
ಚಿಕ್ಕಬಳ್ಳಾಪುರ, ಮೇ 22: ಅಧಿಕ ಮಾಸ (adhika masa) ಹಿನ್ನೆಲೆ ಮದುವೆ, ಮುಂಜಿ ಸೇರಿದಂತೆ ಶುಭ ಸಮಾರಂಭಗಳು ಕಡಿಮೆಯಾಗಿವೆ. ಇದರಿಂದ ತರಕಾರಿಗಳಿಗೆ ಬೇಡಿಕೆ ಕಡಿಮೆಯಾಗಿದೆ. ಹೀಗಾಗಿ ಚಿಕ್ಕಬಳ್ಳಾಪುರದ (chikkaballapur) ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಬಹುತೇಕ ತರಕಾರಿಗಳ ಬೆಲೆ ಕುಸಿದಿದೆ (Vegetable Prices Down). ಯಾಕಾದರೂ ಈ ಅಧಿಕ ಮಾಸ ಬಂತೋ ಎಂದು ರೈತರು ಕಣ್ಣೀರಿಡುವಂತಾಗಿದೆ.
ಅಧಿಕ ಮಾಸ ಹಿನ್ನೆಲೆ ರಾಜ್ಯದ ಹಲವೆಡೆ ಮದುವೆ, ಗೃಹಪ್ರವೇಶ, ಮುಂಜಿ ಸೇರಿದಂತೆ ಶುಭ ಸಮಾರಂಭಗಳು ಸ್ಥಗಿತಗೊಂಡಿವೆ. ಇದರಿಂದ ತರಕಾರಿಗಳಿಗೆ ಬೇಡಿಕೆ ಕಡಿಮೆಯಾಗಿದೆ. ಚಿಕ್ಕಬಳ್ಳಾಪುರದಿಂದ ರಾಜ್ಯ ಮಾತ್ರವಲ್ಲದೇ ದೇಶದ ವಿವಿಧ ಭಾಗಗಳಿಗೆ ಪ್ರತಿದಿನ ತರಕಾರಿಗಳ ರವಾನೆ ಆಗುತ್ತಿತ್ತು. ಆದರೆ ಇದೀಗ ಬೇಡಿಕೆ ಕಡಿಮೆಯಾದ ಕಾರಣ ತರಕಾರಿಗಳ ಬೆಲೆ ಇಳಿಕೆಯಾಗಿದೆ.
ತರಕಾರಿ ಬೆಲೆ ಕುಸಿತದಿಂದ ಗ್ರಾಹಕರಿಗೆ ಸ್ವಲ್ಪ ನೆಮ್ಮದಿ ಸಿಕ್ಕಿದೆ. ಆದರೆ ರೈತರಿಗೆ ಮಾತ್ರ ಸಂಕಷ್ಟ ಎದುರಾಗಿದೆ. ಬೆಳೆ ಬೆಳೆಸಲು ಮಾಡಿದ ಖರ್ಚು ಕೂಡ ವಾಪಸ್ ಬರುತ್ತಿಲ್ಲ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ. ಸಾಗಾಟ ವೆಚ್ಚ, ಕೂಲಿ ಕಾರ್ಮಿಕರ ಖರ್ಚು ವೆಚ್ಚ ಹೆಚ್ಚಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ಒಟ್ಟಾರೆ ಅಧಿಕ ಮಾಸದ ಪರಿಣಾಮ ಇದೀಗ ತರಕಾರಿ ಮಾರುಕಟ್ಟೆಯ ಮೇಲೂ ಬೀರಿದೆ. ತರಕಾರಿಗಳಿಗೆ ಬೇಡಿಕೆ ಕಡಿಮೆಯಾಗಿರುವ ಕಾರಣ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕುವಂತಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.