ಚಿಕ್ಕಬಳ್ಳಾಫುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಕುದುಪಕುಂಟೆ ಗ್ರಾಮದ ಬಳಿ ಟ್ರ್ಯಾಕ್ಟರ್ ಹರಿದು ರೈತ ಮುನಿಸ್ವಾಮಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ರೈತ ಮುನಿಸ್ವಾಮಿ ಶಿಡ್ಲಘಟ್ಟ ತಾಲೂಕಿನ ಯರ್ಯಹಳ್ಳಿ ಗ್ರಾಮದ ನಿವಾಸಿ. ಬೈಕ್ ಹಿಂಬದಿಯಲ್ಲಿ ಹೋಗುತ್ತಿದ್ದಾಗ ರೈತ ಮುನಿಸ್ವಾಮಿ ಕೆಳಗೆ ಬಿದ್ದಿದ್ದಾರೆ. ಅದೇ ವೇಳೆ ಯಮರೂಪಿ ರಸ್ತೆಯಲ್ಲಿ ಹಿಂದೆಯೇ ಬರುತ್ತಿದ್ದ ಟ್ರ್ಯಾಕ್ಟರ್ ರೈತನ ಮೇಲೆ ಹರಿದು ಹೋಗಿದೆ. ಇದರಿಂದ ಅವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಘಟನೆ ನಡೆಯುತ್ತಿದ್ದಂತೆ ರಸ್ತೆ ಅವ್ಯವಸ್ಥೆ ಖಂಡಿಸಿ ಸ್ಥಳಿಯರು ಪ್ರತಿಭಟನೆ ನಡೆಸಿದ್ದಾರೆ. ದಿಬ್ಬೂರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಕಾನ್ಸ್ಟೇಬಲ್ ಸಾವು- ಮದುವೆಗೆ 4 ದಿನ ಬಾಕಿಯಿರುವಾಗ ಶವವಾಗಿ ಪತ್ತೆ
ಕಲಬುರಗಿ: ಕಲಬುರಗಿ ಗ್ರಾಮೀಣ ಠಾಣೆ ಕಾನ್ಸ್ಟೇಬಲ್ ಶ್ರೀನಾಥ್(25) ಕಲಬುರಗಿ ತಾಲೂಕಿನ ಸಾವಳಗಿ ರೈಲು ಹಳಿ ಮೇಲೆ ಶವವಾಗಿ ಪತ್ತೆಯಾಗಿದ್ದಾರೆ. ಅಫಜಲಪುರ ತಾಲೂಕಿನ ಮದರಾ ಕೆ ಗ್ರಾಮದ ಶ್ರೀನಾಥ್ ಅವರ ವಿವಾಹ ಡಿಸೆಂಬರ್ 1ಕ್ಕೆ ನಿಶ್ಚಯವಾಗಿತ್ತು. ಮದುವೆಗೆ 4 ದಿನ ಬಾಕಿಯಿರುವಾಗಲೇ ಶವವಾಗಿ ಪತ್ತೆಯಾಗಿದ್ದಾರೆ. ವಾಡಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಶ್ರೀನಾಥ್ ಕಲಬುರಗಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಇಂದು ಮುಂಜಾನೆ ರೈಲು ಹಳಿ ಮೇಲೆ ಶವವಾಗಿ ಪತ್ತೆಯಾಗಿದ್ದಾರೆ. ಡಿಸೆಂಬರ್ ಒಂದರಂದು ಕಲಬುರಗಿ ನಗರದಲ್ಲಿ ವಿವಾಹ ನಿಶ್ಚಯವಾಗಿತ್ತು.
ಹಾವಿನ ಜೊತೆ ವೃದ್ಧ ಚೆಲ್ಲಾಟ ಆಡಿರೋ ವಿಡಿಯೋ ನೋಡಿದ್ರೆ ಬೆಚ್ಚಿ ಬೀಳ್ತೀರಾ?|Tv9 Kannada