AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಪೊಲೀಸರ ಹೆಸರಿನಲ್ಲಿ ನಕಲಿ ರೈಡ್ ಮಾಡಿ ದರೋಡೆ ಮಾಡಿದ್ದ ಆರೋಪಿಗಳು ಅರೆಸ್ಟ್

2 ಸಾವಿರ ಮುಖಬೆಲೆಯ ನೋಟುಗಳನ್ನು ಬದಲಾಯಿಸುವುದಾಗಿ ಹೇಳಿ ನಂಬಿಸಿ ವಂಚಕರು ಅಮಾಯಕರನ್ನು ಕರೆದಿದ್ದರು. ಅದರಂತೆ ಕಂತೆ ಕಂತೆ ಹಣ ತಂದಿರುವುದನ್ನು ನೋಡಿದ ಕೂಡಲೇ ತಾನು ಪೊಲೀಸರು ಎಂದು ಹೇಳಿ ನಕಲಿ ರೈಡ್ ಮಾಡಿ ಹಣ ದೋಚಿ ಪರಾರಿಯಾಗಿದ್ದರು. ಈ ಪ್ರಕರಣ ಚಿಕ್ಕಬಳ್ಳಾಪುರದಲ್ಲಿ ನಡೆದಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಬಳ್ಳಾಪುರ: ಪೊಲೀಸರ ಹೆಸರಿನಲ್ಲಿ ನಕಲಿ ರೈಡ್ ಮಾಡಿ ದರೋಡೆ ಮಾಡಿದ್ದ ಆರೋಪಿಗಳು ಅರೆಸ್ಟ್
ಪೊಲೀಸರ ಹೆಸರಿನಲ್ಲಿ ನಕಲಿ ರೈಡ್ ಮಾಡಿ ದರೋಡೆ ಮಾಡಿದ್ದ ಆರೋಪಿಗಳನ್ನು ಬಂಧಿಸಿದ ಚಿಕ್ಕಬಳ್ಳಾಪುರ ಪೊಲೀಸರು
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: Rakesh Nayak Manchi|

Updated on: Sep 22, 2023 | 8:31 PM

Share

ಚಿಕ್ಕಬಳ್ಳಾಪುರ, ಸೆ.22: ಎರಡು ಸಾವಿರ ಮುಖಬೆಲೆಯ ನೋಟುಗಳನ್ನು ಬದಲಾಯಿಸುವುದಾಗಿ ಹೇಳಿ ನಂಬಿಸಿ ವಂಚಕರು ಅಮಾಯಕರನ್ನು ಕರೆದಿದ್ದರು. ಅದರಂತೆ ಕಂತೆ ಕಂತೆ ಹಣ ತಂದಿರುವುದನ್ನು ನೋಡಿದ ಕೂಡಲೇ ತಾನು ಪೊಲೀಸರು ಎಂದು ಹೇಳಿ ನಕಲಿ ರೈಡ್ ಮಾಡಿ ಹಣ ದೋಚಿ ಪರಾರಿಯಾಗಿದ್ದರು. ಈ ಪ್ರಕರಣ ಚಿಕ್ಕಬಳ್ಳಾಪುರದಲ್ಲಿ (Chikkaballapura) ನಡೆದಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

10 ಲಕ್ಷ ಐನೂರು ರೂಪಾಯಿ ನೋಟುಗಳನ್ನು ನೀಡಿದರೆ ಹನ್ನೇರಡೂವರೆ ಲಕ್ಷ ರೂಪಾಯಿ ಎರಡು ಸಾವಿರ ರೂಪಾಯಿ ಮುಖ ಬೆಲೆಯ ನೋಟುಗಳನ್ನು ನೀಡುವುದಾಗಿ ಆಂಧ್ರದ ಚೆಲ್ಲಾ ನಾರಾಯಣ ಅಲಿಯಾಸ್ ಕೃಷ್ಣನಾರಾಯಣ ಅನ್ನೊ ನಟೋರಿಸ್ ಕ್ರೀಮಿನಲ್, ತಾನು ಚಿಕ್ಕಬಳ್ಳಾಪುರದವನು, ತಮ್ಮ ಬಳಿ ರಾಜಕಾರಣಿಯೊಬ್ಬರಿಗೆ ಸೇರಿದ ಎರಡು ಸಾವಿರ ರೂಪಾಯಿ ಮುಖ ಬೆಲೆಯ ನೋಟುಗಳು ಇವೆ ಅಂತ ಆಂಧ್ರದ ಸೌಜನ್ಯ ಹಾಗೂ ಆಕೆಯ ಸಂಬಂಧಿಗಳನ್ನು ನಂಬಿಸಿ ಚಿಕ್ಕಬಳ್ಳಾಪುರಕ್ಕೆ ಕರೆಸಿದ್ದಾನೆ.

ಸೌಜನ್ಯ ಹಾಗೂ ಆಕೆಯ ತಂಡ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಂತೆ ಆರೋಪಿ ತನ್ನ ಸಹಚರರ ಜೊತೆ ಅವರ ಮೇಲೆ ದಾಳಿ ಮಾಡಿದ್ದಾನೆ. ತಾವು ಪೊಲೀಸರು ಅಂತ ಹಲ್ಲೆ ನಡೆಸಿ ಸೌಜನ್ಯ ಬಳಿ ಇದ್ದ 6 ಲಕ್ಷ ರೂಪಾಯಿ ನಗದು ಹಣವನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಘಟನೆಯಿಂದ ಭಯ ಬೀತರಾಗಿದ್ದ ಸೌಜನ್ಯ ನೈಜ ಘಟನೆಯನ್ನು ಮರೆ ಮಾಚಿ ಬಟ್ಟೆ ವ್ಯಾಪಾರಕ್ಕೆ ಬಂದಿದ್ದಾಗ ದರೋಡೆ ಅಂತ ನಂದಿಗಿರಿಧಾಮ ಠಾಣೆ ಪೊಲೀಸರಿಗೆ ದೂರು ನೀಡಿದ್ದಳು.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಸಿನಿಮೀಯ ಶೈಲಿಯಲ್ಲಿ ಕೊಲೆಗೆ ಯತ್ನ: ಅದೃಷ್ಟವಶಾತ್​ ಪಾರಾದ ಇಬ್ಬರು ಯುವಕರು, ಬಂಧನ

ದೂರು ದಾಖಲು ಮಾಡಿಕೊಂಡಿದ್ದ ಪೊಲೀಸರು ಈಗ ನಾಲ್ಕು ಜನ ನಟೋರಿಯಸ್ ಕ್ರೀಮಿನಲ್​ಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ದಿಢೀರ್ ಹಣ ಮಾಡುವ ಆಶೆಗೆ ಬಿದ್ದ ಆಂಧ್ರ ಮೂಲದ ಬಡ ಸೌಜನ್ಯ ತನ್ನ ಆಕೆಯ ಅಕ್ಕ ತಂಗಿ ಬಂಧು ಬಳಗದ ಬಳಿ ಸಾಲ ಶೂಲ ಮಾಡಿ ಹಣ ಹೊಂದಿಸಿಕೊಂಡು ಚಿಕ್ಕಬಳ್ಳಾಪುರಕ್ಕೆ ಬಂದಿದ್ದಳು.

ಆಗ ಚೆಲ್ಲಾ ನಾರಾಯಣ ಅಲಿಯಾಸ್ ಕೃಷ್ಣನಾರಾಯಣ, ತನ್ನ ಸಹಚರರಾದ ಜಯರಾಮ್, ರಜನಿಕಾಂತ್, ಹರೀಶ, ಸಂದೀಪ್ ರನ್ನು ಬಿಟ್ಟು ಪೊಲೀಸರ ಹೆಸರಿನಲ್ಲಿ ನಕಲಿ ರೈಡ್ ಮಾಡಿಸಿದ್ದ. ಆದರೆ ಚಿಕ್ಕಬಳ್ಳಾಪುರದ ಅಸಲಿ ಪೊಲೀಸರು ಈಗ ಆರೋಪಿಗಳನ್ನು ಬಂಧಿಸಿ ಅವರಿಂದ ಹಣ ಜಪ್ತಿ ಮಾಡಿದ್ದಾರೆ. ಇದರಿಂದ ನೊಂದ ಮಹಿಳೆ ಪೊಲೀಸರಿಗೆ ಕೃತಜ್ಞತೆ ಸಲ್ಲಿಸಿದ್ದಾಳೆ.

ಒಟ್ಟಾರೆ ಅದ್ಯಾಕೊ ಆಂಧ್ರ ಕರ್ನಾಟಕ ಜನ, ಚಿಕ್ಕಬಳ್ಳಾಪುರದಲ್ಲಿ ರಾಜಕಾರಣಿಯೊಬ್ಬರ ಎರಡು ಸಾವಿರ ರೂಪಾಯಿ ಲೋಡ್ ಗಟ್ಟಲೆ ನೋಟುಗಳು ಇವೆ ಅವುಗಳ ಬದಾವಣೆ ಮಾಡಬೇಕು ಅಂದರೆ ಸುಲಭವಾಗಿ ನಂಬಿ ಮೋಸ ಹೋಗುತ್ತಿದ್ದಾರೆ.

ಮತ್ತಷ್ಟು ಕ್ರೈಮ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ