AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಬಂದ್ ಪರಿಣಾಮ; ಚಿಕ್ಕಬಳ್ಳಾಪುರದಲ್ಲಿ ಕುಸಿದ ಹೂ ಬೆಲೆ, ಹೂಗಳನ್ನು ತಿಪ್ಪೆ ಗುಂಡಿಗೆ ಸುರಿದ ರೈತರು

ಬೆಳೆದ ಹೂವನ್ನು ಮಾರಾಟ ಮಾಡಲು ರೈತರು, ಚಿಕ್ಕಬಳ್ಳಾಪುರದ ಹೂ ಮಾರುಕಟ್ಟೆಗೆ ಬಂದಿದ್ದರು. ಆದ್ರೆ ಹೂ ಕೊಂಡುಕೊಳ್ಳುವ ದೊಡ್ಡ ದೊಡ್ಡ ವರ್ತಕರು ಬಂದಿರಲಿಲ್ಲ. ಕಾವೇರಿ ನದಿ ನೀರು ಹಂಚಿಕೆ ವಿವಾದ ಹಿನ್ನಲೆ ಇಂದು ಬೆಂಗಳೂರು ಬಂದ್ ಮಾಡಿದ ಕಾರಣ ಬೆಂಗಳೂರಿನ ವರ್ತಕರು ಮಾರುಟ್ಟೆಗೆ ಬಂದಿರಲಿಲ್ಲ, ಇದ್ರಿಂದ ಹೂಗಳನ್ನು ಕೊಂಡುಕೊಳ್ಳುವವರು ಯಾರು ಇಲ್ಲದೆ ಹೂಗಳು ತಿಪ್ಪೆ ಪಾಲಾದವು.

ಬೆಂಗಳೂರು ಬಂದ್ ಪರಿಣಾಮ; ಚಿಕ್ಕಬಳ್ಳಾಪುರದಲ್ಲಿ ಕುಸಿದ ಹೂ ಬೆಲೆ, ಹೂಗಳನ್ನು ತಿಪ್ಪೆ ಗುಂಡಿಗೆ ಸುರಿದ ರೈತರು
ಹೂಗಳನ್ನು ತಿಪ್ಪೆ ಗುಂಡಿಗೆ ಸುರಿದ ರೈತ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Sep 26, 2023 | 6:33 PM

Share

ಚಿಕ್ಕಬಳ್ಳಾಪುರ, ಸೆಪ್ಟೆಂಬರ್ 26: ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ರೈತರು ಪುಷ್ಪೋದ್ಯಮವನ್ನೇ ನಂಬಿಕೊಂಡು ಸ್ವಾಭಿಮಾನದ ಬದುಕು ಕಂಡವರು. ಪುಷ್ಪೋದ್ಯಮದಲ್ಲಿ ಏನೇ ಏರುಪೇರಾದರೂ ಸಂಕಷ್ಟಕ್ಕೆ ಸಿಲುಕುತ್ತಾರೆ. ಇನ್ನೂ ಕಾವೇರಿ ನದಿ ನೀರು ಹಂಚಿಕೆ ವಿವಾದ ಹಿನ್ನಲೆ ಇಂದು ಬೆಂಗಳೂರು ಬಂದ್ (Bangalore Bandh) ಮಾಡಿದ ಕಾರಣ ಚಿಕ್ಕಬಳ್ಳಾಪುರದ ಹೂ (Flower) ಬೆಳೆಗಾರ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೂಗಳನ್ನು ಟ್ರ್ಯಾಕ್ಟರ್​​ಗೆ ತುಂಬಿ ತಿಪ್ಪೆ ಗುಂಡಿಗೆ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೂವು ಮಾರುಕಟ್ಟೆಗೆ ಖ್ಯಾತಿಯಾಗಿರುವ ಚಿಕ್ಕಬಳ್ಳಾಪುರದಲ್ಲಿ, ಹೂವು ಬೆಳೆಗಾರರೇ ಹೆಚ್ಚಾಗಿದ್ದಾರೆ. ಪ್ರಸ್ತುತ 12,500 ಎಕರೆಗಳಲ್ಲಿ ಹೂವು ಬೆಳೆಯಲಾಗುತ್ತಿದೆ. ಹೀಗೆ ಬೆಳೆದ ಹೂವನ್ನು ಮಾರಾಟ ಮಾಡಲು ರೈತರು, ಚಿಕ್ಕಬಳ್ಳಾಪುರದ ಹೂ ಮಾರುಕಟ್ಟೆಗೆ ಬಂದಿದ್ದರು. ಆದ್ರೆ ಹೂ ಕೊಂಡುಕೊಳ್ಳುವ ದೊಡ್ಡ ದೊಡ್ಡ ವರ್ತಕರು ಬಂದಿರಲಿಲ್ಲ. ಕಾವೇರಿ ನದಿ ನೀರು ಹಂಚಿಕೆ ವಿವಾದ ಹಿನ್ನಲೆ ಇಂದು ಬೆಂಗಳೂರು ಬಂದ್ ಮಾಡಿದ ಕಾರಣ ಬೆಂಗಳೂರಿನ ವರ್ತಕರು ಮಾರುಟ್ಟೆಗೆ ಬಂದಿರಲಿಲ್ಲ, ಇದ್ರಿಂದ ಹೂಗಳನ್ನು ಕೊಂಡುಕೊಳ್ಳುವವರು ಯಾರು ಇಲ್ಲದೆ ಹೂಗಳು ತಿಪ್ಪೆ ಪಾಲಾದವು.

ರಾಶಿ ರಾಶಿ ಸೇವಂತಿ, ಚೆಂಡೂ ಹೂ, ರೋಜ್ ಸೇರಿದಂತೆ ವಿವಿಧ ಹೂಗಳನ್ನು ಯಾರು ಕೊಂಡುಕೊಳ್ಳದ ಕಾರಣ, ರೈತರು ಟ್ರ್ಯಾಕ್ಟರ್ ಟ್ರಾಲಿಗೆ ತುಂಬಿ ತಿಪ್ಪೆ ಗುಂಡಿಗೆ ಹಾಕುತ್ತಿದ್ದ ದೃಶ್ಯ ಮನಕಲಕುವಂತಿತ್ತು.

ಚಿಕ್ಕಬಳ್ಳಾಪುರದಿಂದ ರಾಜಧಾನಿ ಬೆಂಗಳೂರಿಗೆ ಪ್ರತಿದಿನ 10 ಟನ್ ಗಿಂತಲೂ ಹೆಚ್ಚು ಹೂ ಮಾರಾಟವಾಗ್ತಿದೆ. ಆದ್ರೆ ಇಂದು ಬೆಂಗಳೂರು ಬಂದ್ ಮಾಡಿದ ಕಾರಣ ವ್ಯಾಪಾರಿಗಳು ಚಿಕ್ಕಬಳ್ಳಾಪುರದತ್ತ ಮುಖ ಮಾಡಿರಲಿಲ್ಲ. ಇದ್ರಿಂದ ಹೂವು ಬೆಳೆಗಾರರು ಅಸಮಧಾನ ವ್ಯಕ್ತಪಡಿಸಿದ್ರು.

ಇದನ್ನೂ ಓದಿ: ಬೆಂಗಳೂರು ಬಂದ್ ಶಾಂತಿಯುತ; ಬಹುತೇಕ ಪ್ರದೇಶಗಳಲ್ಲಿ ಜನಜೀವನ ಸಹಜ ಸ್ಥಿತಿಯತ್ತ

ಈ ಮಧ್ಯೆ, ಬೆಂಗಳೂರು ಬಂದ್ ಬಹುತೇಕ ಶಾಂತಿಯುತವಾಗಿ ಕೊನೆಗೊಂಡಿತು. ಜಯನಗರದಲ್ಲಿ ಹೋಟೆಲೊಂದರ ಮೇಲೆ ದಾಳಿ ನಡೆದ ಘಟನೆ ಬಿಟ್ಟರೆ ಉಳಿದಂತೆ ಬಹುತೇಕ ಬಂದ್ ಯಶಸ್ವಿಯಾಯಿತು. ಸಂಜೆ ವೇಳೆಗೆ ಬೆಂಗಳೂರು ನಗರ ಸಹಜ ಸ್ಥಿತಿಗೆ ಮರಳಿತು. ಆದರೆ, ಕೆಎಎಸ್​ಆರ್​ಟಿಸಿ ಹಾಗೂ ಬಿಎಂಟಿಸಿ ಬಸ್​ಗಳು ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿದ್ದವು.

ರಾಜ್ಯಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​