AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಸುತ್ತಿದ್ದ ಮಾವನ ಮಗಳ ಜೊತೆ ಮದ್ವೆಗೆ ನಕಾರ: ಯುವಕ ಆತ್ಮಹತ್ಯೆ!

ಇಬ್ಬರು ಪರಸ್ಪರ ಸಂಬಂಧಿಗಳು. ಆತನಿಗೆ 27 ವರ್ಷ ವಯಸ್ಸು, ಆಕೆ ಇನ್ನೂ ಅಪ್ರಾಪ್ತ ಬಾಲಕಿ. ಆದರೆ, ಪ್ರೀತಿ ಪ್ರೇಮಕ್ಕೆ ವಯಸ್ಸು ಅಡ್ಡಿಯಾಗಿರಲಿಲ್ಲ, ಆತನಿಗೆ ಆಕೆ ಸೋದರ ಮಾವನ ಮಗಳು. ಇದರಿಂದ ಆಕೆಯನ್ನೆ ಮದುವೆಯಾಗಬೇಕೆಂದು ಕನಸ್ಸು ಕಂಡಿದ್ದ. ಇನ್ನು ನಿನ್ನೆ ಆಕೆಯ ಬರ್ತ್​ಡೇ ಬೇರೆ ಇತ್ತು. ರಾತ್ರಿವರೆಗೂ ಆಕೆಯ ಮನೆಯಲ್ಲೇ ಇದ್ದು ಬರ್ತ್​ಡೇ ಮಾಡಿದ್ದ. ಕೊನೆಗೆ ತಡರಾತ್ರಿ ತನ್ನದೆ ಮನೆಯಲ್ಲಿ ಸಾವಿನ ಮನೆ ಸೇರಿದ್ದಾನೆ. ಅಷ್ಟಕ್ಕೂ ಅಲ್ಲಿ ಆಗಿದ್ದೇನು? ವರದಿ ಇಲ್ಲಿದೆ.

ಪ್ರೀತಿಸುತ್ತಿದ್ದ  ಮಾವನ ಮಗಳ ಜೊತೆ ಮದ್ವೆಗೆ ನಕಾರ: ಯುವಕ ಆತ್ಮಹತ್ಯೆ!
Manjunath
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: May 24, 2025 | 5:00 PM

Share

ಚಿಕ್ಕಬಳ್ಳಾಪುರ, (ಮೇ 24): ಸೋದರ ಮಾವನ ಮಗಳ ಜೊತೆ ಮದುವೆಗೆ ನಿರಾಕರಿಸಿದ ಹಿನ್ನೆಲೆಯಲ್ಲಿ ಸಂಬಂಧಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ಅಜ್ಜವಾರ ಗ್ರಾಮದಲ್ಲಿ ನಡೆದಿದೆ. ಮಂಜುನಾಥ್(27) ಆತ್ಮಹತ್ಯೆ ಮಾಡಿಕೊಂಡ ಯುವಕ. ಮಂಜುನಾಥ್​, ಅಪ್ರಾಪ್ತೆಯಾಗಿದ್ದ ಸೋದರ ಮಾವನ ಮಗಳನ್ನು ಪ್ರೀತಿಸುತ್ತಿದ್ದ. ಅಷ್ಟೇ ಅಲ್ಲ ಆಕೆಯನ್ನು ಮದುವೆಯಾಗಬೇಕೆಂದು ಕನಸು ಕಂಡಿದ್ದ. ಆದ್ರೆ, ಇದಕ್ಕೆ ಹುಡುಗಿ ತಂದೆ(ಮಂಜುನಾಥ್​ನ ಮಾವ) ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮನನೊಂದು ಮಂಜುನಾಥ್​ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಅಜ್ಜವಾರ ಗ್ರಾಮದ 27 ವರ್ಷದ ಮಂಜುನಾಥ್ ನೇಣಿಗೆ ಶರಣಾದ ದುರ್ದೈವಿ. ಅಂದಹಾಗೆ ಮಂಜುನಾಥ್ ಶಿಡ್ಲಘಟ್ಟ ತಾಲೂಕಿನ ಸೋದರ ಮಾವನ ಅಪ್ರಾಪ್ತ ಮಗಳನ್ನ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದ. ನಿನ್ನೆ ಬಾಲಕಿಯ ಹುಟ್ಟು ಹಬ್ಬದ ಇದ್ದಿದ್ದರಿಂದ ಮಂಜುನಾಥ್ ಆಕೆಯ ಮನೆಗೆ ಹೋಗಿ ವಿಶ್ ಮಾಡಿದ್ದ. ಆದ್ರೆ, ಆ ವೇಳೇ ಅದೇನಾಯ್ತೋ ಏನೋ ಮಂಜುನಾಥ್ ಅಲ್ಲಿಂದ ವಾಪಸ್ ಮನೆಗೆ ಬಂದವನೇ ನೇಣುಬಿಗುದಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ: ಕರಿಮಣಿ ಮಾಲೀಕ ನೀನಲ್ಲ.. ವರನ ಬಿಟ್ಟು ಪ್ರಿಯಕರನೊಂದಿಗೆ ತಾಳಿ ಕಟ್ಟಿಸಿಕೊಂಡ ವಧು

ಮಂಜುನಾಥ್ ಮೂರು ತಿಂಗಳು ಇದ್ದಾಗಲೇ ತಾಯಿ ನಾರಾಯಣಮ್ಮ ಮೃತಪಟ್ಟಿದ್ದರು. ಇದರಿಂದ ನಾರಾಯಣ ತವರು ಮನೆಯವರು, ಅಜ್ಜವಾರದ ಜಯಮ್ಮ ಎನ್ನುವವರು ಮಂಜುನಾಥ್​ನನ್ನು ಸಾಕಿದ್ದರು. ಇನ್ನೂ ಮಂಜುನಾಥ್, ಮೇ 20 ರಂದು ಭರ್ಜರಿಯಾಗಿ ತನ್ನ ಬರ್ತ್​ಡೇ ಮಾಡಿಕೊಂಡಿದ್ದ. ಇದಾಗಿ  ನಾಲ್ಕು ದಿನದಲ್ಲೇ ದುರಂತ ಸಾವು ಕಂಡಿದ್ದಾನೆ.

ಇದನ್ನೂ ಓದಿ
Image
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
Image
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
Image
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
Image
ಧರ್ಮ, ದೇಶದ ಗಡಿ ಮೀರಿದ 'ಪ್ರೇಮ' ವಿವಾಹ: ಚಿತ್ರದುರ್ಗದ ಸೊಸೆಯಾದ US ಸುಂದರಿ

ಮಂಜುನಾಥ್ ಸೋದರ ಮಾವ ಶಿಡ್ಲಘಟ್ಟದಲ್ಲಿ ಇದ್ದು, ಆತನ ಅಪ್ರಾಪ್ತ ಮಗಳನ್ನು ಮಂಜುನಾಥ್ ಪ್ರೀತಿಸುತ್ತಿದ್ದ. ಆದ್ರೆ, ಮಾವ ತೀವ್ರ ವಿರೋಧ ವ್ಯಕ್ತಪಡಿಸಿದ್ದರಿಂದ ಮಂಜುನಾಥ್ ಸಾವಿನ ಹಾದಿ ಹಿಡಿದ್ದಾನೆ ಎಂದು ತಿಳಿದುಬಂದಿದೆ. ಮಾವನ ಮಗಳಿಗೆ ಇನ್ನೂ ಮದುವೆ ವಯಸ್ಸು ಆಗಿಲ್ಲ. ಮತ್ತೊಂದೆಡೆ ಮಂಜುನಾಥ್ ಗೆ ಮದುವೆ ಮಾಡುವ ವಯಸ್ಸು. ಹೀಗಾಗಿ ಬೇರೆ ಹುಡುಗಿಯನ್ನು ನೋಡಿ ಮದುವೆ ಮಾಡುತ್ತೇವೆಂದು ಮಾವನ ಮನೆ ಕಡೆಯವರು ಹೇಳಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಈ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Follow Us
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು