AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನ; ಪ್ರಿಯಕರ ಸೇರಿ ಮೂವರನ್ನು ಬಂಧಿಸಿದ ಬಾಗೇಪಲ್ಲಿ ಪೊಲೀಸರು

ಏಪ್ರಿಲ್ 11ರಂದು SSLC ವಿಜ್ಞಾನ ಪರೀಕ್ಷೆ ಮುಗಿಸಿಕೊಂಡು ಪ್ರೀಯಕರನ ಜೊತೆ ವಾಪಸ್ ಗ್ರಾಮಕ್ಕೆ ಬರುತ್ತಿದ್ದಾಗ ಅಪ್ರಾಪ್ತೆಯ ಪ್ರಿಯಕರ ಗ್ರಾಮ ಹೊರಹೊಲಯದ ಬೆಟ್ಟಕ್ಕೆ ಕರೆದುಕೊಂಡು ಹೋಗಿದ್ದ. ನಂತರ ಪ್ರೇಮಿಗಳು ಬೆಟ್ಟದಲ್ಲಿದ್ದಾಗ ಸ್ಥಳಕ್ಕೆ ಬಂದ ಆತನ ಮೂವರು ಸ್ನೇಹಿತರು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ.

ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನ; ಪ್ರಿಯಕರ ಸೇರಿ ಮೂವರನ್ನು ಬಂಧಿಸಿದ ಬಾಗೇಪಲ್ಲಿ ಪೊಲೀಸರು
ಬಾಗೇಪಲ್ಲಿ ಪೊಲೀಸ್ ಠಾಣೆ
TV9 Web
| Edited By: |

Updated on:Apr 12, 2022 | 12:42 PM

Share

ಚಿಕ್ಕಬಳ್ಳಾಪುರ: ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿಗಳನ್ನು ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಪ್ರಿಯಕರ ಸೇರಿ ಮೂವರನ್ನು ಬಾಗೇಪಲ್ಲಿ ಪೊಲೀಸರು ಬಂಧಿಸಿದ್ದಾರೆ. ಎಸ್ಎಸ್ಎಲ್ಸಿ ಪರೀಕ್ಷೆ ಮುಗಿಸಿ ಬರುತ್ತಿದ್ದ ಬಾಲಕಿ ಮೇಲೆ ಪ್ರಿಯಕರನ ಸಮ್ಮುಖದಲ್ಲೇ ಆತನ ಸ್ನೇಹಿತರಿಂದಲೇ ಅತ್ಯಾಚಾರಕ್ಕೆ ಯತ್ನಿಸಲಾಗಿದೆ.

ಏಪ್ರಿಲ್ 11ರಂದು SSLC ವಿಜ್ಞಾನ ಪರೀಕ್ಷೆ ಮುಗಿಸಿಕೊಂಡು ಪ್ರೀಯಕರನ ಜೊತೆ ವಾಪಸ್ ಗ್ರಾಮಕ್ಕೆ ಬರುತ್ತಿದ್ದಾಗ ಅಪ್ರಾಪ್ತೆಯ ಪ್ರಿಯಕರ ಗ್ರಾಮ ಹೊರಹೊಲಯದ ಬೆಟ್ಟಕ್ಕೆ ಕರೆದುಕೊಂಡು ಹೋಗಿದ್ದ. ನಂತರ ಪ್ರೇಮಿಗಳು ಬೆಟ್ಟದಲ್ಲಿದ್ದಾಗ ಸ್ಥಳಕ್ಕೆ ಬಂದ ಆತನ ಮೂವರು ಸ್ನೇಹಿತರು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ತಕ್ಷಣ ಎಚ್ಚೆತ್ತ ಪ್ರಿಯಕರ ಓಡಿಬಂದು ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾನೆ. ಬಳಿಕ ಗ್ರಾಮಸ್ಥರು ಸ್ಥಳಕ್ಕೆ ಬರುವಷ್ಟರಲ್ಲೇ ಆರೋಪಿಗಳು ಪರಾರಿಯಾಗಿದ್ದಾರೆ. ರಾತ್ರಿಯಿಡೀ ಕಾರ್ಯಾಚರಣೆ ನಡೆಸಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಸಂತ್ರಸ್ತ ಬಾಲಕಿಗೆ ಸರ್ಕಾರಿ ಬಾಲಕಿಯರ ಮಂದಿರದಲ್ಲಿ ರಕ್ಷಣೆ ನೀಡಲಾಗಿದೆ.

ಹೆಚ್ಚು ಅಂಕ ಬರುವಂತೆ ಮಾಡುತ್ತೇನೆಂದು ವಿದ್ಯಾರ್ಥಿನಿ ಜತೆ ಶಿಕ್ಷಕನ ಅಸಭ್ಯ ವರ್ತನೆ SSLC ಪರೀಕ್ಷೆಯಲ್ಲಿ ಹೆಚ್ಚು ಅಂಕ ಬರುವಂತೆ ಮಾಡುತ್ತೇನೆಂದು ಶಿಕ್ಷಕ ಪರಮೇಶ್ ಐರಣಿ(45) SSLC ವಿದ್ಯಾರ್ಥಿನಿ ಕೆನ್ನೆಗೆ ಮುತ್ತುಕೊಟ್ಟು ಅಸಭ್ಯವಾಗಿ ವರ್ತಿಸಿದ ಆರೋಪ ಹಾವೇರಿ ಜಿಲ್ಲೆ ಹಿರೇಕೆರೂರು ಠಾಣಾ ವ್ಯಾಪ್ತಿಯಲ್ಲಿ ಕೇಳಿ ಬಂದಿದೆ. ಏಪ್ರಿಲ್​​ 8ರಂದು ನಡೆದಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪರೀಕ್ಷಾ ಕೇಂದ್ರದ ಸೂಪರ್ ವೈಸರ್ ಆಗಿದ್ದ ಪರಮೇಶ್​​, ಪರೀಕ್ಷೆ ಆರಂಭ ಆದಾಗಿನಿಂದ ವಿದ್ಯಾರ್ಥಿನಿ ಜತೆ ಅಸಭ್ಯವಾಗಿ ವರ್ತಿಸ್ತಿದ್ದನಂತೆ. ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಶಿಕ್ಷಕ ಪರಮೇಶ್​​ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ: ಪಾಕಿಸ್ತಾನ ಮೂಲದ ಸಲಿಂಗಿ ಬ್ರಿಟನ್ ಸಂಸತ್ ಸದಸ್ಯ ಇಮ್ರಾನ್ ಬಾಲಕನೊಬ್ಬನ ಮೇಲೆ ನಡೆಸಿದ ಲೈಂಗಿಕ ಹಲ್ಲೆ ಸಾಬೀತಾಗಿದೆ

ಜೂನ್ ತಿಂಗಳಲ್ಲಿ ಕೊರೊನಾ 4ನೇ ಅಲೆ ಸಾಧ್ಯತೆ; ಮತ್ತೆ ಜಿನೋಮಿಕ್ ಸೀಕ್ವೆನ್ಸಿಂಗ್ ಟೆಸ್ಟಿಂಗ್ ನಡೆಸಲು ನಿರ್ಧರಿಸಿದ ಆರೋಗ್ಯ ಇಲಾಖೆ

Published On - 12:33 pm, Tue, 12 April 22

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?