ಚಿಕ್ಕಬಳ್ಳಾಪುರದಲ್ಲಿ ಕರಗ ಹೊತ್ತ ಮಹಿಳೆ; ಪಂಚ ರಾಜ್ಯಗಳ ಜನಪದ ಕಲೆಗಳ ಸಮಾಗಮ!

ಕೇವಲ ಪುರುಷರಿಗೆ ಮಾತ್ರ ಸೀಮಿತವಾಗಿದ್ದ ಕರಗ ಹೊರುವ ಪದ್ದತಿಯ ಬದಲಿಗೆ, ಇಲ್ಲೊಬ್ಬ ಮಹಿಳೆ ತಾನೂ ಯಾರಿಗೂ ಕಡಿಮೆ ಇಲ್ಲ ಎಂಬಂತೆ ದ್ರೌಪದಮ್ಮ ದೇವರ ಕರಗ ಹೊತ್ತು ರಾತ್ರಿಯಿಡಿ ನಗರ ಪ್ರದಕ್ಷಣೆ ಮಾಡಿದರೆ, ಇತ್ತ ಕರಗ ಮಹೋತ್ಸವ ಪ್ರಯುಕ್ತ ಐದು ರಾಜ್ಯಗಳ ಕೆಲ ಸಂಸ್ಕೃತಿ, ಸಂಪ್ರದಾಯ ಹಾಗೂ ಜನಪದ ನೃತ್ಯಗಳು ಜನರ ಮನಸೊರೆಗೊಂಡವು.

ಚಿಕ್ಕಬಳ್ಳಾಪುರದಲ್ಲಿ ಕರಗ ಹೊತ್ತ ಮಹಿಳೆ; ಪಂಚ ರಾಜ್ಯಗಳ ಜನಪದ ಕಲೆಗಳ ಸಮಾಗಮ!
ಚಿಕ್ಕಬಳ್ಳಾಪುರದಲ್ಲಿ ಕರಗ ಹೊತ್ತ ಮಹಿಳೆ;
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:May 26, 2024 | 3:02 PM

ಚಿಕ್ಕಬಳ್ಳಾಪುರ, ಮೇ.26: ಬೆಂಗಳೂರು ಕರಗ(Karaga) ಸೇರಿದಂತೆ ದಕ್ಷಿಣ ಕರ್ನಾಟಕ ಭಾಗದಲ್ಲಿಯೂ ಕರಗ ಉತ್ಸವ ತನ್ನದೇ ಆದ ಮಹತ್ವ ಹೊಂದಿದೆ. ಎಲ್ಲೆಡೆ ಸಾಮಾನ್ಯವಾಗಿ ಪುರುಷರು ಕರಗ ಹೊರುವುದು ವಾಡಿಕೆ. ಆದ್ರೆ, ಚಿಕ್ಕಬಳ್ಳಾಪುರ (Chikkaballapura) ನಗರದ ಬಾಪೂಜಿನಗರದ ಮಹೇಶ್ವರಮ್ಮ ದೇವಾಲಯದಲ್ಲಿ ಏರ್ಪಡಿಸಿದ್ದ ದ್ರೌಪದಮ್ಮ ಕರಗ ಉತ್ಸವದಲ್ಲಿ, ತಮಿಳುನಾಡಿನ ಪುಟ್ಟಮ್ಮ ಎನ್ನುವ ಮಹಿಳೆ ಕರಗ ಹೊತ್ತು ಅಚ್ಚರಿ ಮೂಡಿಸಿದ್ಡಾರೆ.

ತಮಿಳುನಾಡಿನ ಹೊಸೂರು ತಾಲೂಕಿನ ಕೆಲಮಂಗಲದ ಗ್ರಾಮದ ಪುಟ್ಟಮ್ಮ, ಕಳೆದ 35 ವರ್ಷಗಳಿಂದ ಇಲ್ಲಿನ ಕರಗವನ್ನು ಹೊರುತ್ತಿದ್ದಾರೆ. ದ್ರೌಪದಮ್ಮ ಹೂವಿನ ಕರಗ ಹೊತ್ತ ಪುಟ್ಟಮ್ಮ, ಚಿಕ್ಕಬಳ್ಳಾಪುರ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ನಂತರ ವೇದಿಕೆ ಕಾರ್ಯಕ್ರಮದಲ್ಲಿ ತಮಟೆ ಸದ್ದಿಗೆ ಹೆಜ್ಜೆ ಹಾಕಿ ಜನರಲ್ಲಿ ಭಕ್ತಿಯ ಬೀಜ ಬಿತ್ತಿದರು.

ಇದನ್ನೂ ಓದಿ:ವಿಜೃಂಭಣೆಯಿಂದ ನಡೆದ ಆನೇಕಲ್ ಕರಗ ಮಹೋತ್ಸವ; ನಾದಸ್ವರದ ವಾದ್ಯಕ್ಕೆ ತಕ್ಕ ಹೆಜ್ಜೆ ಹಾಕಿದ ಕರಗ ಹೊತ್ತ ಪೂಜಾರಿ

1961ರಲ್ಲಿ ನಗರದಲ್ಲಿ ನಡೆಯುತ್ತಿದ್ದ ಬೇರೂಂದು ಕರಗ ಉತ್ಸವ, ಕರಗ ದಲಿತರು ವಾಸಿಸೋ ಚಿಕ್ಕಬಳ್ಳಾಪುರ ನಗರದ ಬಾಪುಜಿನಗರ ಪ್ರದೇಶಿಸದ ಹಿನ್ನೆಲೆ, ಮನನೊಂದು ಪ್ರತಿಷ್ಟೆಯಾಗಿ ತೆಗೆದುಕೊಂಡ ಅಂದಿನ ಶಾಸಕ ದಿವಂಗತ ಎ.ಮುನಿಯಪ್ಪ, ಮಹೇಶ್ವರಿ ದೇವಸ್ಥಾನದಲ್ಲಿ ದ್ರೌಪದಮ್ಮ ಕರಗ ಮಹೋತ್ಸವ ಪ್ರಾರಂಭಿಸಿದರು. ಅಂದಿನಿಂದ ಇಂದಿನವರೆಗೆ ತಮಿಳುನಾಡಿನ ಪುಟ್ಟಮ್ಮಳೇ ಕರಗ ಹೊರುತ್ತಿದ್ದಾಳೆ. ಕರಗದ ಜೊತೆ ಜೊತೆಗೆ ಆಂಧ್ರ, ತಮಿಳುನಾಡು, ಕೇರಳ, ತೆಲಂಗಾಣ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳ ಕಲಾ ತಂಡಗಳು ಆಗಮಿಸಿ ಕರಗ ಮಹೋತ್ಸವ ಪ್ರಯುಕ್ತ ವೇದಿಕೆಯಲ್ಲಿ ಆಕರ್ಷಕ ನೃತ್ಯಗಳ ಪ್ರದರ್ಶನ ಮಾಡಿದರು.

ಸಾಮಾನ್ಯವಾಗಿ ಕರಗವನ್ನು ಪುರುಷರು, ಸ್ತ್ರೀ ವೇಷಧಾರಿಗಳಾಗಿ ಹೊರುತ್ತಾರೆ. ಆದರೆ, ಚಿಕ್ಕಬಳ್ಳಾಪುರದಲ್ಲಿ ದ್ರೌಪದಮ್ಮ ಕರಗವನ್ನು ಮಹಿಳೆ ಹೊತ್ತು ಸಾಮಾನ್ಯ ಸಂಪ್ರದಾಯಗಳಿಗೆ ಬ್ರೇಕ್ ಹಾಕಿದೆ. ಇನ್ನು ಚಿಕ್ಕಬಳ್ಳಾಪುರದಲ್ಲಿ ನಡೆದ ಕರಗ ಉತ್ಸವ ರಾಜ್ಯದಲ್ಲೇ ಏಕೈಕ ಮಹಿಳಾ ಕರಗ ಅಂತಲೇ ಪ್ರಖ್ಯಾತಿ ಪಡೆದಿದೆ. ಮತ್ತೊಂದೆಡೆ ವಿವಿಧ ರಾಜ್ಯಗಳ ಕಲಾವಿದರು ಆಗಮಿಸಿ ತಮ್ಮ ಪ್ರತಿಭೆ ಪ್ರದರ್ಶನ ಮಾಡಿದ್ದು, ಜನರ ನಿದ್ದೆ ದೂರ ಮಾಡುವಂತಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:59 pm, Sun, 26 May 24

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು