AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರದಲ್ಲಿ ಮಹಿಳೆಗೆ ಕೂಲಿ ನೀಡಿ ಕೊರೊನಾ ಲಸಿಕೆ ಹಾಕಿಸಿದ ಅಧಿಕಾರಿಗಳು!

ಗುಡಿಬಂಡೆ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ರಾಜಶೇಖರ್ ಹಾಗೂ ಸಿಬ್ಬಂದಿ ಲಸಿಕೆ ಪಡೆಯುವಂತೆ ಮಹಿಳೆ ಬಳಿ ಪರಿ ಪರಿಯಾಗಿ ಮನವಿ ಮಾಡುತ್ತಾರೆ.

ಚಿಕ್ಕಬಳ್ಳಾಪುರದಲ್ಲಿ ಮಹಿಳೆಗೆ ಕೂಲಿ ನೀಡಿ ಕೊರೊನಾ ಲಸಿಕೆ ಹಾಕಿಸಿದ ಅಧಿಕಾರಿಗಳು!
ಲಸಿಕೆ ಪಡೆಯುವಂತೆ ಮನವಿ ಮಾಡುತ್ತಿರುವ ಅಧಿಕಾರಿ
TV9 Web
| Edited By: |

Updated on: Sep 12, 2021 | 4:57 PM

Share

ಚಿಕ್ಕಬಳ್ಳಾಪುರ: ಮಹಾಮಾರಿ ಕೊರೊನಾ (Coronavirus) ವಿರುದ್ಧ ಹೋರಾಡಲು ಇರುವ ಏಕೈಕ ಅಸ್ತ್ರವೆಂದರೆ ಅದು ಲಸಿಕೆ (Vaccine). ಆದರೆ ಲಸಿಕೆ ಹಾಕಿಸಿಕೊಳ್ಳಲು ಕೆಲ ಜನರು ಹಿಂದೆ ಸರಿಯುತ್ತಿದ್ದಾರೆ. ಯಾವುದೇ ಭಯವಿಲ್ಲದೆ ಲಸಿಕೆ ಹಾಕಿಸಿಕೊಳ್ಳಿ ಅಂತ ಹೇಳಿದರೂ ಕೆಲ ಜನ ನಿರ್ಲಕ್ಷ್ಯ ತೋರುತ್ತಿದ್ದಾರೆ. ಈ ನಡುವೆ ಓರ್ವ ಮಹಿಳೆ, ಲಸಿಕೆ ಹಾಕಿಸಿಕೊಂಡು ವಿಶ್ರಾಂತಿ ಪಡೆದರೆ ಒಂದು ದಿನದ ಕೂಲಿ ಕೈ ತಪ್ಪುತ್ತದೆ ಅಂತ ಅಧಿಕಾರಿಗಳ ಜೊತೆ ವಾದ ಮಾಡಿದ್ದಾಳೆ. ಹೀಗಾಗಿ ಅಧಿಕಾರಿಗಳು ವಾದಕ್ಕಿಳಿದ ಮಹಿಳೆಗೆ ಒಂದು ದಿನದ ಕೂಲಿ ಹಣವನ್ನು ನೀಡಿ ಲಸಿಕೆ ನೀಡಿದ್ದಾರೆ. ಈ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಇಂದಿರಾ ನಗರದಲ್ಲಿ ನಡೆದಿದೆ.

ಗುಡಿಬಂಡೆ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ರಾಜಶೇಖರ್ ಹಾಗೂ ಸಿಬ್ಬಂದಿ ಲಸಿಕೆ ಪಡೆಯುವಂತೆ ಮಹಿಳೆ ಬಳಿ ಪರಿ ಪರಿಯಾಗಿ ಮನವಿ ಮಾಡುತ್ತಾರೆ. ಆದರೆ ಮಹಿಳೆ, ಕೊರೊನಾ ಲಸಿಕೆ ಪಡೆದರೆ ಜ್ವರ, ತಲೆನೋವು ಬರುತ್ತೆ ಅಂತ ನಿರಾಕರಿಸುತ್ತಾಳೆ. ಅಲ್ಲದೇ ಲಸಿಕೆ ಪಡೆದರೆ ಒಂದು ದಿನ ವ್ಯರ್ಥವಾಗುತ್ತದೆ. ಹೀಗಾಗಿ ಲಸಿಕೆ ಪಡೆಯಲ್ಲ ಅಂತ ವಾದ ಮಾಡುತ್ತಾಳೆ. ಹೀಗಾಗಿ ಅಧಿಕಾರಿಗಳು ಮಹಿಳೆಗೆ ಒಂದು ದಿನದ ಕೂಲಿ ಹಣ 300 ರೂಪಾಯಿ ನೀಡಿ ಲಸಿಕೆ ನೀಡಿದ್ದಾರೆ.

ಅಕ್ಟೋಬರ್​ ಪ್ರಾರಂಭದಲ್ಲಿ ಬಿಡುಗಡೆಯಾಗಲಿದೆ ಜೈಡಸ್ ಕ್ಯಾಡಿಲಾ ಕೊವಿಡ್​ 19 ಲಸಿಕೆ ಜೈಡಸ್​ ಕ್ಯಾಡಿಲಾದ ಕೊವಿಡ್​ 19 ಲಸಿಕೆ ಝೈಕೊವ್​-ಡಿ (ZyCov-D) ಅಕ್ಟೋಬರ್​ ಪ್ರಾರಂಭದಿಂದ ಬಳಕೆಗೆ ಸಿಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿದ್ದಾಗಿ ಎಎನ್​ಐ ವರದಿ ಮಾಡಿದೆ.  ZyCov-D 12ವರ್ಷ ಮೇಲ್ಪಟ್ಟವರಿಗೆ ನೀಡಲು ಅನುಮತಿ ಪಡೆದ ದೇಶದ ಮೊದಲ ಲಸಿಕೆಯಾಗಿದ್ದು ಸೆಪ್ಟೆಂಬರ್​ನಲ್ಲಿಯೇ ಬಳಕೆಗೆ ಸಿಗಲಿದೆ ಎಂದು ಹೇಳಲಾಗಿತ್ತು. ಇದು ಮೂರು ಡೋಸ್​ಗಳ, ಜಗತ್ತಿನ ಮೊದಲ ಪ್ಲಾಸ್ಮಿಡ್​ ಡಿಎನ್​ಎ ಲಸಿಕೆಯಾಗಿದೆ. ಹಾಗೇ, ಈ ಲಸಿಕೆಯ ತುರ್ತು ಬಳಕೆಗೆ ಆಗಸ್ಟ್​ 20ರಂದೇ ಭಾರತೀಯ ಔಷಧ ನಿಯಂತ್ರಣಾ ಪ್ರಾಧಿಕಾರ ಅನುಮೋದನೆಯನ್ನೂ ನೀಡಿದೆ. ಇದನ್ನು ಮೊದಲ ಡೋಸ್ ತೆಗೆದುಕೊಂಡ 28 ದಿನಗಳ ಬಳಿಕ ಇನ್ನೊಂದು ಡೋಸ್​ ಮತ್ತು ಅದಾದ 28 ದಿನ ಅಂದರೆ ಮೊದಲ ಡೋಸ್​ನಿಂದ 56 ದಿನಗಳಾದ ಬಳಿಕ ಮೂರನೇ ಡೋಸ್ ಪಡೆಯಬೇಕು.  

ಇದನ್ನೂ ಓದಿ

ಕೊರೊನಾ ಟೆಸ್ಟ್ ಫ್ರೀ ಅಂತಾ ವಾರಕ್ಕೆ 2 ತಿಂಗಳಿಗೆ 15 ಬಾರಿ ಟೆಸ್ಟ್, ಸುಖಾಸುಮ್ಮನೆ ಟೆಸ್ಟ್ ಮಾಡಿಸುತ್ತಿರುವವರ ಪಟ್ಟಿ ತಯಾರಿ

ಲಾಕ್​ಡೌನ್​ನಿಂದ ಆರ್ಥಿಕ ಸಂಕಷ್ಟದ ಶಂಕೆ; ಕಿರುತೆರೆ ನಟ ಆತ್ಮಹತ್ಯೆ: ಅನುಮಾನ ಮೂಡಿಸಿದ ಸಾವು

(Authorities have given the woman Rs 300 and vaccinated the corona in Chikkaballapur)

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?