AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುತ್ತಿದ್ದ ಬಸ್​ನಿಂದ ಕೆಳಗೆ ಬಿದ್ದ ವಿದ್ಯಾರ್ಥಿನಿ; ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರು

ಕಾಂಗ್ರೆಸ್​ ನೀಡಿದ 5 ಗ್ಯಾರಂಟಿಗಳಲ್ಲೊಂದಾದ ಶಕ್ತಿ ಯೋಜನೆಯಡಿಯಲ್ಲಿ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣ ಕಲ್ಪಿಸಲಾಗಿದ್ದು, ಇದರಿಂದ ಶಾಲಾ ಕಾಲೇಜುಗಳಿಗೆ ಹೋಗಿ ಬರುವುದಕ್ಕೂ ವಿದ್ಯಾರ್ಥಿ(Student)ಗಳಿಗೆ ತೊಂದರೆಯಾಗುತ್ತಿದ್ದು, ಇದೀಗ ಚಲಿಸುತ್ತಿದ್ದ ಬಸ್​ನಿಂದ ವಿದ್ಯಾರ್ಥಿನಿಯೋರ್ವಳು ಕೆಳಗೆ ಬಿದ್ದ ಘಟನೆ ನಡೆದಿದೆ.

ಚಲಿಸುತ್ತಿದ್ದ ಬಸ್​ನಿಂದ ಕೆಳಗೆ ಬಿದ್ದ ವಿದ್ಯಾರ್ಥಿನಿ; ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರು
ವಿದ್ಯಾರ್ಥಿನಿ ಕೆಳಗಡೆ ಬೀಳುತ್ತಿರುವ ದೃಶ್ಯ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 04, 2023 | 2:14 PM

Share

ಚಿಕ್ಕಬಳ್ಳಾಪುರ: ಕಾಂಗ್ರೆಸ್​ ನೀಡಿದ 5 ಗ್ಯಾರಂಟಿಗಳಲ್ಲೊಂದಾದ ಶಕ್ತಿ ಯೋಜನೆಯಡಿಯಲ್ಲಿ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಲಾಗಿದೆ. ಇದರಿಂದ ಬಹುತೇಕ ಎಲ್ಲಾ ಬಸ್(Bus)​ಗಳು ಫುಲ್​ ಆಗುತ್ತಿದ್ದು, ಶಾಲಾ ಕಾಲೇಜುಗಳಿಗೆ ಹೋಗಿ ಬರುವುದಕ್ಕೂ ವಿದ್ಯಾರ್ಥಿ (Student) ಗಳಿಗೆ ತೊಂದರೆಯಾಗುತ್ತಿದೆ. ಪುಟ್​ಬೋಡ್​ ಮೇಲೆ ನಿಂತುಕೊಂಡು ಹೋಗಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಅದರಂತೆ ಇದೀಗ ಚಿಕ್ಕಬಳ್ಳಾಪುರ (Chikkaballapur) ತಾಲ್ಲೂಕಿನ ಜಾತವಾರದ ಹೊಸಹಳ್ಳಿ ಗೇಟ್ ಬಳಿ ಚಲಿಸುತ್ತಿದ್ದ ಸಾರಿಗೆ ಬಸ್​ನಿಂದ ವಿದ್ಯಾರ್ಥಿನಿಯೋರ್ವಳು ಕೆಳಗೆಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

ಸಾರಿಗೆ ಬಸ್​ನಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದ ವಿದ್ಯಾರ್ಥಿನಿ

ಹಾವೇರಿ: ಕಳೆದ ಜೂ.12 ನೇ ತಾರೀಖು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕುಸನೂರು ಗ್ರಾಮದಲ್ಲಿ ಸರ್ಕಾರಿ ಬಸ್​ನಿಂದ ಬಿದ್ದು ಪ್ರೌಢಶಾಲೆ ವಿದ್ಯಾರ್ಥಿನಿಯೋರ್ವಳು ಮೃತಪಟ್ಟಿದ್ದ ಘಟನೆ ನಡೆದಿತ್ತು. ಮಧು ಕುಂಬಾರ(14) ಮೃತ ವಿದ್ಯಾರ್ಥಿನಿ. ಮಧು ವಾಸನ ಗ್ರಾಮದಿಂದ ಕುಸನೂರು ಶಾಲೆಗೆ ಹೋಗಲು ಸರ್ಕಾರಿ ಬಸ್​ನ್ನು ಹತ್ತಿದ್ದಳು. ಈ ಬಸ್​ ಫುಲ್​ ರಶ್​ ಇದ್ದುದರಿಂದ ಬಾಗಿಲ ಬಳಿಯೇ ನಿಂತಿದ್ದಳು. ಆದ್ರೆ, ನಿಯಂತ್ರಣ ತಪ್ಪಿ ಬಸ್​ನಿಂದ ಬಿದ್ದು ಸಾವನ್ನಪ್ಪಿದ್ದಳು. ಇದೀಗ ಅದೃಷ್ಟವಶಾತ್​ ಮತ್ತೊಂದು ಅನಾಹುತ ತಪ್ಪಿದೆ. ಆದಷ್ಟು ಬೇಗ ಸರ್ಕಾರ ಈ ಕುರಿತು ಹೆಚ್ಚುವರಿ ಬಸ್​ಗಳ ವ್ಯವಸ್ಥೆ ಮಾಡಬೇಕಾಗಿದೆ.

ಇದನ್ನೂ ಓದಿ:ಸರ್ಕಾರಿ ಬಸ್​ನಿಂದ ಬಿದ್ದು ವಿದ್ಯಾರ್ಥಿನಿ ಸಾವು: ಮುಂಜಾಗ್ರತೆ ಕ್ರಮ ಕೈಗೊಳ್ಳಲುವಂತೆ ಕರಾರಸಾನಿ ಸೂಚನೆ

ಚಲಿಸುತ್ತಿದ್ದ ಸರ್ಕಾರಿ ಬಸ್​ನಿಂದ ಬಿದ್ದು ಸಾವನ್ನಪ್ಪಿದ್ದ ಪ್ರಯಾಣಿಕ

ಮಂಡ್ಯ: ಇನ್ನು ವಿದ್ಯಾರ್ಥಿಗಳು ಅಷ್ಟೇ ಅಲ್ಲದೇ ಪ್ರಯಾಣಿಕರು ಪ್ರಾಣ ಕಳೆದುಕೊಂಡಿದ್ದಾರೆ. ಹೌದು ಜಿಲ್ಲೆಯ ಪಾಂಡವಪುರ ತಾಲೂಕಿನ ಜಕ್ಕನಹಳ್ಳಿ ಬಳಿ , ಚಲುವೇಗೌಡ ಎಂಬಾತ ಬಸ್​ನಿಂದ ಬಿದ್ದು ಸಾವನ್ನಪ್ಪಿದ್ದ. ಬಸ್ ಪೂರ್ತಿ ತುಂಬಿದ್ದ ಕಾರಣ ಫುಟ್​​ಬೋರ್ಡ್​ನಲ್ಲಿ ನಿಂತಿದ್ದ. ಈ ವೇಳೆ ಆಯತಪ್ಪಿ ಬಿದ್ದು ಮೃತಪಟ್ಟಿದ್ದರು. ಜಕ್ಕನಹಳ್ಳಿ ಕಡೆಯಿಂದ ಮಂಡ್ಯ ಕಡೆಗೆ ಹೊರಟಿದ್ದಾಗ ಈ ಅವಘಡ ಸಂಭವಿಸಿತ್ತು.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?