AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಬಂದ್ ಪರಿಣಾಮ; ಚಿಕ್ಕಬಳ್ಳಾಪುರದಲ್ಲಿ ಕುಸಿದ ಹೂ ಬೆಲೆ, ಹೂಗಳನ್ನು ತಿಪ್ಪೆ ಗುಂಡಿಗೆ ಸುರಿದ ರೈತರು

ಬೆಳೆದ ಹೂವನ್ನು ಮಾರಾಟ ಮಾಡಲು ರೈತರು, ಚಿಕ್ಕಬಳ್ಳಾಪುರದ ಹೂ ಮಾರುಕಟ್ಟೆಗೆ ಬಂದಿದ್ದರು. ಆದ್ರೆ ಹೂ ಕೊಂಡುಕೊಳ್ಳುವ ದೊಡ್ಡ ದೊಡ್ಡ ವರ್ತಕರು ಬಂದಿರಲಿಲ್ಲ. ಕಾವೇರಿ ನದಿ ನೀರು ಹಂಚಿಕೆ ವಿವಾದ ಹಿನ್ನಲೆ ಇಂದು ಬೆಂಗಳೂರು ಬಂದ್ ಮಾಡಿದ ಕಾರಣ ಬೆಂಗಳೂರಿನ ವರ್ತಕರು ಮಾರುಟ್ಟೆಗೆ ಬಂದಿರಲಿಲ್ಲ, ಇದ್ರಿಂದ ಹೂಗಳನ್ನು ಕೊಂಡುಕೊಳ್ಳುವವರು ಯಾರು ಇಲ್ಲದೆ ಹೂಗಳು ತಿಪ್ಪೆ ಪಾಲಾದವು.

ಬೆಂಗಳೂರು ಬಂದ್ ಪರಿಣಾಮ; ಚಿಕ್ಕಬಳ್ಳಾಪುರದಲ್ಲಿ ಕುಸಿದ ಹೂ ಬೆಲೆ, ಹೂಗಳನ್ನು ತಿಪ್ಪೆ ಗುಂಡಿಗೆ ಸುರಿದ ರೈತರು
ಹೂಗಳನ್ನು ತಿಪ್ಪೆ ಗುಂಡಿಗೆ ಸುರಿದ ರೈತ
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: Ganapathi Sharma

Updated on: Sep 26, 2023 | 6:33 PM

ಚಿಕ್ಕಬಳ್ಳಾಪುರ, ಸೆಪ್ಟೆಂಬರ್ 26: ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ರೈತರು ಪುಷ್ಪೋದ್ಯಮವನ್ನೇ ನಂಬಿಕೊಂಡು ಸ್ವಾಭಿಮಾನದ ಬದುಕು ಕಂಡವರು. ಪುಷ್ಪೋದ್ಯಮದಲ್ಲಿ ಏನೇ ಏರುಪೇರಾದರೂ ಸಂಕಷ್ಟಕ್ಕೆ ಸಿಲುಕುತ್ತಾರೆ. ಇನ್ನೂ ಕಾವೇರಿ ನದಿ ನೀರು ಹಂಚಿಕೆ ವಿವಾದ ಹಿನ್ನಲೆ ಇಂದು ಬೆಂಗಳೂರು ಬಂದ್ (Bangalore Bandh) ಮಾಡಿದ ಕಾರಣ ಚಿಕ್ಕಬಳ್ಳಾಪುರದ ಹೂ (Flower) ಬೆಳೆಗಾರ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೂಗಳನ್ನು ಟ್ರ್ಯಾಕ್ಟರ್​​ಗೆ ತುಂಬಿ ತಿಪ್ಪೆ ಗುಂಡಿಗೆ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೂವು ಮಾರುಕಟ್ಟೆಗೆ ಖ್ಯಾತಿಯಾಗಿರುವ ಚಿಕ್ಕಬಳ್ಳಾಪುರದಲ್ಲಿ, ಹೂವು ಬೆಳೆಗಾರರೇ ಹೆಚ್ಚಾಗಿದ್ದಾರೆ. ಪ್ರಸ್ತುತ 12,500 ಎಕರೆಗಳಲ್ಲಿ ಹೂವು ಬೆಳೆಯಲಾಗುತ್ತಿದೆ. ಹೀಗೆ ಬೆಳೆದ ಹೂವನ್ನು ಮಾರಾಟ ಮಾಡಲು ರೈತರು, ಚಿಕ್ಕಬಳ್ಳಾಪುರದ ಹೂ ಮಾರುಕಟ್ಟೆಗೆ ಬಂದಿದ್ದರು. ಆದ್ರೆ ಹೂ ಕೊಂಡುಕೊಳ್ಳುವ ದೊಡ್ಡ ದೊಡ್ಡ ವರ್ತಕರು ಬಂದಿರಲಿಲ್ಲ. ಕಾವೇರಿ ನದಿ ನೀರು ಹಂಚಿಕೆ ವಿವಾದ ಹಿನ್ನಲೆ ಇಂದು ಬೆಂಗಳೂರು ಬಂದ್ ಮಾಡಿದ ಕಾರಣ ಬೆಂಗಳೂರಿನ ವರ್ತಕರು ಮಾರುಟ್ಟೆಗೆ ಬಂದಿರಲಿಲ್ಲ, ಇದ್ರಿಂದ ಹೂಗಳನ್ನು ಕೊಂಡುಕೊಳ್ಳುವವರು ಯಾರು ಇಲ್ಲದೆ ಹೂಗಳು ತಿಪ್ಪೆ ಪಾಲಾದವು.

ರಾಶಿ ರಾಶಿ ಸೇವಂತಿ, ಚೆಂಡೂ ಹೂ, ರೋಜ್ ಸೇರಿದಂತೆ ವಿವಿಧ ಹೂಗಳನ್ನು ಯಾರು ಕೊಂಡುಕೊಳ್ಳದ ಕಾರಣ, ರೈತರು ಟ್ರ್ಯಾಕ್ಟರ್ ಟ್ರಾಲಿಗೆ ತುಂಬಿ ತಿಪ್ಪೆ ಗುಂಡಿಗೆ ಹಾಕುತ್ತಿದ್ದ ದೃಶ್ಯ ಮನಕಲಕುವಂತಿತ್ತು.

ಚಿಕ್ಕಬಳ್ಳಾಪುರದಿಂದ ರಾಜಧಾನಿ ಬೆಂಗಳೂರಿಗೆ ಪ್ರತಿದಿನ 10 ಟನ್ ಗಿಂತಲೂ ಹೆಚ್ಚು ಹೂ ಮಾರಾಟವಾಗ್ತಿದೆ. ಆದ್ರೆ ಇಂದು ಬೆಂಗಳೂರು ಬಂದ್ ಮಾಡಿದ ಕಾರಣ ವ್ಯಾಪಾರಿಗಳು ಚಿಕ್ಕಬಳ್ಳಾಪುರದತ್ತ ಮುಖ ಮಾಡಿರಲಿಲ್ಲ. ಇದ್ರಿಂದ ಹೂವು ಬೆಳೆಗಾರರು ಅಸಮಧಾನ ವ್ಯಕ್ತಪಡಿಸಿದ್ರು.

ಇದನ್ನೂ ಓದಿ: ಬೆಂಗಳೂರು ಬಂದ್ ಶಾಂತಿಯುತ; ಬಹುತೇಕ ಪ್ರದೇಶಗಳಲ್ಲಿ ಜನಜೀವನ ಸಹಜ ಸ್ಥಿತಿಯತ್ತ

ಈ ಮಧ್ಯೆ, ಬೆಂಗಳೂರು ಬಂದ್ ಬಹುತೇಕ ಶಾಂತಿಯುತವಾಗಿ ಕೊನೆಗೊಂಡಿತು. ಜಯನಗರದಲ್ಲಿ ಹೋಟೆಲೊಂದರ ಮೇಲೆ ದಾಳಿ ನಡೆದ ಘಟನೆ ಬಿಟ್ಟರೆ ಉಳಿದಂತೆ ಬಹುತೇಕ ಬಂದ್ ಯಶಸ್ವಿಯಾಯಿತು. ಸಂಜೆ ವೇಳೆಗೆ ಬೆಂಗಳೂರು ನಗರ ಸಹಜ ಸ್ಥಿತಿಗೆ ಮರಳಿತು. ಆದರೆ, ಕೆಎಎಸ್​ಆರ್​ಟಿಸಿ ಹಾಗೂ ಬಿಎಂಟಿಸಿ ಬಸ್​ಗಳು ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿದ್ದವು.

ರಾಜ್ಯಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಹನುಮಾನ್ ಭಕ್ತರೊಬ್ಬರ ಅಂತ್ಯಕ್ರಿಯೆಗೆ ಬಂದ ಕೋತಿ
ಹನುಮಾನ್ ಭಕ್ತರೊಬ್ಬರ ಅಂತ್ಯಕ್ರಿಯೆಗೆ ಬಂದ ಕೋತಿ
ಶ್ರೀಕಾಂತ್ ಮತ್ತವನ ತಂಡದಿಂದ ಮಚ್ಚಿನಿಂದ ಹಲ್ಲೆ, ಹಂತಕರು ಪರಾರಿ
ಶ್ರೀಕಾಂತ್ ಮತ್ತವನ ತಂಡದಿಂದ ಮಚ್ಚಿನಿಂದ ಹಲ್ಲೆ, ಹಂತಕರು ಪರಾರಿ
ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ