AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಲಂಚ ಪಡೆಯುವಾಗ ಎಸಿಬಿ ದಾಳಿ; ಬೆಸ್ಕಾಂ ಅಧಿಕಾರಿಯ ಬಂಧನ

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಬೆಸ್ಕಾಂ ಉಪ ವಿಭಾಗದ ಮೇಲೆ ಚಿಕ್ಕಬಳ್ಳಾಪುರ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಸಹಾಯಕ ಇಂಜಿನಿಯರ್ ಶ್ರೀನಿವಾಸ ಅವರನ್ನು ಬಂಧಿಸಿದ್ದಾರೆ.

ಚಿಕ್ಕಬಳ್ಳಾಪುರ: ಲಂಚ ಪಡೆಯುವಾಗ ಎಸಿಬಿ ದಾಳಿ; ಬೆಸ್ಕಾಂ ಅಧಿಕಾರಿಯ ಬಂಧನ
ಬೆವಿಕಂ
Follow us
TV9 Web
| Updated By: ವಿವೇಕ ಬಿರಾದಾರ

Updated on:Jul 27, 2022 | 10:33 PM

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಬೆಸ್ಕಾಂ ಉಪ ವಿಭಾಗದ ಮೇಲೆ ಚಿಕ್ಕಬಳ್ಳಾಪುರ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಸಹಾಯಕ ಇಂಜಿನಿಯರ್ ಶ್ರೀನಿವಾಸ ಅವರನ್ನು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಅಂಕತಟ್ಟಿ ಗ್ರಾಮದ ರೈತನ ಟ್ರಾಸ್ ಪಾರ್ಮರ್ ಸುಟ್ಟಿರುತ್ತೆ, ಸರಿ ಮಾಡಲು ಅರ್ಜಿ ನೀಡಿದಾಗ ಬೆಸ್ಕಾಂ ಎಇ ಶ್ರೀನಿವಾಸ್ ಲಂಚ   ಕೇಳಿರುತ್ತಾರೆ.

ರೈತ ಅಕ್ರಮವಾಗಿ ಕೃಷಿ ಹೋಡಕ್ಕೆ ಸಂಪರ್ಕ ಪಡೆದಿದ್ದೀರೆಂದು ಸುಮಾರು 89 ಸಾವಿರ ರೂಪಾಯಿಗಳು ದಂಡ ಹಾಕಿ ಅಂಕತಟ್ಟಿ ಗ್ರಾಮದ ರೈತನಿಗೆ ಎ ಇ ಶ್ರೀನಿವಾಸ್ ನೋಟೀಸ್ ನೀಡುತ್ತಾರೆ. ರೈತ ದಂಡ ಪ್ರಶ್ನಿಸಿದ್ದಕ್ಕೆ ಸುಟ್ಟಿರುವ ಟಾನ್ಸ್ ಪಾರ್ಮರ್ ರಿಪೇರಿ ಮಾಡಿಸಿ ಕೊಡುತ್ತೇನೆ ಜೊತೆಗೆ ಹಾಕಿರುವ ದಂಡವನ್ನು ವಜಾ ಮಾಡುತ್ತೇನೆ ಅಂತ 30 ಸಾವಿರ ರೂಪಾಯಿ ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದರು.  ಅದ್ರಲ್ಲಿ 25 ಸಾವಿರಕ್ಕೆ ತೀರ್ಮಾನಿಸಿ 5 ಸಾವಿರ ರೂಪಾಯಿಗಳು ಅಡ್ವಾನ್ಸ್ ಪಡೆದಿದ್ದರು.

ಉಳಿದ 20 ಸಾವಿರ ರೂಪಾಯಿ ಲಂಚ ಪಡೆಯುವಾಗ ಬೆಸ್ಕಾಂ ಇಲಾಖೆಯ ಎ ಇ ಶ್ರೀನಿವಾಸ್​​ನನ್ನು ಎ.ಸಿ.ಬಿ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಟ್ರ್ಯಾಪ್ ಮಾಡಿದ್ದಾರೆ‌.

ಫಸಲ್ ಬಿಮಾ ಯೋಜನೆಯ ಬೆಳೆ ವಿಮೆ ನೀಡಲು ರೈತರ ಆಗ್ರಹ

ಚಿತ್ರದುರ್ಗ: ಫಸಲ್ ಬಿಮಾ ಯೋಜನೆಯ ಬೆಳೆ ವಿಮೆ ನೀಡಲು ರೈತರ ಆಗ್ರಹಿಸುತ್ತಿದ್ದು, ಕೃಷಿ ಇಲಾಖೆ ಕಚೇರಿಗೆ ಬೀಗ ಜಡಿದು ರೈತರು ಪ್ರತಿಭಟನೆ ಮಾಡಿದ್ದಾರೆ. ರೈತಪರ ಸಂಘಟನೆಗಳ ನೇತೃತ್ವದಲ್ಲಿ ಕೃಷಿ ಇಲಾಖೆ ಕಚೇರಿಯಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಮಾಡಿದ್ದಾರೆ.

ಕೃಷಿ‌ ಅಧಿಕಾರಿಗಳು ಬೆಳೆ ವಿಮೆ ವಂಚನೆಯಲ್ಲಿ ಭಾಗಿಯಾಗಿರುವ ಆರೋಪ ಕೇಳಿ ಬಂದಿದೆ. ವಿಮೆ ಕಂಪನಿಗಳ ಜೊತೆ ಸೇರಿ ಬೆಳೆ ವಿಮೆ ನೀಡದೆ ವಂಚನೆ ಮಾಡಿರುವ ಆರೋಪ ಕೇಳಿ ಬರುತ್ತಿದೆ. ಕೃಷಿ ಇಲಾಖೆ ಜಂಟಿ ನಿರ್ದೇಶಕ ರಮೇಶ್ ಅವರಿಗೆ ರೈತರು ತರಾಟೆಗೆ ತೆಗೆದುಕೊಂಡಿದ್ದಾರೆ. ಪೊಲೀಸರು, ಕೃಷಿ ಅಧಿಕಾರಿಗಳ ಜತೆ ರೈತರ ವಾಗ್ವಾದ ನಡೆಸಿದ್ದಾರೆ. ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಅವರಿಗೆ ಮನವಿ ಪತ್ರ ಸಲ್ಲಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Published On - 9:24 pm, Wed, 27 July 22

ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್