ್ರಜ್ಞಾನ ಬಳಸಿ ಮಾವಿನಕಾಯಿ ಬೆಳಿದಿದ್ದು, ಗಿಡದ ತುಂಬ ಬರಿ ಕಾಯಿಗಳೆ ಕಾಣುತ್ತಿವೆ.

ಇಸ್ರೇಲ್ ತಂತ್ರಜ್ಞಾನ

ಈ ರೈತ ತೋಟವನ್ನು 75 ಲಕ್ಷ ರೂಪಾಯಿಗೆ ಗುತ್ತಿಗೆ ಕೊಟ್ಟಿದ್ದು, ಮಾವಿನ ಮರಗಳಿಗೆ ಮಧ್ಯಭಾಗದಲ್ಲೇ ಸೂರ್ಯನ ಬೆಳಕು ಬೀಳುವ ಹಾಗೆ ಮಾಡಲಾಗಿದೆ. ಇಸ್ರೇಲ್ ತಂತ್ರಜ್ಞಾನದ ಮಾದರಿಯಲ್ಲಿ ಪ್ರೂನಿಂಗ್ ಮಾಡಿದ್ದಾರೆ. ಮಾವಿನ ಮರಗಳಿಗೆ ಹನಿ ನೀರಾವರಿ ಪದ್ದತಿ ಆಳವಡಿಸಿ ಪ್ರತಿನಿತ್ಯ ನೀರುಣಿಸಿದ್ದಾರೆ. ಮರದ ಕೆಳಗೆ ನಾಲ್ಕು ಕಡೆ ಗುಂಡಿ ತೆಗೆದು ಪೋಷಕಾಂಶಗಳನ್ನ ಪೂರೈಸಿದ್ದಾರೆ.

ಇದನ್ನೂ ಓದಿ:ಬಿಸಿಲಿಗೆ ಬಾಡಿದ ಮಾವು; 88 ಕೋಟಿ ರೂ. ಪರಿಹಾರ ನೀಡಲು ರಾಜ್ಯ ಸರ್ಕಾರಕ್ಕೆ ಮನವಿ

ಇದಲ್ಲದೇ ಈ ಬಾರಿ ಅತಿಯಾದ ತಾಪಮಾನ ಇದ್ದ ಕಾರಣ 1 ತಿಂಗಳ ಕಾಲ ಮಾವಿನ ಮರಗಳಿಗೆ ವಾಟರ್ ಸ್ಪ್ರೇ ಮಾಡಿಸಿ ಮರ ಬಿಸಲಿಗೆ ಬಾಡದಂತೆ ಕಾಪಾಡಿಕೊಂಡಿದ್ದಾರೆ. ಇದರಿಂದ ಬಂಪರ್ ಫಸಲು ಬಂದಿದೆ. ಬರೋಬ್ಬರಿ 180 ರಿಂದ 200 ಟನ್ ಮಾವು ಇಳುವರಿ ಬಂದಿದ್ದು, ವ್ಯಾಪಾರಿ ಸಯ್ಯದ್ ಎಂಬುವವರು 75 ಲಕ್ಷ ರೂಪಾಯಿಗೆ ತೋಟ ಗುತ್ತಿಗೆ ಪಡೆದಿದ್ದಾರೆ. ಇನ್ನು ರೈತನ ತೋಟಕ್ಕೆ ಚಿಕಬಳ್ಳಾಪುರ ಸೇರಿದಂತೆ ರಾಜ್ಯ ತೋಟಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳು ಭೇಟಿ ನೀಡಿ ರೈತನ ಕಾಯಕಕ್ಕೆ ಮೆಚ್ಚುಗೆಗೆ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ