AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಧಾಕರ್ ಗೆಲುವು ಬೆನ್ನಲ್ಲೇ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ; ಕಿಟಕಿ ಗಾಜು ಪುಡಿ ಪುಡಿ

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಪ್ರದೀಪ್ ಈಶ್ವರ್ ರವರ ಮನೆಯ ಮೇಲೆ ದುಷ್ಕರ್ಮಿಗಳು ನಿನ್ನೆ ರಾತ್ರಿ ಕಲ್ಲು ತೂರಾಟ ಮಾಡಿದ್ದು ಮನೆಯ ಕಿಟಕಿ ಗಾಜುಗಳನ್ನು ಹೊಡೆದು ಹಾಕಿದ್ದಾರೆ. ಚಿಕ್ಕಬಳ್ಳಾಪುರ ನಗರ ಪೊಲೀಸರು ಶಾಸಕರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ಆಯೇಷಾ ಬಾನು|

Updated on:Jun 05, 2024 | 8:02 AM

Share

ಚಿಕ್ಕಬಳ್ಳಾಪುರ, ಜೂನ್.05: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ (Lok Sabha Election) ಬಿಜೆಪಿ ಅಭ್ಯರ್ಥಿ ಡಾ ಕೆ.ಸುಧಾಕರ್‌ (Dr K Sudhakar) ಅವರು ಭಾರೀ ಮತದಿಂದ ಗೆಲುವು ಸಾಧಿಸಿದ್ದಾರೆ. ಇದರ ಬೆನ್ನಲ್ಲಿಯೇ ಚಿಕ್ಕಬಳ್ಳಾಪುರದ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ (Pradeep Eshwar) ರಾಜೀನಾಮೆ ನೀಡ್ತಾರಾ ಎಂಬ ಪ್ರಶ್ನೆಗಳು ಎದ್ದಿವೆ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸುಧಾಕರ್‌ ಒಂದು ಮತದ ಮುನ್ನಡೆ ಸಾಧಿಸಿದರು ಕೂಡ ನಾನು ರಾಜೀನಾಮೆ ಕೊಡುತ್ತೇನೆ ಎಂದು ಈ ಹಿಂದೆ ಪ್ರದೀಪ್ ಈಶ್ವರ್ ಚಾಲೆಂಜ್ ಮಾಡಿದ್ದರು. ಸದ್ಯ ನಿನ್ನೆ ಫಲಿತಾಂಶ ಹೊರ ಬಿದ್ದ ಬೆನ್ನಲ್ಲೆ ನಿನ್ನೆ ರಾತ್ರಿ ಪ್ರದೀಪ್ ಈಶ್ವರ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ.

ಕಿಡಿಗೇಡಿಗಳು ನಿನ್ನೆ ರಾತ್ರಿ ಪ್ರದೀಪ್​ ಮನೆ ಮೇಲೆ ಕಲ್ಲು ತೂರಿದ್ದಾರೆ. ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ ಶಾಸಕ ಪ್ರದೀಪ್ ಮನೆಯ ಕಿಟಕಿ ಗಾಜು ಒಡೆದಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಪೊಲೀಸ್ ಉಪಾಧೀಕ್ಷಕ ಎಸ್. ಶಿವಕುಮಾರ್, ಪೊಲೀಸ್ ಇನ್ಸ್ಪೆಕ್ಟರ್ ಎಂ.ಮಂಜುನಾಥ ಹಾಗೂ ಸಿಬ್ಬಂದಿ ಶಾಸಕರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆಯ ಸಿಸಿಟಿವಿ ಪರಿಶೀಲನೆ ನಡೆಸಲಾಗಿದ್ದು ಮನೆಯಲ್ಲಿದ್ದ ಸಿಬ್ಬಂದಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಡಾ.ಕೆ.ಸುಧಾಕರ್ ಗೆಲುವು ಹಿನ್ನಲೆ ಕಲ್ಲು ತೂರಾಟ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಇನ್ನು ಘಟನೆ ಸಂಬಂಧ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್ ಅವರ ತಮ್ಮ ಚೇತನ್, ಲೋಕಸಭಾ ಚುನಾವಣೆಯಲ್ಲಿ ಡಾ.ಕೆ.ಸುಧಾಕರ್ ಗೆದ್ದ ಕಾರಣ ಅವರ ಬೆಂಬಲಿಗರೆ ಕೃತ್ಯ ಎಸಗಿದ್ದಾಗಿ ಶಂಕೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸುಧಾಕರ್ ಕೇವಲ ಒಂದು ವೋಟಿನಿಂದ ಗೆದ್ದರೂ ರಾಜಕೀಯ ಸನ್ಯಾಸ ತಗೊಳ್ಳುವೆ: ಪ್ರದೀಪ್ ಈಶ್ವರ್

ಶಾಸಕರಾದ ಪ್ರದೀಪ್ ಈಶ್ವರ್ ಮನೆಯ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಮನೆಯ ಸಿಬ್ಬಂದಿ ಮುನಿಕೃಷ್ಣ ಮಾಹಿತಿ ನೀಡಿದ್ದಾರೆ. ರಾತ್ರಿ 10.15 ಸಮಯದಲ್ಲಿ ನಾಲ್ಕು ಜನ ಹುಡುಗರು ಕಲ್ಲು ತೂರಾಟ ನಡೆಸಿದ್ದಾರೆ. ಸಿಸಿಟಿವಿ ಕ್ಯಾಮೆರಾ ಸೆನ್ಸರ್ ಆನ್ ಆಗ್ತಿದ್ದಂತೆ ಹುಡುಗರು ಓಡಿ ಹೋದರು. ನಾಲ್ಕೈದು ಕಲ್ಲುಗಳನ್ನು ಎಸೆದಿದ್ದಾರೆ. ಮನೆಯ ಕಿಟಕಿ ಪುಡಿ ಪುಡಿ ಆಗಿದೆ. ಕಲ್ಲಿನ ಶಬ್ದ ಕೇಳಿ ಆಚೆ ಬಂದೆವು ಭಯ ಆಯಿತು. ಅಭಿ, ತಾರಕ್ ನಾನು ರೂಮ್ ನಲ್ಲಿ ಇದ್ದೆವು. ಮನೆ ಮಾಡಿ ಒಂದು ವರ್ಷ ಆಗಿದೆ. ಇದೇ ಮೊದಲ ಬಾರಿಗೆ ಈ ರೀತಿಯ ಘಟನೆ ನಡೆದಿರೋದು ಎಂದು ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:02 am, Wed, 5 June 24

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ