TV9 Kannada Digital Impact: ಮನಿ ಡಬ್ಲಿಂಗ್ ಪ್ರಕರಣದಲ್ಲಿ ಬಾಗೇಪಲ್ಲಿ ಪೊಲೀಸರ ಶಾಮೀಲು: ಸಾಲು ಸಾಲು ಮೂವರು ಪೊಲೀಸರು ಅಮಾನತು

ಇದು ಟಿವಿ9 ಕನ್ನಡ ಡಿಜಿಟಲ್‌ ವರದಿ ಫಲಶೃತಿ. ಮನಿ ಡಬ್ಲಿಂಗ್ ಪ್ರಕರಣದಲ್ಲಿ ಪೊಲೀಸರು ಶಾಮೀಲಾಗಿರುವ ಆರೋಪದಲ್ಲಿ ಇಬ್ಬರು ಕಾನ್​ಸ್ಟೇಬಲ್​​ಗಳು ಮತ್ತು ಒಬ್ಬ ಪೊಲೀಸ್​​ ಇನ್ಸ್​​ಪೆಕ್ಟರ್ ಅನ್ನು ಸೇವೆಯಿಂದ ಅಮಾನತು ಮಾಡಿ, ಮನೆಗೆ ಕಳಿಸಲಾಗಿದೆ.

TV9 Kannada Digital Impact: ಮನಿ ಡಬ್ಲಿಂಗ್ ಪ್ರಕರಣದಲ್ಲಿ ಬಾಗೇಪಲ್ಲಿ ಪೊಲೀಸರ ಶಾಮೀಲು: ಸಾಲು ಸಾಲು ಮೂವರು ಪೊಲೀಸರು ಅಮಾನತು
ಮನಿ ಡಬ್ಲಿಂಗ್ ಪ್ರಕರಣದಲ್ಲಿ ಪೊಲೀಸರು ಶಾಮೀಲು, ಅಮಾನತು
Follow us
| Updated By: ಸಾಧು ಶ್ರೀನಾಥ್​

Updated on:Aug 12, 2023 | 5:22 PM

ಚಿಕ್ಕಬಳ್ಳಾಪುರ, ಆಗಸ್ಟ್​ 12: ಇದು ಟಿವಿ9 ಕನ್ನಡ ಡಿಜಿಟಲ್‌ ವರದಿ ಫಲಶೃತಿ. ಮನಿ ಡಬ್ಲಿಂಗ್ ಪ್ರಕರಣದಲ್ಲಿ ಪೊಲೀಸರು ಶಾಮೀಲಾಗಿರುವ ಆರೋಪದಲ್ಲಿ ಇಬ್ಬರು ಕಾನ್​ಸ್ಟೇಬಲ್​​ಗಳು ಮತ್ತು ಒಬ್ಬ ಪೊಲೀಸ್​​ ಇನ್ಸ್​​ಪೆಕ್ಟರ್ ಅನ್ನು ಸೇವೆಯಿಂದ ಅಮಾನತು ಮಾಡಿ, ಮನೆಗೆ ಕಳಿಸಲಾಗಿದೆ. ಬಾಗೇಪಲ್ಲಿ ಠಾಣೆಯ (Bagepalli police) ಗುಪ್ತವಾರ್ತೆ ಕಾನ್​ಸ್ಟೇಬಲ್​​ ನರಸಿಂಹಮೂರ್ತಿ, ಕಾನ್​ಸ್ಟೇಬಲ್​​ ಅಶೋಕ್ ಅವರನ್ನು ಅಮಾನತು ಮಾಡಿ (suspend) ಚಿಕ್ಕಬಳ್ಳಾಪುರ ಪೊಲೀಸ್ (Chikkaballapur police)​ ವರಿಷ್ಠಾಧಿಕಾರಿ ಡಿ.ಎಲ್. ನಾಗೇಶ ಇಂದು ಶನಿವಾರ ಆದೇಶ ಹೊರಡಿಸಿದ್ದಾರೆ.

ಇನ್ನು ಪೊಲೀಸ್ ಇನ್ಸ್​​ಪೆಕ್ಟರ್ ರವಿಕುಮಾರ್ ಅವರನ್ನು ಅಮಾನತು ಮಾಡಿ ಕೇಂದ್ರ ವಲಯ ಐ.ಜಿ.ಪಿ. ರವಿಕಾಂತೇ ಗೌಡ (B R Ravikanthe Gowda) ಆದೇಶ ಹೊರಡಿಸಿದ್ದಾರೆ. ರವಿಕುಮಾರ್ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಹಾಗೂ ಚೇಳೂರು ಪೊಲೀಸ್ ಠಾಣೆಗಳ ಇನ್ಸ್​​ಪೆಕ್ಟರ್ ಆಗಿದ್ದರು. ಪ್ರಕರಣದಲ್ಲಿ ಪೊಲೀಸರ ಶಾಮೀಲು ಹಾಗೂ ಕರ್ತವ್ಯ ಲೋಪದ ಬಗ್ಗೆ ಟಿವಿ9 ಡಿಜಿಟಲ್ ಮೂರು ಸವಿಸ್ತಾರ, ಸಾಕ್ಷ್ಯ ಸಹಿತ ವರದಿಗಳನ್ನು ಪ್ರಕಟಿಸಿತ್ತು.

ಇದನ್ನೂ ಓದಿ: TV9 Digital ಫಲಶೃತಿ: ಬಾಗೇಪಲ್ಲಿ ಠಾಣೆ ವ್ಯಾಪ್ತಿಯಲ್ಲಿ ಪಿಂಕ್ ಟು ಗ್ರೀನ್ ನೋಟ್ ಜಾಲದ ಪ್ರಕರಣ- ಕೊನೆಗೂ FIR ದಾಖಲು, ವಿವರ ಇಲ್ಲಿದೆ

ಬಾಗೇಪಲ್ಲಿ ಠಾಣೆ ವ್ಯಾಪ್ತಿಯಲ್ಲಿ ಪಿಂಕ್ ಟು ಗ್ರೀನ್ ನೋಟ್ ಜಾಲದ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿ ಬಿಡುಗಡೆ ಮಾಡಿದ್ದ ಬಾಗೇಪಲ್ಲಿ ಪೊಲೀಸರ ವಿರುದ್ಧ ಲಂಚಾವತಾರ ಕೇಳಿಬಂದಿತ್ತು. 5 ದಿನ ಕಳೆದರೂ ಪೊಲೀಸರು ಪ್ರಕರಣ ದಾಖಲಿಸದೇ ಮುಚ್ಚಿ ಹಾಕಲು ಯತ್ನಿಸಿದ್ದರು. ಸಾಕ್ಷ್ಯಾಧಾರಗಳ ಸಮೇತ TV9 Digital ಈ ಬಗ್ಗೆ ಆಗಸ್ಟ್ 8 ಹಾಗೂ 9 ರಂದು ವಿಸ್ತೃತವಾಗಿ ವರದಿ ಮಾಡಿತ್ತು.

ಚಿಕ್ಕಬಳ್ಳಾಪುರ ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್  ಮಾಡಿ

Published On - 5:09 pm, Sat, 12 August 23

ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?
ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?
72 ದಿನಗಳ ಬಳಿಕ ನದಿಯಲ್ಲಿ ಅರ್ಜುನ ಪತ್ತೆ: ಗುಡ್ಡ ಕುಸಿತದ ಭೀಕರತೆ ನೋಡಿ..
72 ದಿನಗಳ ಬಳಿಕ ನದಿಯಲ್ಲಿ ಅರ್ಜುನ ಪತ್ತೆ: ಗುಡ್ಡ ಕುಸಿತದ ಭೀಕರತೆ ನೋಡಿ..
ಯುವ ದಸರಾನಲ್ಲಿ ಪ್ರೇಕ್ಷಕರಿಂದ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ
ಯುವ ದಸರಾನಲ್ಲಿ ಪ್ರೇಕ್ಷಕರಿಂದ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ
ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು
ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು
ತನಿಖೆಗೆ ಆದೇಶಿಸಿದ್ದರೂ ಸಿಎಂ ವಿರುದ್ಧ ಮತ್ತೊಂದು ಹೋರಾಟಕ್ಕೆ ಸಜ್ಜು!
ತನಿಖೆಗೆ ಆದೇಶಿಸಿದ್ದರೂ ಸಿಎಂ ವಿರುದ್ಧ ಮತ್ತೊಂದು ಹೋರಾಟಕ್ಕೆ ಸಜ್ಜು!
CM ವಿರುದ್ದ ದೂರಿಗೆ ಹಿಂಬರಹ ನೀಡಲು ಲೋಕಾಯುಕ್ತ SPಗೆ ಗಡುವು ನೀಡಿದ ದೂರುದಾರ
CM ವಿರುದ್ದ ದೂರಿಗೆ ಹಿಂಬರಹ ನೀಡಲು ಲೋಕಾಯುಕ್ತ SPಗೆ ಗಡುವು ನೀಡಿದ ದೂರುದಾರ
IND vs BAN: ಕಾನ್ಪುರ್​ಗೆ ಬಂದಿಳಿದ ಟೀಮ್ ಇಂಡಿಯಾ: ಇಲ್ಲಿದೆ ವಿಡಿಯೋ
IND vs BAN: ಕಾನ್ಪುರ್​ಗೆ ಬಂದಿಳಿದ ಟೀಮ್ ಇಂಡಿಯಾ: ಇಲ್ಲಿದೆ ವಿಡಿಯೋ
ಪಾಕಿಸ್ತಾನಕ್ಕೆ ಹೋಲಿಕೆ: ಹೈಕೋರ್ಟ್​ ನ್ಯಾಯಾಧೀಶರಿಗೆ ಸುಪ್ರಿಂ ತರಾಟೆ
ಪಾಕಿಸ್ತಾನಕ್ಕೆ ಹೋಲಿಕೆ: ಹೈಕೋರ್ಟ್​ ನ್ಯಾಯಾಧೀಶರಿಗೆ ಸುಪ್ರಿಂ ತರಾಟೆ
ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್​ನಲ್ಲಿ ಆ್ಯಪಲ್ ಐಫೋನ್ ಆಫರ್
ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್​ನಲ್ಲಿ ಆ್ಯಪಲ್ ಐಫೋನ್ ಆಫರ್
ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಯತ್ನ: ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ
ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಯತ್ನ: ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ