AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಸುತ್ತಿದ್ದ ಮಾವನ ಮಗಳ ಜೊತೆ ಮದ್ವೆಗೆ ನಕಾರ: ಯುವಕ ಆತ್ಮಹತ್ಯೆ!

ಇಬ್ಬರು ಪರಸ್ಪರ ಸಂಬಂಧಿಗಳು. ಆತನಿಗೆ 27 ವರ್ಷ ವಯಸ್ಸು, ಆಕೆ ಇನ್ನೂ ಅಪ್ರಾಪ್ತ ಬಾಲಕಿ. ಆದರೆ, ಪ್ರೀತಿ ಪ್ರೇಮಕ್ಕೆ ವಯಸ್ಸು ಅಡ್ಡಿಯಾಗಿರಲಿಲ್ಲ, ಆತನಿಗೆ ಆಕೆ ಸೋದರ ಮಾವನ ಮಗಳು. ಇದರಿಂದ ಆಕೆಯನ್ನೆ ಮದುವೆಯಾಗಬೇಕೆಂದು ಕನಸ್ಸು ಕಂಡಿದ್ದ. ಇನ್ನು ನಿನ್ನೆ ಆಕೆಯ ಬರ್ತ್​ಡೇ ಬೇರೆ ಇತ್ತು. ರಾತ್ರಿವರೆಗೂ ಆಕೆಯ ಮನೆಯಲ್ಲೇ ಇದ್ದು ಬರ್ತ್​ಡೇ ಮಾಡಿದ್ದ. ಕೊನೆಗೆ ತಡರಾತ್ರಿ ತನ್ನದೆ ಮನೆಯಲ್ಲಿ ಸಾವಿನ ಮನೆ ಸೇರಿದ್ದಾನೆ. ಅಷ್ಟಕ್ಕೂ ಅಲ್ಲಿ ಆಗಿದ್ದೇನು? ವರದಿ ಇಲ್ಲಿದೆ.

ಪ್ರೀತಿಸುತ್ತಿದ್ದ  ಮಾವನ ಮಗಳ ಜೊತೆ ಮದ್ವೆಗೆ ನಕಾರ: ಯುವಕ ಆತ್ಮಹತ್ಯೆ!
Manjunath
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ರಮೇಶ್ ಬಿ. ಜವಳಗೇರಾ|

Updated on: May 24, 2025 | 5:00 PM

Share

ಚಿಕ್ಕಬಳ್ಳಾಪುರ, (ಮೇ 24): ಸೋದರ ಮಾವನ ಮಗಳ ಜೊತೆ ಮದುವೆಗೆ ನಿರಾಕರಿಸಿದ ಹಿನ್ನೆಲೆಯಲ್ಲಿ ಸಂಬಂಧಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ಅಜ್ಜವಾರ ಗ್ರಾಮದಲ್ಲಿ ನಡೆದಿದೆ. ಮಂಜುನಾಥ್(27) ಆತ್ಮಹತ್ಯೆ ಮಾಡಿಕೊಂಡ ಯುವಕ. ಮಂಜುನಾಥ್​, ಅಪ್ರಾಪ್ತೆಯಾಗಿದ್ದ ಸೋದರ ಮಾವನ ಮಗಳನ್ನು ಪ್ರೀತಿಸುತ್ತಿದ್ದ. ಅಷ್ಟೇ ಅಲ್ಲ ಆಕೆಯನ್ನು ಮದುವೆಯಾಗಬೇಕೆಂದು ಕನಸು ಕಂಡಿದ್ದ. ಆದ್ರೆ, ಇದಕ್ಕೆ ಹುಡುಗಿ ತಂದೆ(ಮಂಜುನಾಥ್​ನ ಮಾವ) ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮನನೊಂದು ಮಂಜುನಾಥ್​ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಅಜ್ಜವಾರ ಗ್ರಾಮದ 27 ವರ್ಷದ ಮಂಜುನಾಥ್ ನೇಣಿಗೆ ಶರಣಾದ ದುರ್ದೈವಿ. ಅಂದಹಾಗೆ ಮಂಜುನಾಥ್ ಶಿಡ್ಲಘಟ್ಟ ತಾಲೂಕಿನ ಸೋದರ ಮಾವನ ಅಪ್ರಾಪ್ತ ಮಗಳನ್ನ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದ. ನಿನ್ನೆ ಬಾಲಕಿಯ ಹುಟ್ಟು ಹಬ್ಬದ ಇದ್ದಿದ್ದರಿಂದ ಮಂಜುನಾಥ್ ಆಕೆಯ ಮನೆಗೆ ಹೋಗಿ ವಿಶ್ ಮಾಡಿದ್ದ. ಆದ್ರೆ, ಆ ವೇಳೇ ಅದೇನಾಯ್ತೋ ಏನೋ ಮಂಜುನಾಥ್ ಅಲ್ಲಿಂದ ವಾಪಸ್ ಮನೆಗೆ ಬಂದವನೇ ನೇಣುಬಿಗುದಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ: ಕರಿಮಣಿ ಮಾಲೀಕ ನೀನಲ್ಲ.. ವರನ ಬಿಟ್ಟು ಪ್ರಿಯಕರನೊಂದಿಗೆ ತಾಳಿ ಕಟ್ಟಿಸಿಕೊಂಡ ವಧು

ಮಂಜುನಾಥ್ ಮೂರು ತಿಂಗಳು ಇದ್ದಾಗಲೇ ತಾಯಿ ನಾರಾಯಣಮ್ಮ ಮೃತಪಟ್ಟಿದ್ದರು. ಇದರಿಂದ ನಾರಾಯಣ ತವರು ಮನೆಯವರು, ಅಜ್ಜವಾರದ ಜಯಮ್ಮ ಎನ್ನುವವರು ಮಂಜುನಾಥ್​ನನ್ನು ಸಾಕಿದ್ದರು. ಇನ್ನೂ ಮಂಜುನಾಥ್, ಮೇ 20 ರಂದು ಭರ್ಜರಿಯಾಗಿ ತನ್ನ ಬರ್ತ್​ಡೇ ಮಾಡಿಕೊಂಡಿದ್ದ. ಇದಾಗಿ  ನಾಲ್ಕು ದಿನದಲ್ಲೇ ದುರಂತ ಸಾವು ಕಂಡಿದ್ದಾನೆ.

ಇದನ್ನೂ ಓದಿ
Image
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
Image
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
Image
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
Image
ಧರ್ಮ, ದೇಶದ ಗಡಿ ಮೀರಿದ 'ಪ್ರೇಮ' ವಿವಾಹ: ಚಿತ್ರದುರ್ಗದ ಸೊಸೆಯಾದ US ಸುಂದರಿ

ಮಂಜುನಾಥ್ ಸೋದರ ಮಾವ ಶಿಡ್ಲಘಟ್ಟದಲ್ಲಿ ಇದ್ದು, ಆತನ ಅಪ್ರಾಪ್ತ ಮಗಳನ್ನು ಮಂಜುನಾಥ್ ಪ್ರೀತಿಸುತ್ತಿದ್ದ. ಆದ್ರೆ, ಮಾವ ತೀವ್ರ ವಿರೋಧ ವ್ಯಕ್ತಪಡಿಸಿದ್ದರಿಂದ ಮಂಜುನಾಥ್ ಸಾವಿನ ಹಾದಿ ಹಿಡಿದ್ದಾನೆ ಎಂದು ತಿಳಿದುಬಂದಿದೆ. ಮಾವನ ಮಗಳಿಗೆ ಇನ್ನೂ ಮದುವೆ ವಯಸ್ಸು ಆಗಿಲ್ಲ. ಮತ್ತೊಂದೆಡೆ ಮಂಜುನಾಥ್ ಗೆ ಮದುವೆ ಮಾಡುವ ವಯಸ್ಸು. ಹೀಗಾಗಿ ಬೇರೆ ಹುಡುಗಿಯನ್ನು ನೋಡಿ ಮದುವೆ ಮಾಡುತ್ತೇವೆಂದು ಮಾವನ ಮನೆ ಕಡೆಯವರು ಹೇಳಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಈ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ