Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Kannada Digital Impact: ಮನಿ ಡಬ್ಲಿಂಗ್ ಪ್ರಕರಣದಲ್ಲಿ ಬಾಗೇಪಲ್ಲಿ ಪೊಲೀಸರ ಶಾಮೀಲು: ಸಾಲು ಸಾಲು ಮೂವರು ಪೊಲೀಸರು ಅಮಾನತು

ಇದು ಟಿವಿ9 ಕನ್ನಡ ಡಿಜಿಟಲ್‌ ವರದಿ ಫಲಶೃತಿ. ಮನಿ ಡಬ್ಲಿಂಗ್ ಪ್ರಕರಣದಲ್ಲಿ ಪೊಲೀಸರು ಶಾಮೀಲಾಗಿರುವ ಆರೋಪದಲ್ಲಿ ಇಬ್ಬರು ಕಾನ್​ಸ್ಟೇಬಲ್​​ಗಳು ಮತ್ತು ಒಬ್ಬ ಪೊಲೀಸ್​​ ಇನ್ಸ್​​ಪೆಕ್ಟರ್ ಅನ್ನು ಸೇವೆಯಿಂದ ಅಮಾನತು ಮಾಡಿ, ಮನೆಗೆ ಕಳಿಸಲಾಗಿದೆ.

TV9 Kannada Digital Impact: ಮನಿ ಡಬ್ಲಿಂಗ್ ಪ್ರಕರಣದಲ್ಲಿ ಬಾಗೇಪಲ್ಲಿ ಪೊಲೀಸರ ಶಾಮೀಲು: ಸಾಲು ಸಾಲು ಮೂವರು ಪೊಲೀಸರು ಅಮಾನತು
ಮನಿ ಡಬ್ಲಿಂಗ್ ಪ್ರಕರಣದಲ್ಲಿ ಪೊಲೀಸರು ಶಾಮೀಲು, ಅಮಾನತು
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಸಾಧು ಶ್ರೀನಾಥ್​

Updated on:Aug 12, 2023 | 5:22 PM

ಚಿಕ್ಕಬಳ್ಳಾಪುರ, ಆಗಸ್ಟ್​ 12: ಇದು ಟಿವಿ9 ಕನ್ನಡ ಡಿಜಿಟಲ್‌ ವರದಿ ಫಲಶೃತಿ. ಮನಿ ಡಬ್ಲಿಂಗ್ ಪ್ರಕರಣದಲ್ಲಿ ಪೊಲೀಸರು ಶಾಮೀಲಾಗಿರುವ ಆರೋಪದಲ್ಲಿ ಇಬ್ಬರು ಕಾನ್​ಸ್ಟೇಬಲ್​​ಗಳು ಮತ್ತು ಒಬ್ಬ ಪೊಲೀಸ್​​ ಇನ್ಸ್​​ಪೆಕ್ಟರ್ ಅನ್ನು ಸೇವೆಯಿಂದ ಅಮಾನತು ಮಾಡಿ, ಮನೆಗೆ ಕಳಿಸಲಾಗಿದೆ. ಬಾಗೇಪಲ್ಲಿ ಠಾಣೆಯ (Bagepalli police) ಗುಪ್ತವಾರ್ತೆ ಕಾನ್​ಸ್ಟೇಬಲ್​​ ನರಸಿಂಹಮೂರ್ತಿ, ಕಾನ್​ಸ್ಟೇಬಲ್​​ ಅಶೋಕ್ ಅವರನ್ನು ಅಮಾನತು ಮಾಡಿ (suspend) ಚಿಕ್ಕಬಳ್ಳಾಪುರ ಪೊಲೀಸ್ (Chikkaballapur police)​ ವರಿಷ್ಠಾಧಿಕಾರಿ ಡಿ.ಎಲ್. ನಾಗೇಶ ಇಂದು ಶನಿವಾರ ಆದೇಶ ಹೊರಡಿಸಿದ್ದಾರೆ.

ಇನ್ನು ಪೊಲೀಸ್ ಇನ್ಸ್​​ಪೆಕ್ಟರ್ ರವಿಕುಮಾರ್ ಅವರನ್ನು ಅಮಾನತು ಮಾಡಿ ಕೇಂದ್ರ ವಲಯ ಐ.ಜಿ.ಪಿ. ರವಿಕಾಂತೇ ಗೌಡ (B R Ravikanthe Gowda) ಆದೇಶ ಹೊರಡಿಸಿದ್ದಾರೆ. ರವಿಕುಮಾರ್ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಹಾಗೂ ಚೇಳೂರು ಪೊಲೀಸ್ ಠಾಣೆಗಳ ಇನ್ಸ್​​ಪೆಕ್ಟರ್ ಆಗಿದ್ದರು. ಪ್ರಕರಣದಲ್ಲಿ ಪೊಲೀಸರ ಶಾಮೀಲು ಹಾಗೂ ಕರ್ತವ್ಯ ಲೋಪದ ಬಗ್ಗೆ ಟಿವಿ9 ಡಿಜಿಟಲ್ ಮೂರು ಸವಿಸ್ತಾರ, ಸಾಕ್ಷ್ಯ ಸಹಿತ ವರದಿಗಳನ್ನು ಪ್ರಕಟಿಸಿತ್ತು.

ಇದನ್ನೂ ಓದಿ: TV9 Digital ಫಲಶೃತಿ: ಬಾಗೇಪಲ್ಲಿ ಠಾಣೆ ವ್ಯಾಪ್ತಿಯಲ್ಲಿ ಪಿಂಕ್ ಟು ಗ್ರೀನ್ ನೋಟ್ ಜಾಲದ ಪ್ರಕರಣ- ಕೊನೆಗೂ FIR ದಾಖಲು, ವಿವರ ಇಲ್ಲಿದೆ

ಬಾಗೇಪಲ್ಲಿ ಠಾಣೆ ವ್ಯಾಪ್ತಿಯಲ್ಲಿ ಪಿಂಕ್ ಟು ಗ್ರೀನ್ ನೋಟ್ ಜಾಲದ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿ ಬಿಡುಗಡೆ ಮಾಡಿದ್ದ ಬಾಗೇಪಲ್ಲಿ ಪೊಲೀಸರ ವಿರುದ್ಧ ಲಂಚಾವತಾರ ಕೇಳಿಬಂದಿತ್ತು. 5 ದಿನ ಕಳೆದರೂ ಪೊಲೀಸರು ಪ್ರಕರಣ ದಾಖಲಿಸದೇ ಮುಚ್ಚಿ ಹಾಕಲು ಯತ್ನಿಸಿದ್ದರು. ಸಾಕ್ಷ್ಯಾಧಾರಗಳ ಸಮೇತ TV9 Digital ಈ ಬಗ್ಗೆ ಆಗಸ್ಟ್ 8 ಹಾಗೂ 9 ರಂದು ವಿಸ್ತೃತವಾಗಿ ವರದಿ ಮಾಡಿತ್ತು.

ಚಿಕ್ಕಬಳ್ಳಾಪುರ ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್  ಮಾಡಿ

Published On - 5:09 pm, Sat, 12 August 23

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ