AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Kannada Digital Impact: ಮನಿ ಡಬ್ಲಿಂಗ್ ಪ್ರಕರಣದಲ್ಲಿ ಬಾಗೇಪಲ್ಲಿ ಪೊಲೀಸರ ಶಾಮೀಲು: ಸಾಲು ಸಾಲು ಮೂವರು ಪೊಲೀಸರು ಅಮಾನತು

ಇದು ಟಿವಿ9 ಕನ್ನಡ ಡಿಜಿಟಲ್‌ ವರದಿ ಫಲಶೃತಿ. ಮನಿ ಡಬ್ಲಿಂಗ್ ಪ್ರಕರಣದಲ್ಲಿ ಪೊಲೀಸರು ಶಾಮೀಲಾಗಿರುವ ಆರೋಪದಲ್ಲಿ ಇಬ್ಬರು ಕಾನ್​ಸ್ಟೇಬಲ್​​ಗಳು ಮತ್ತು ಒಬ್ಬ ಪೊಲೀಸ್​​ ಇನ್ಸ್​​ಪೆಕ್ಟರ್ ಅನ್ನು ಸೇವೆಯಿಂದ ಅಮಾನತು ಮಾಡಿ, ಮನೆಗೆ ಕಳಿಸಲಾಗಿದೆ.

TV9 Kannada Digital Impact: ಮನಿ ಡಬ್ಲಿಂಗ್ ಪ್ರಕರಣದಲ್ಲಿ ಬಾಗೇಪಲ್ಲಿ ಪೊಲೀಸರ ಶಾಮೀಲು: ಸಾಲು ಸಾಲು ಮೂವರು ಪೊಲೀಸರು ಅಮಾನತು
ಮನಿ ಡಬ್ಲಿಂಗ್ ಪ್ರಕರಣದಲ್ಲಿ ಪೊಲೀಸರು ಶಾಮೀಲು, ಅಮಾನತು
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Aug 12, 2023 | 5:22 PM

Share

ಚಿಕ್ಕಬಳ್ಳಾಪುರ, ಆಗಸ್ಟ್​ 12: ಇದು ಟಿವಿ9 ಕನ್ನಡ ಡಿಜಿಟಲ್‌ ವರದಿ ಫಲಶೃತಿ. ಮನಿ ಡಬ್ಲಿಂಗ್ ಪ್ರಕರಣದಲ್ಲಿ ಪೊಲೀಸರು ಶಾಮೀಲಾಗಿರುವ ಆರೋಪದಲ್ಲಿ ಇಬ್ಬರು ಕಾನ್​ಸ್ಟೇಬಲ್​​ಗಳು ಮತ್ತು ಒಬ್ಬ ಪೊಲೀಸ್​​ ಇನ್ಸ್​​ಪೆಕ್ಟರ್ ಅನ್ನು ಸೇವೆಯಿಂದ ಅಮಾನತು ಮಾಡಿ, ಮನೆಗೆ ಕಳಿಸಲಾಗಿದೆ. ಬಾಗೇಪಲ್ಲಿ ಠಾಣೆಯ (Bagepalli police) ಗುಪ್ತವಾರ್ತೆ ಕಾನ್​ಸ್ಟೇಬಲ್​​ ನರಸಿಂಹಮೂರ್ತಿ, ಕಾನ್​ಸ್ಟೇಬಲ್​​ ಅಶೋಕ್ ಅವರನ್ನು ಅಮಾನತು ಮಾಡಿ (suspend) ಚಿಕ್ಕಬಳ್ಳಾಪುರ ಪೊಲೀಸ್ (Chikkaballapur police)​ ವರಿಷ್ಠಾಧಿಕಾರಿ ಡಿ.ಎಲ್. ನಾಗೇಶ ಇಂದು ಶನಿವಾರ ಆದೇಶ ಹೊರಡಿಸಿದ್ದಾರೆ.

ಇನ್ನು ಪೊಲೀಸ್ ಇನ್ಸ್​​ಪೆಕ್ಟರ್ ರವಿಕುಮಾರ್ ಅವರನ್ನು ಅಮಾನತು ಮಾಡಿ ಕೇಂದ್ರ ವಲಯ ಐ.ಜಿ.ಪಿ. ರವಿಕಾಂತೇ ಗೌಡ (B R Ravikanthe Gowda) ಆದೇಶ ಹೊರಡಿಸಿದ್ದಾರೆ. ರವಿಕುಮಾರ್ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಹಾಗೂ ಚೇಳೂರು ಪೊಲೀಸ್ ಠಾಣೆಗಳ ಇನ್ಸ್​​ಪೆಕ್ಟರ್ ಆಗಿದ್ದರು. ಪ್ರಕರಣದಲ್ಲಿ ಪೊಲೀಸರ ಶಾಮೀಲು ಹಾಗೂ ಕರ್ತವ್ಯ ಲೋಪದ ಬಗ್ಗೆ ಟಿವಿ9 ಡಿಜಿಟಲ್ ಮೂರು ಸವಿಸ್ತಾರ, ಸಾಕ್ಷ್ಯ ಸಹಿತ ವರದಿಗಳನ್ನು ಪ್ರಕಟಿಸಿತ್ತು.

ಇದನ್ನೂ ಓದಿ: TV9 Digital ಫಲಶೃತಿ: ಬಾಗೇಪಲ್ಲಿ ಠಾಣೆ ವ್ಯಾಪ್ತಿಯಲ್ಲಿ ಪಿಂಕ್ ಟು ಗ್ರೀನ್ ನೋಟ್ ಜಾಲದ ಪ್ರಕರಣ- ಕೊನೆಗೂ FIR ದಾಖಲು, ವಿವರ ಇಲ್ಲಿದೆ

ಬಾಗೇಪಲ್ಲಿ ಠಾಣೆ ವ್ಯಾಪ್ತಿಯಲ್ಲಿ ಪಿಂಕ್ ಟು ಗ್ರೀನ್ ನೋಟ್ ಜಾಲದ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿ ಬಿಡುಗಡೆ ಮಾಡಿದ್ದ ಬಾಗೇಪಲ್ಲಿ ಪೊಲೀಸರ ವಿರುದ್ಧ ಲಂಚಾವತಾರ ಕೇಳಿಬಂದಿತ್ತು. 5 ದಿನ ಕಳೆದರೂ ಪೊಲೀಸರು ಪ್ರಕರಣ ದಾಖಲಿಸದೇ ಮುಚ್ಚಿ ಹಾಕಲು ಯತ್ನಿಸಿದ್ದರು. ಸಾಕ್ಷ್ಯಾಧಾರಗಳ ಸಮೇತ TV9 Digital ಈ ಬಗ್ಗೆ ಆಗಸ್ಟ್ 8 ಹಾಗೂ 9 ರಂದು ವಿಸ್ತೃತವಾಗಿ ವರದಿ ಮಾಡಿತ್ತು.

ಚಿಕ್ಕಬಳ್ಳಾಪುರ ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್  ಮಾಡಿ

Published On - 5:09 pm, Sat, 12 August 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ