AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಕ್ಕೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಇಬ್ಬರ ಸಾವು, 25 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ(Bagepalli) ತಾಲೂಕಿನ ಪಾತಪಾಳ್ಯ ಗ್ರಾಮದ ಬಳಿ ಮರಕ್ಕೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ(Bus Palti) ಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರಲ್ಲಿ ಓರ್ವ ರೇಚನಾಯ್ಕನಹಳ್ಳಿ ವೆಂಕಟರಾಪ್ಪ(60) ಎಂದು ತಿಳಿದು ಬಂದಿದ್ದು, ಮತ್ತೋರ್ವನ ಹೆಸರು ತಿಳಿದು ಬಂದಿಲ್ಲ.

ಮರಕ್ಕೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಇಬ್ಬರ ಸಾವು, 25 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ
ಬಾಗೇಪಲ್ಲಿ ಬಸ್​ ಪಲ್ಟಿ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Dec 07, 2023 | 3:09 PM

Share

ಚಿಕ್ಕಬಳ್ಳಾಪುರ, ಡಿ.07: ಮರಕ್ಕೆ ಡಿಕ್ಕಿ ಹೊಡೆದು ಬಸ್ ಪಲ್ಟಿ(Bus Palti) ಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ(Bagepalli) ತಾಲೂಕಿನ ಪಾತಪಾಳ್ಯ ಗ್ರಾಮದ ಬಳಿ ನಡೆದಿದೆ. ಮೃತರಲ್ಲಿ ಓರ್ವ ರೇಚನಾಯ್ಕನಹಳ್ಳಿ ವೆಂಕಟರಾಪ್ಪ(60) ಎಂದು ತಿಳಿದು ಬಂದಿದ್ದು, ಮತ್ತೋರ್ವನ ಹೆಸರು ತಿಳಿದು ಬಂದಿಲ್ಲ. ಇನ್ನುಳಿದಂತೆ ಬಸ್​​ನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದ್ದು, 7 ಜನರ ಸ್ಥಿತಿ ಚಿಂತಾಜನಕವಾಗಿದೆ. ಅವರನ್ನು ಕೂಡಲೇ ಬಾಗೇಪಲ್ಲಿ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಘಟನೆ ಪಾತಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇನ್ನು ಈ ಕುರಿತು ಬಸ್​ನಲ್ಲಿದ್ದ ಪ್ರಯಾಣಿಕ ರಾಜು ಎಂಬುವವರು ಮಾತನಾಡಿ ‘ಅತಿ ವೇವಾಗಿ ಬಸ್ ಚಲಿಸಿ ಮರಕ್ಕೆ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿ ಹೊಡೆದ ರಬಸಕ್ಕೆ ಮರವೇ ಉರುಳಿ ಬಿದ್ದಿದ್ದು, ಬಸ್​ನಲ್ಲಿನ ಎಡಭಾಗದಲ್ಲಿ ಕುಳಿತಿದ್ಧ ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ. ನನಗೆ ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದಿದ್ದಾರೆ.

ಇದನ್ನೂ ಓದಿ:ಕೇರಳದಲ್ಲಿ ಬಸ್​ ಅಪಘಾತ, ಕರ್ನಾಟಕದ 17 ಶಬರಿಮಲೆ ಭಕ್ತರಿಗೆ ಗಂಭೀರ ಗಾಯ

ಆರ್ ಟಿ ಓ ಹಾಗೂ ಪೊಲೀಸರ ವಿರುದ್ಧ ಸ್ಥಳೀಯರ ಆಕ್ರೋಶ

ಇನ್ನು ಖಾಸಗಿ ಬಸ್ ಪಲ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್​ಟಿಓ ಹಾಗೂ ಪೊಲೀಸರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆ ಸಾರಿಗೆ ಸಂಚಾರ ನಿಯಮ ಉಲ್ಲಂಘಿಸಿ ಬಸ್​ಗಳನ್ನು ಚಲಾಯಿಸುತ್ತಿದ್ದಾರೆ. ಆರ್​ಟಿಓ ಹಾಗೂ ಪೊಲೀಸರು ಕಣ್ಣಿದ್ದು ಕುರುಡರಾಗಿದ್ದಾರೆ. ಖಾಸಗಿ ಬಸ್​ಗಳ ಆಟಾಟೋಪಕ್ಕೆ ಕಡಿವಾಣ ಹಾಕುವವರೇ ಇಲ್ಲದಂತಾಗಿದೆ. ಅಪಘಾತದಲ್ಲಿ ಪ್ರಯಾಣಿಕರು ಮೃತಪಟ್ಟಿದ್ದಾರೆ, 30 ಜನರಿಗೆ ಗಂಭೀರ ಗಾಯಗಳಾಗಿವೆ. ಅಪಘಾತಕ್ಕೆ ಹೊಣೆ ಯಾರು ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ.

ಅಪಘಾತವಾಗಿ ಗಂಟೆಗಳೆ ಕಳೆದ್ರೂ ಸ್ಥಳಕ್ಕೆ ಬರದ ಆಂಬುಲೆನ್ಸ್

ಇನ್ನು ಖಾಸಗಿ ಬಸ್ ಉರುಳಿಬಿದ್ದು 25ಕ್ಕೂ ಹೆಚ್ಚು ಜನ ಪ್ರಯಾಣಿಕರು ಗಾಯಗೊಂಡು ನಡು ರಸ್ತೆಯಲ್ಲಿ ರಕ್ಷಣೆಗೆ ಮೊರೆ ಇಡುತ್ತಿದ್ದರು. ಆದರೆ, ಗಂಟೆಗಳೇ ಕಳೆದ್ರೂ ಆಂಬುಲೆನ್ಸ್ ಆಗಲಿ ಅಥವಾ ಸರ್ಕಾರಿ ಆಸ್ತತ್ರೆಗಳ ಅಂಬುಲೇನ್ಸ್​ಗಳು ಸ್ಥಳಕ್ಕೆ ಬರಲಿಲ್ಲವೆಂದು ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:23 pm, Thu, 7 December 23

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!